Homeಮುಖಪುಟ100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ 100ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಅಪಾರ ಜೀವಹಾನಿ ಮತ್ತು ಭಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯದ ಎಚ್ಚರಿಕೆ, ಪ್ರಾದೇಶಿಕ ಘರ್ಷಣೆಯ ಭೀತಿ ಮಧ್ಯೆ ಇದೀಗ ಯುದ್ಧವನ್ನು ಮತ್ತೆ ಮುಂದುವರಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ.

ಗಾಝಾ ಮೇಲಿನ ಮಿಲಿಟರಿಯ ಆಕ್ರಮಣದ ವಿರುದ್ಧ ತಡೆಯಾಜ್ಞೆಯ ಕುರಿತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಕ್ಕೆ ಎದುರು ನೋಡುತ್ತಿರುವಾಗ ಇಸ್ರೇಲ್‌ ಒಟ್ಟು ವಿಜಯದವರೆಗೆ ಯುದ್ಧ ಮುಂದುವರಿಸುವ ಪ್ರತಿಜ್ಞೆಯನ್ನು ಮಾಡಿದೆ.

ಅ.7ರಂದು ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ದಾಳಿಯನ್ನು ಪ್ರಾರಂಭಿಸಿದ ಬಳಿಕ 23,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸಂಪೂರ್ಣ ವಿಜಯದವರೆಗೆ, ನಾವು ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ ಯುದ್ಧವನ್ನು ಮುಂದುವರೆಸುತ್ತೇವೆ ಎಂದು ನೆತನ್ಯಾಹು ದೂರದರ್ಶನದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಮಾಸ್‌ನ್ನು ನಿರ್ಮೂಲನೆ ಮಾಡುವುದು, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ವಾಪಾಸ್ಸು ಕರೆಸಿಕೊಳ್ಳುವುದು ಮತ್ತು ಗಾಝಾ ಮೇಲೆ ಎಂದಿಗೂ ಮತ್ತೆ ಇಸ್ರೇಲ್‌ ದಾಳಿ ನಡೆಸದಂತೆ ಖಾತ್ರಿಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ಮತ್ತು ಯೆಮೆನ್‌ನ ಹೌತಿಗಳು ಪ್ಯಾಲೆಸ್ತೀನಿಯನ್ನರಿಗೆ ಬೆಂಬಲಿಸಿರುವುದು ವ್ಯಾಪಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿವೆ. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಹೌತಿ ದಾಳಿಗಳಿಗೆ ಪ್ರತಿಯಾಗಿ ಯೆಮೆನ್‌ನಲ್ಲಿನ ಹೌತಿ ಕೇಂದ್ರಿತ ಪ್ರದೇಶಗಳ ಮೇಲೆ ಅಮೆರಿಕ ಗುರುವಾರ ಮತ್ತು ಶುಕ್ರವಾರ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದೇ ವೇಳೆ ಇಸ್ರೇಲ್-ಲೆಬನಾನ್ ಗಡಿಯಾದ್ಯಂತ ಘರ್ಷಣೆಗಳು ಮುಂದುವರಿದಿದೆ.

ಭಾನುವಾರ ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿಯು ಉತ್ತರ ಇಸ್ರೇಲ್‌ನ ಮನೆಯೊಂದಕ್ಕೆ ಬಡಿದಿದೆ. ಘಟನೆಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಲೆಬನಾನ್‌ನಲ್ಲಿನ ಹೆಜ್ಬೊಲ್ಲಾ ಕೇಂದ್ರಗಳ ಮೇಲೆ ತನ್ನ ಫೈಟರ್ ಜೆಟ್‌ಗಳು ದಾಳಿ ಮಾಡಿದೆ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

ಉತ್ತರದ ಗಡಿ ಪ್ರದೇಶಗಳಿಂದ ಸಾವಿರಾರು ಇಸ್ರೇಲ್‌ ನಾಗರಿಕರನ್ನು ಸ್ಥಳಾಂತರಿಸಲಾಗಿದ್ದು, ಗಡಿ ಪ್ರದೇಶದಿಂದ ಸಾವಿರಾರು ಲೆಬನಾನಿನ ನಾಗರಿಕರು ಕೂಡ ನಿವೇಶನಗಳನ್ನು ಬಿಟ್ಟು ತೆರಳಿದ್ದಾರೆ. ಭಾನುವಾರ ಹಿಜ್ಬುಲ್ಲಾದ ನಾಯಕ ಹಸನ್ ನಸ್ರಲ್ಲಾ ಅವರು ಗಾಝಾ ಮೇಲೆ ಇಸ್ರೇಲ್‌ ಯುದ್ಧ 99 ದಿನಕ್ಕೆ ಕಾಲಿಡುತ್ತಿದ್ದಂತೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ. ನಾವು ಅದಕ್ಕೆ ಹೆದರುವುದಿಲ್ಲ ಎಂದು ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇಸ್ರೇಲ್‌ ಗಾಝಾ ಯುದ್ಧ ಇದೀಗ ನಿಧಾನವಾಗಿ ಪ್ರಾದೇಶಿಕ ಘರ್ಷಣೆಯಾಗಿ ಮಾರ್ಪಟ್ಟಿದೆ.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...