Homeಮುಖಪುಟ100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ 100ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಅಪಾರ ಜೀವಹಾನಿ ಮತ್ತು ಭಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯದ ಎಚ್ಚರಿಕೆ, ಪ್ರಾದೇಶಿಕ ಘರ್ಷಣೆಯ ಭೀತಿ ಮಧ್ಯೆ ಇದೀಗ ಯುದ್ಧವನ್ನು ಮತ್ತೆ ಮುಂದುವರಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ.

ಗಾಝಾ ಮೇಲಿನ ಮಿಲಿಟರಿಯ ಆಕ್ರಮಣದ ವಿರುದ್ಧ ತಡೆಯಾಜ್ಞೆಯ ಕುರಿತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಕ್ಕೆ ಎದುರು ನೋಡುತ್ತಿರುವಾಗ ಇಸ್ರೇಲ್‌ ಒಟ್ಟು ವಿಜಯದವರೆಗೆ ಯುದ್ಧ ಮುಂದುವರಿಸುವ ಪ್ರತಿಜ್ಞೆಯನ್ನು ಮಾಡಿದೆ.

ಅ.7ರಂದು ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ದಾಳಿಯನ್ನು ಪ್ರಾರಂಭಿಸಿದ ಬಳಿಕ 23,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸಂಪೂರ್ಣ ವಿಜಯದವರೆಗೆ, ನಾವು ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ ಯುದ್ಧವನ್ನು ಮುಂದುವರೆಸುತ್ತೇವೆ ಎಂದು ನೆತನ್ಯಾಹು ದೂರದರ್ಶನದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಮಾಸ್‌ನ್ನು ನಿರ್ಮೂಲನೆ ಮಾಡುವುದು, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ವಾಪಾಸ್ಸು ಕರೆಸಿಕೊಳ್ಳುವುದು ಮತ್ತು ಗಾಝಾ ಮೇಲೆ ಎಂದಿಗೂ ಮತ್ತೆ ಇಸ್ರೇಲ್‌ ದಾಳಿ ನಡೆಸದಂತೆ ಖಾತ್ರಿಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ಮತ್ತು ಯೆಮೆನ್‌ನ ಹೌತಿಗಳು ಪ್ಯಾಲೆಸ್ತೀನಿಯನ್ನರಿಗೆ ಬೆಂಬಲಿಸಿರುವುದು ವ್ಯಾಪಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿವೆ. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಹೌತಿ ದಾಳಿಗಳಿಗೆ ಪ್ರತಿಯಾಗಿ ಯೆಮೆನ್‌ನಲ್ಲಿನ ಹೌತಿ ಕೇಂದ್ರಿತ ಪ್ರದೇಶಗಳ ಮೇಲೆ ಅಮೆರಿಕ ಗುರುವಾರ ಮತ್ತು ಶುಕ್ರವಾರ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದೇ ವೇಳೆ ಇಸ್ರೇಲ್-ಲೆಬನಾನ್ ಗಡಿಯಾದ್ಯಂತ ಘರ್ಷಣೆಗಳು ಮುಂದುವರಿದಿದೆ.

ಭಾನುವಾರ ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿಯು ಉತ್ತರ ಇಸ್ರೇಲ್‌ನ ಮನೆಯೊಂದಕ್ಕೆ ಬಡಿದಿದೆ. ಘಟನೆಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಲೆಬನಾನ್‌ನಲ್ಲಿನ ಹೆಜ್ಬೊಲ್ಲಾ ಕೇಂದ್ರಗಳ ಮೇಲೆ ತನ್ನ ಫೈಟರ್ ಜೆಟ್‌ಗಳು ದಾಳಿ ಮಾಡಿದೆ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

ಉತ್ತರದ ಗಡಿ ಪ್ರದೇಶಗಳಿಂದ ಸಾವಿರಾರು ಇಸ್ರೇಲ್‌ ನಾಗರಿಕರನ್ನು ಸ್ಥಳಾಂತರಿಸಲಾಗಿದ್ದು, ಗಡಿ ಪ್ರದೇಶದಿಂದ ಸಾವಿರಾರು ಲೆಬನಾನಿನ ನಾಗರಿಕರು ಕೂಡ ನಿವೇಶನಗಳನ್ನು ಬಿಟ್ಟು ತೆರಳಿದ್ದಾರೆ. ಭಾನುವಾರ ಹಿಜ್ಬುಲ್ಲಾದ ನಾಯಕ ಹಸನ್ ನಸ್ರಲ್ಲಾ ಅವರು ಗಾಝಾ ಮೇಲೆ ಇಸ್ರೇಲ್‌ ಯುದ್ಧ 99 ದಿನಕ್ಕೆ ಕಾಲಿಡುತ್ತಿದ್ದಂತೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ. ನಾವು ಅದಕ್ಕೆ ಹೆದರುವುದಿಲ್ಲ ಎಂದು ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇಸ್ರೇಲ್‌ ಗಾಝಾ ಯುದ್ಧ ಇದೀಗ ನಿಧಾನವಾಗಿ ಪ್ರಾದೇಶಿಕ ಘರ್ಷಣೆಯಾಗಿ ಮಾರ್ಪಟ್ಟಿದೆ.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...