Homeಮುಖಪುಟ100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ 100ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಅಪಾರ ಜೀವಹಾನಿ ಮತ್ತು ಭಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯದ ಎಚ್ಚರಿಕೆ, ಪ್ರಾದೇಶಿಕ ಘರ್ಷಣೆಯ ಭೀತಿ ಮಧ್ಯೆ ಇದೀಗ ಯುದ್ಧವನ್ನು ಮತ್ತೆ ಮುಂದುವರಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ.

ಗಾಝಾ ಮೇಲಿನ ಮಿಲಿಟರಿಯ ಆಕ್ರಮಣದ ವಿರುದ್ಧ ತಡೆಯಾಜ್ಞೆಯ ಕುರಿತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಕ್ಕೆ ಎದುರು ನೋಡುತ್ತಿರುವಾಗ ಇಸ್ರೇಲ್‌ ಒಟ್ಟು ವಿಜಯದವರೆಗೆ ಯುದ್ಧ ಮುಂದುವರಿಸುವ ಪ್ರತಿಜ್ಞೆಯನ್ನು ಮಾಡಿದೆ.

ಅ.7ರಂದು ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ದಾಳಿಯನ್ನು ಪ್ರಾರಂಭಿಸಿದ ಬಳಿಕ 23,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸಂಪೂರ್ಣ ವಿಜಯದವರೆಗೆ, ನಾವು ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ ಯುದ್ಧವನ್ನು ಮುಂದುವರೆಸುತ್ತೇವೆ ಎಂದು ನೆತನ್ಯಾಹು ದೂರದರ್ಶನದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಮಾಸ್‌ನ್ನು ನಿರ್ಮೂಲನೆ ಮಾಡುವುದು, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ವಾಪಾಸ್ಸು ಕರೆಸಿಕೊಳ್ಳುವುದು ಮತ್ತು ಗಾಝಾ ಮೇಲೆ ಎಂದಿಗೂ ಮತ್ತೆ ಇಸ್ರೇಲ್‌ ದಾಳಿ ನಡೆಸದಂತೆ ಖಾತ್ರಿಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ಮತ್ತು ಯೆಮೆನ್‌ನ ಹೌತಿಗಳು ಪ್ಯಾಲೆಸ್ತೀನಿಯನ್ನರಿಗೆ ಬೆಂಬಲಿಸಿರುವುದು ವ್ಯಾಪಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿವೆ. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಹೌತಿ ದಾಳಿಗಳಿಗೆ ಪ್ರತಿಯಾಗಿ ಯೆಮೆನ್‌ನಲ್ಲಿನ ಹೌತಿ ಕೇಂದ್ರಿತ ಪ್ರದೇಶಗಳ ಮೇಲೆ ಅಮೆರಿಕ ಗುರುವಾರ ಮತ್ತು ಶುಕ್ರವಾರ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದೇ ವೇಳೆ ಇಸ್ರೇಲ್-ಲೆಬನಾನ್ ಗಡಿಯಾದ್ಯಂತ ಘರ್ಷಣೆಗಳು ಮುಂದುವರಿದಿದೆ.

ಭಾನುವಾರ ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿಯು ಉತ್ತರ ಇಸ್ರೇಲ್‌ನ ಮನೆಯೊಂದಕ್ಕೆ ಬಡಿದಿದೆ. ಘಟನೆಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಲೆಬನಾನ್‌ನಲ್ಲಿನ ಹೆಜ್ಬೊಲ್ಲಾ ಕೇಂದ್ರಗಳ ಮೇಲೆ ತನ್ನ ಫೈಟರ್ ಜೆಟ್‌ಗಳು ದಾಳಿ ಮಾಡಿದೆ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

ಉತ್ತರದ ಗಡಿ ಪ್ರದೇಶಗಳಿಂದ ಸಾವಿರಾರು ಇಸ್ರೇಲ್‌ ನಾಗರಿಕರನ್ನು ಸ್ಥಳಾಂತರಿಸಲಾಗಿದ್ದು, ಗಡಿ ಪ್ರದೇಶದಿಂದ ಸಾವಿರಾರು ಲೆಬನಾನಿನ ನಾಗರಿಕರು ಕೂಡ ನಿವೇಶನಗಳನ್ನು ಬಿಟ್ಟು ತೆರಳಿದ್ದಾರೆ. ಭಾನುವಾರ ಹಿಜ್ಬುಲ್ಲಾದ ನಾಯಕ ಹಸನ್ ನಸ್ರಲ್ಲಾ ಅವರು ಗಾಝಾ ಮೇಲೆ ಇಸ್ರೇಲ್‌ ಯುದ್ಧ 99 ದಿನಕ್ಕೆ ಕಾಲಿಡುತ್ತಿದ್ದಂತೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ. ನಾವು ಅದಕ್ಕೆ ಹೆದರುವುದಿಲ್ಲ ಎಂದು ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇಸ್ರೇಲ್‌ ಗಾಝಾ ಯುದ್ಧ ಇದೀಗ ನಿಧಾನವಾಗಿ ಪ್ರಾದೇಶಿಕ ಘರ್ಷಣೆಯಾಗಿ ಮಾರ್ಪಟ್ಟಿದೆ.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...