Homeಮುಖಪುಟ100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ 100ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಅಪಾರ ಜೀವಹಾನಿ ಮತ್ತು ಭಯದ ಬಗ್ಗೆ ಅಂತರಾಷ್ಟ್ರೀಯ ಸಮುದಾಯದ ಎಚ್ಚರಿಕೆ, ಪ್ರಾದೇಶಿಕ ಘರ್ಷಣೆಯ ಭೀತಿ ಮಧ್ಯೆ ಇದೀಗ ಯುದ್ಧವನ್ನು ಮತ್ತೆ ಮುಂದುವರಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ.

ಗಾಝಾ ಮೇಲಿನ ಮಿಲಿಟರಿಯ ಆಕ್ರಮಣದ ವಿರುದ್ಧ ತಡೆಯಾಜ್ಞೆಯ ಕುರಿತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಕ್ಕೆ ಎದುರು ನೋಡುತ್ತಿರುವಾಗ ಇಸ್ರೇಲ್‌ ಒಟ್ಟು ವಿಜಯದವರೆಗೆ ಯುದ್ಧ ಮುಂದುವರಿಸುವ ಪ್ರತಿಜ್ಞೆಯನ್ನು ಮಾಡಿದೆ.

ಅ.7ರಂದು ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ದಾಳಿಯನ್ನು ಪ್ರಾರಂಭಿಸಿದ ಬಳಿಕ 23,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸಂಪೂರ್ಣ ವಿಜಯದವರೆಗೆ, ನಾವು ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವವರೆಗೆ ಯುದ್ಧವನ್ನು ಮುಂದುವರೆಸುತ್ತೇವೆ ಎಂದು ನೆತನ್ಯಾಹು ದೂರದರ್ಶನದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಮಾಸ್‌ನ್ನು ನಿರ್ಮೂಲನೆ ಮಾಡುವುದು, ನಮ್ಮ ಎಲ್ಲಾ ಒತ್ತೆಯಾಳುಗಳನ್ನು ವಾಪಾಸ್ಸು ಕರೆಸಿಕೊಳ್ಳುವುದು ಮತ್ತು ಗಾಝಾ ಮೇಲೆ ಎಂದಿಗೂ ಮತ್ತೆ ಇಸ್ರೇಲ್‌ ದಾಳಿ ನಡೆಸದಂತೆ ಖಾತ್ರಿಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಲೆಬನಾನ್‌ನ ಹಿಜ್ಬುಲ್ಲಾ ಮತ್ತು ಯೆಮೆನ್‌ನ ಹೌತಿಗಳು ಪ್ಯಾಲೆಸ್ತೀನಿಯನ್ನರಿಗೆ ಬೆಂಬಲಿಸಿರುವುದು ವ್ಯಾಪಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿವೆ. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಹೌತಿ ದಾಳಿಗಳಿಗೆ ಪ್ರತಿಯಾಗಿ ಯೆಮೆನ್‌ನಲ್ಲಿನ ಹೌತಿ ಕೇಂದ್ರಿತ ಪ್ರದೇಶಗಳ ಮೇಲೆ ಅಮೆರಿಕ ಗುರುವಾರ ಮತ್ತು ಶುಕ್ರವಾರ ವೈಮಾನಿಕ ದಾಳಿಗಳನ್ನು ನಡೆಸಿದೆ. ಇದೇ ವೇಳೆ ಇಸ್ರೇಲ್-ಲೆಬನಾನ್ ಗಡಿಯಾದ್ಯಂತ ಘರ್ಷಣೆಗಳು ಮುಂದುವರಿದಿದೆ.

ಭಾನುವಾರ ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿಯು ಉತ್ತರ ಇಸ್ರೇಲ್‌ನ ಮನೆಯೊಂದಕ್ಕೆ ಬಡಿದಿದೆ. ಘಟನೆಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಲೆಬನಾನ್‌ನಲ್ಲಿನ ಹೆಜ್ಬೊಲ್ಲಾ ಕೇಂದ್ರಗಳ ಮೇಲೆ ತನ್ನ ಫೈಟರ್ ಜೆಟ್‌ಗಳು ದಾಳಿ ಮಾಡಿದೆ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಇಸ್ರೇಲ್‌ ಮಿಲಿಟರಿ ಹೇಳಿದೆ.

ಉತ್ತರದ ಗಡಿ ಪ್ರದೇಶಗಳಿಂದ ಸಾವಿರಾರು ಇಸ್ರೇಲ್‌ ನಾಗರಿಕರನ್ನು ಸ್ಥಳಾಂತರಿಸಲಾಗಿದ್ದು, ಗಡಿ ಪ್ರದೇಶದಿಂದ ಸಾವಿರಾರು ಲೆಬನಾನಿನ ನಾಗರಿಕರು ಕೂಡ ನಿವೇಶನಗಳನ್ನು ಬಿಟ್ಟು ತೆರಳಿದ್ದಾರೆ. ಭಾನುವಾರ ಹಿಜ್ಬುಲ್ಲಾದ ನಾಯಕ ಹಸನ್ ನಸ್ರಲ್ಲಾ ಅವರು ಗಾಝಾ ಮೇಲೆ ಇಸ್ರೇಲ್‌ ಯುದ್ಧ 99 ದಿನಕ್ಕೆ ಕಾಲಿಡುತ್ತಿದ್ದಂತೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ. ನಾವು ಅದಕ್ಕೆ ಹೆದರುವುದಿಲ್ಲ ಎಂದು ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇಸ್ರೇಲ್‌ ಗಾಝಾ ಯುದ್ಧ ಇದೀಗ ನಿಧಾನವಾಗಿ ಪ್ರಾದೇಶಿಕ ಘರ್ಷಣೆಯಾಗಿ ಮಾರ್ಪಟ್ಟಿದೆ.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...