Homeಅಂಕಣಗಳುಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

- Advertisement -
- Advertisement -

ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದ ಮಹಾಸ್ಫೋಟಕ್ಕೆ ಭೂಮಂಡಲ ಸಾಕ್ಷಿಯಾಗಿದೆ. ಮಾಹಿತಿ ಅಥವಾ ಡೇಟಾವನ್ನು ಹೊಸ ಪ್ರಬಲ ಅಸ್ತ್ರ ಎಂದು ಬಣ್ಣಿಸಲಾಗುತ್ತಿದೆ. ಡೇಟಾವನ್ನು ನಿಯಂತ್ರಿಸುವಾತನೇ ಸರ್ವಶಕ್ತ ಎಂಬುದು ಈ ಯುಗದ ಹೊಸ ಸತ್ಯ.

ಚಿಂತಕರು, ತಂತ್ರಜ್ಞನಿಪುಣರು ಕೆಲವು ವರ್ಷಗಳಿಂದ ಪ್ರತಿಪಾದಿಸುತ್ತಾ ಬಂದಿರುವ ಈ ಅಂಶ ದಿನಗಳೆದಂತೆ ಮತ್ತಷ್ಟು ಗಟ್ಟಿಯಾಗಿ ಸ್ಫುಟವಾಗಿ ಹರಳುಗಟ್ಟತೊಡಗಿದೆ. ಜೊತೆಜೊತೆಗೆ ಸರ್ವಾಧಿಕಾರಗಳು, ಧ್ರುವೀಕರಣ ರಾಜಕಾರಣ ಬೇರಿಳಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ತಮ್ಮ ಮೇಲೆ ಪ್ರಯೋಗಿಸಲಾಗಿರುವ ಮಂಕುಬೂದಿಯನ್ನು ಜನಸಮುದಾಯಗಳು ಕೊಡವಿಕೊಳ್ಳದಿದ್ದರೆ ಈ ಅಪಾಯ ಕೈಮೀರಲಿದೆ ಮತ್ತು ಗಹಗಹಿಸಲಿದೆ. ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಈ ಸನ್ನಿವೇಶದಲ್ಲಿ ಇಸ್ರೇಲಿ ಮೂಲದ ಜಗತ್ಪ್ರಸಿದ್ಧ ಯುವ ಚಿಂತಕ ಯುವಾಲ್ ನೋವಾ ಹರಾರಿ ಅವರ ಕೆಳಕಂಡ ಚಿಂತನೆಗೆ ಕಿವಿಗೊಟ್ಟು ಧೇನಿಸಬೇಕಿದೆ.

ಹರಾರಿ ಹೇಳುತ್ತಾರೆ… ಆರಂಭದಲ್ಲಿ ಭೂವಿಸ್ತಾರ, ಆನಂತರ ಯಂತ್ರಗಳು, ಇದೀಗ ಡೇಟಾ ಬಹುದೊಡ್ಡ ಆಸ್ತಿಯೆಂದು ಪರಿಗಣಿಸಲಾಗಿದೆ. ಡೇಟಾವನ್ನು ನಿಯಂತ್ರಿಸುವವರು ಭಾರೀ ಜನಸಮೂಹಗಳನ್ನು ಮತ್ತು ಆ ಮೂಲಕ ಅಧಿಕಾರವನ್ನು ನಿಯಂತ್ರಿಸುತ್ತಾರೆ ಎನ್ನುವ ವಾದ ಊರ್ಜಿತಗೊಂಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾಗಿರುವ ಕ್ರಾಂತಿಯೇ ಉದಾರವಾದಿ ಜನತಂತ್ರದ ಪಾಲಿಗೆ ಬಲು ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಮಾಹಿತಿ ತಂತ್ರಜ್ಞಾನವು ಕಟಾವು ಮಾಡಿರುವ ಡೇಟಾದ ಮಹಾ ಇಳುವರಿಯು ಜನತಂತ್ರಗಳಿಗೆ ಶಕ್ತಿ ತುಂಬುವ ಬದಲು ಸರ್ವಾಧಿಕಾರಗಳ ಕೈ ಬಲಪಡಿಸಲಿದೆ

ಸರ್ವಾಧಿಕಾರಗಳು ತಮ್ಮ ಲಾಭಕ್ಕಾಗಿ ಎಲ್ಲ ಡೇಟಾವನ್ನು ಒಂದೆಡೆ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿವೆ. ತಂತ್ರಜ್ಞಾನ ಬೆಳೆದಂತೆಲ್ಲ ಅಪಾರ ಡೇಟಾವನ್ನು ಒಂದೆಡೆ ಸಂಸ್ಕರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸಲೀಸಾಗಿ ಹೋಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೀವತಂತ್ರಜ್ಞಾನ (ಐಟಿ ಮತ್ತು ಬಿಟಿ) ಒಂದರೊಡನೆ ಮತ್ತೊಂದು ವಿಲೀನಗೊಳ್ಳುವ ವಿದ್ಯಮಾನವು ’ಆಲ್ಗರಿದಮ್’ಗಳನ್ನು ಸೃಷ್ಟಿಸಿದೆ. ಈ ’ಆಲ್ಗರಿದಮ್’ಗಳು ವ್ಯಕ್ತಿಗಳ ಅನಿಸಿಕೆ ಆಶಯ ಆಯ್ಕೆಗಳನ್ನು ಖುದ್ದು ಅವರೇ ಅರಿತಿರುವುದಕ್ಕಿಂತ ಹೆಚ್ಚು ನಿಖರವಾಗಿ ನಿಚ್ಚಳವಾಗಿ ಅರಿಯಬಲ್ಲವು. ಸರ್ಕಾರದಂತಹ ಸಂಸ್ಥೆಗಳು ಈ ತಂತ್ರಜ್ಞಾನದ ಲಾಭ ಪಡೆದು ಜನಸಮುದಾಯಗಳ ಒಲವು ನಿಲುವುಗಳನ್ನು ಮುಂದಾಗಿಯೇ ಕಂಡುಕೊಳ್ಳಬಲ್ಲವು. ಆವರ ಭಾವನೆಗಳನ್ನು ತಮಗೆ ಬೇಕಾದಂತೆ ತಿದ್ದಿ ತೀಡಬಲ್ಲವು. ಉದಾಹರಣೆಗೆ ತನ್ನ ಜನರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಲಾರದ ಸರ್ವಾಧಿಕಾರಿಯೊಬ್ಬನು ತನ್ನ ಜನರು ತನ್ನನ್ನು ಪ್ರೀತಿಸುವಂತೆಯೂ ಪ್ರತಿಪಕ್ಷಗಳನ್ನು ದ್ವೇಷಿಸುವಂತೆಯೂ ಮಾಡಬಲ್ಲ. ಅಂತಹ ವಿರೋಧಾಭಾಸದ ಪರಿಸ್ಥಿತಿಯಲ್ಲಿ ಜನತಂತ್ರ ಉಳಿದು ಬೆಳೆಯಲಾರದು. ಅಂತಹ ವಾತಾವರಣದಲ್ಲಿ ಜನತಂತ್ರವು ಸರಿತಪ್ಪುಗಳನ್ನು ವಿವೇಚಿಸುವ ಮಾನವ ಆಲೋಚನಾ ಶಕ್ತಿಯ ಆಧಾರವನ್ನು ಕಳೆದುಕೊಳ್ಳುತ್ತದೆ. ಬುದ್ಧಿಯ ಜಾಗವನ್ನು ಭಾವುಕತೆ ಆವರಿಸುತ್ತದೆ. ನಮ್ಮ ಭಾವನೆಗಳನ್ನು ಹ್ಯಾಕ್ ಮಾಡಿ ಧ್ರುವೀಕರಣ ಮಾಡಿ ಜನತಂತ್ರವನ್ನು ನಾಶ ಮಾಡಲು ಬಳಸಿಕೊಳ್ಳಲಾಗುತ್ತದೆ. ಜನತಂತ್ರವು ಕೇವಲ ಒಂದು ಭಾವನಾತ್ಮಕ ಗೊಂಬೆಯಾಟ ಆಗಿಬಿಡುತ್ತದೆ.

ಇಂತಹ ಅಪಾಯವನ್ನು ತಪ್ಪಿಸಲು ಭಾರೀ ಡೇಟಾ ಒಂದೇ ಕಡೆ ಕೇಂದ್ರೀಕೃತ ಆಗುವುದನ್ನು ತಪ್ಪಿಸಬೇಕು. ಡೇಟಾ ನಿಯಂತ್ರಿಸುವವರು ನಮ್ಮ ಭಾವನೆಗಳನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ತಿದ್ದಿ ತೀಡಿಕೊಳ್ಳುವುದಕ್ಕೆ ಆಗ ಸಾಧ್ಯವಾಗುವುದಿಲ್ಲ.

ದೈನಂದಿನ ಗ್ರಾಹಕ ಸರಕು ಸರಂಜಾಮುಗಳನ್ನು ನಮಗೆ ಮಾರಾಟ ಮಾಡಲು ಮಾಹಿತಿ ತಂತ್ರಜ್ಞಾನದ ಆಲ್ಗರಿದಂ ವಿಧಾನದ ಪ್ರಯೋಗ ಈಗಾಗಲೆ ಜಾರಿಯಲ್ಲಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಜನತಂತ್ರದ ಶತ್ರುಗಳು ಇದೇ ವಿಧಾನವನ್ನು ಅನುಸರಿಸಿ ಭಯ, ದ್ವೇಷ ಹಾಗೂ ಒಣಪ್ರತಿಷ್ಠೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಇವುಗಳ ಮಾರಾಟ ಶೂನ್ಯದಲ್ಲಿ ಸಾಧ್ಯವಿಲ್ಲ. ಅವರು ಜನಸಮೂಹಗಳ ದೌರ್ಬಲ್ಯಗಳನ್ನು ಗುರುತಿಸಿ ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ತಮ್ಮ ದೌರ್ಬಲ್ಯಗಳು ಜನತಂತ್ರದ ಶತ್ರುಗಳ ಕೈಯಲ್ಲಿನ ಅಸ್ತ್ರವಾಗದಂತೆ ಜನಸಮೂಹಗಳು ಜಾಗ್ರತೆ ವಹಿಸಬೇಕು. ದೌರ್ಬಲ್ಯಗಳನ್ನು ಅರಿತು ಇಂತಹ ಎಚ್ಚರಿಕೆ ವಹಿಸುವುದು ಜನರನ್ನು ಫ್ಯಾಸಿಸ್ಟ್ ಕನ್ನಡಿಯಿಂದಲೂ ಕಾಪಾಡುತ್ತದೆ. ಫ್ಯಾಸಿಸಮ್ ನಮ್ಮ ಒಣಪ್ರತಿಷ್ಠೆಯಂತಹ ದೌರ್ಬಲ್ಯಗಳನ್ನು ಬಳಸಿಕೊಂಡು ಬೇರೂರುತ್ತದೆ. ನಾವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ನಮ್ಮನ್ನು ತೋರುತ್ತದೆ. ನಮ್ಮನ್ನು ನಾವು ಚೆನ್ನಾಗಿ ಬಲ್ಲೆವಾದರೆ ಈ ಮೋಹಪರವಶತೆಗೆ ಬಲಿ ಬೀಳುವುದು ಸಾಧ್ಯವಿಲ್ಲ. ಸರ್ವಾಧಿಕಾರಿಗಳು ನಿಮ್ಮ ಕಣ್ಣೆದುರಿಗೆ ಫ್ಯಾಸಿಸ್ಟ್ ಕನ್ನಡಿಯೊಂದನ್ನು ಇಡುತ್ತಾರೆ. ಆ ಕನ್ನಡಿಯು ನಿಮ್ಮ ಎಲ್ಲ ಕುರೂಪವನ್ನು ಅಡಗಿಸಿಟ್ಟು ನೀವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ತೋರಿಸುತ್ತದೆ. ನಿಮಗೆ ವಾಸ್ತವದಲ್ಲಿ ಇಲ್ಲದಸಲ್ಲದ ಪ್ರಾಮುಖ್ಯತೆಯನ್ನು ತೊಡಿಸುತ್ತದೆ. ಈ ಅವಾಸ್ತವಿಕ ಕನ್ನಡಿಯನ್ನು ಒಡೆಯಿರಿ….


ಇದನ್ನೂ ಓದಿ: ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...