Homeಅಂಕಣಗಳುಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

- Advertisement -
- Advertisement -

ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದ ಮಹಾಸ್ಫೋಟಕ್ಕೆ ಭೂಮಂಡಲ ಸಾಕ್ಷಿಯಾಗಿದೆ. ಮಾಹಿತಿ ಅಥವಾ ಡೇಟಾವನ್ನು ಹೊಸ ಪ್ರಬಲ ಅಸ್ತ್ರ ಎಂದು ಬಣ್ಣಿಸಲಾಗುತ್ತಿದೆ. ಡೇಟಾವನ್ನು ನಿಯಂತ್ರಿಸುವಾತನೇ ಸರ್ವಶಕ್ತ ಎಂಬುದು ಈ ಯುಗದ ಹೊಸ ಸತ್ಯ.

ಚಿಂತಕರು, ತಂತ್ರಜ್ಞನಿಪುಣರು ಕೆಲವು ವರ್ಷಗಳಿಂದ ಪ್ರತಿಪಾದಿಸುತ್ತಾ ಬಂದಿರುವ ಈ ಅಂಶ ದಿನಗಳೆದಂತೆ ಮತ್ತಷ್ಟು ಗಟ್ಟಿಯಾಗಿ ಸ್ಫುಟವಾಗಿ ಹರಳುಗಟ್ಟತೊಡಗಿದೆ. ಜೊತೆಜೊತೆಗೆ ಸರ್ವಾಧಿಕಾರಗಳು, ಧ್ರುವೀಕರಣ ರಾಜಕಾರಣ ಬೇರಿಳಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ತಮ್ಮ ಮೇಲೆ ಪ್ರಯೋಗಿಸಲಾಗಿರುವ ಮಂಕುಬೂದಿಯನ್ನು ಜನಸಮುದಾಯಗಳು ಕೊಡವಿಕೊಳ್ಳದಿದ್ದರೆ ಈ ಅಪಾಯ ಕೈಮೀರಲಿದೆ ಮತ್ತು ಗಹಗಹಿಸಲಿದೆ. ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಈ ಸನ್ನಿವೇಶದಲ್ಲಿ ಇಸ್ರೇಲಿ ಮೂಲದ ಜಗತ್ಪ್ರಸಿದ್ಧ ಯುವ ಚಿಂತಕ ಯುವಾಲ್ ನೋವಾ ಹರಾರಿ ಅವರ ಕೆಳಕಂಡ ಚಿಂತನೆಗೆ ಕಿವಿಗೊಟ್ಟು ಧೇನಿಸಬೇಕಿದೆ.

ಹರಾರಿ ಹೇಳುತ್ತಾರೆ… ಆರಂಭದಲ್ಲಿ ಭೂವಿಸ್ತಾರ, ಆನಂತರ ಯಂತ್ರಗಳು, ಇದೀಗ ಡೇಟಾ ಬಹುದೊಡ್ಡ ಆಸ್ತಿಯೆಂದು ಪರಿಗಣಿಸಲಾಗಿದೆ. ಡೇಟಾವನ್ನು ನಿಯಂತ್ರಿಸುವವರು ಭಾರೀ ಜನಸಮೂಹಗಳನ್ನು ಮತ್ತು ಆ ಮೂಲಕ ಅಧಿಕಾರವನ್ನು ನಿಯಂತ್ರಿಸುತ್ತಾರೆ ಎನ್ನುವ ವಾದ ಊರ್ಜಿತಗೊಂಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾಗಿರುವ ಕ್ರಾಂತಿಯೇ ಉದಾರವಾದಿ ಜನತಂತ್ರದ ಪಾಲಿಗೆ ಬಲು ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಮಾಹಿತಿ ತಂತ್ರಜ್ಞಾನವು ಕಟಾವು ಮಾಡಿರುವ ಡೇಟಾದ ಮಹಾ ಇಳುವರಿಯು ಜನತಂತ್ರಗಳಿಗೆ ಶಕ್ತಿ ತುಂಬುವ ಬದಲು ಸರ್ವಾಧಿಕಾರಗಳ ಕೈ ಬಲಪಡಿಸಲಿದೆ

ಸರ್ವಾಧಿಕಾರಗಳು ತಮ್ಮ ಲಾಭಕ್ಕಾಗಿ ಎಲ್ಲ ಡೇಟಾವನ್ನು ಒಂದೆಡೆ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿವೆ. ತಂತ್ರಜ್ಞಾನ ಬೆಳೆದಂತೆಲ್ಲ ಅಪಾರ ಡೇಟಾವನ್ನು ಒಂದೆಡೆ ಸಂಸ್ಕರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸಲೀಸಾಗಿ ಹೋಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೀವತಂತ್ರಜ್ಞಾನ (ಐಟಿ ಮತ್ತು ಬಿಟಿ) ಒಂದರೊಡನೆ ಮತ್ತೊಂದು ವಿಲೀನಗೊಳ್ಳುವ ವಿದ್ಯಮಾನವು ’ಆಲ್ಗರಿದಮ್’ಗಳನ್ನು ಸೃಷ್ಟಿಸಿದೆ. ಈ ’ಆಲ್ಗರಿದಮ್’ಗಳು ವ್ಯಕ್ತಿಗಳ ಅನಿಸಿಕೆ ಆಶಯ ಆಯ್ಕೆಗಳನ್ನು ಖುದ್ದು ಅವರೇ ಅರಿತಿರುವುದಕ್ಕಿಂತ ಹೆಚ್ಚು ನಿಖರವಾಗಿ ನಿಚ್ಚಳವಾಗಿ ಅರಿಯಬಲ್ಲವು. ಸರ್ಕಾರದಂತಹ ಸಂಸ್ಥೆಗಳು ಈ ತಂತ್ರಜ್ಞಾನದ ಲಾಭ ಪಡೆದು ಜನಸಮುದಾಯಗಳ ಒಲವು ನಿಲುವುಗಳನ್ನು ಮುಂದಾಗಿಯೇ ಕಂಡುಕೊಳ್ಳಬಲ್ಲವು. ಆವರ ಭಾವನೆಗಳನ್ನು ತಮಗೆ ಬೇಕಾದಂತೆ ತಿದ್ದಿ ತೀಡಬಲ್ಲವು. ಉದಾಹರಣೆಗೆ ತನ್ನ ಜನರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಲಾರದ ಸರ್ವಾಧಿಕಾರಿಯೊಬ್ಬನು ತನ್ನ ಜನರು ತನ್ನನ್ನು ಪ್ರೀತಿಸುವಂತೆಯೂ ಪ್ರತಿಪಕ್ಷಗಳನ್ನು ದ್ವೇಷಿಸುವಂತೆಯೂ ಮಾಡಬಲ್ಲ. ಅಂತಹ ವಿರೋಧಾಭಾಸದ ಪರಿಸ್ಥಿತಿಯಲ್ಲಿ ಜನತಂತ್ರ ಉಳಿದು ಬೆಳೆಯಲಾರದು. ಅಂತಹ ವಾತಾವರಣದಲ್ಲಿ ಜನತಂತ್ರವು ಸರಿತಪ್ಪುಗಳನ್ನು ವಿವೇಚಿಸುವ ಮಾನವ ಆಲೋಚನಾ ಶಕ್ತಿಯ ಆಧಾರವನ್ನು ಕಳೆದುಕೊಳ್ಳುತ್ತದೆ. ಬುದ್ಧಿಯ ಜಾಗವನ್ನು ಭಾವುಕತೆ ಆವರಿಸುತ್ತದೆ. ನಮ್ಮ ಭಾವನೆಗಳನ್ನು ಹ್ಯಾಕ್ ಮಾಡಿ ಧ್ರುವೀಕರಣ ಮಾಡಿ ಜನತಂತ್ರವನ್ನು ನಾಶ ಮಾಡಲು ಬಳಸಿಕೊಳ್ಳಲಾಗುತ್ತದೆ. ಜನತಂತ್ರವು ಕೇವಲ ಒಂದು ಭಾವನಾತ್ಮಕ ಗೊಂಬೆಯಾಟ ಆಗಿಬಿಡುತ್ತದೆ.

ಇಂತಹ ಅಪಾಯವನ್ನು ತಪ್ಪಿಸಲು ಭಾರೀ ಡೇಟಾ ಒಂದೇ ಕಡೆ ಕೇಂದ್ರೀಕೃತ ಆಗುವುದನ್ನು ತಪ್ಪಿಸಬೇಕು. ಡೇಟಾ ನಿಯಂತ್ರಿಸುವವರು ನಮ್ಮ ಭಾವನೆಗಳನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ತಿದ್ದಿ ತೀಡಿಕೊಳ್ಳುವುದಕ್ಕೆ ಆಗ ಸಾಧ್ಯವಾಗುವುದಿಲ್ಲ.

ದೈನಂದಿನ ಗ್ರಾಹಕ ಸರಕು ಸರಂಜಾಮುಗಳನ್ನು ನಮಗೆ ಮಾರಾಟ ಮಾಡಲು ಮಾಹಿತಿ ತಂತ್ರಜ್ಞಾನದ ಆಲ್ಗರಿದಂ ವಿಧಾನದ ಪ್ರಯೋಗ ಈಗಾಗಲೆ ಜಾರಿಯಲ್ಲಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಜನತಂತ್ರದ ಶತ್ರುಗಳು ಇದೇ ವಿಧಾನವನ್ನು ಅನುಸರಿಸಿ ಭಯ, ದ್ವೇಷ ಹಾಗೂ ಒಣಪ್ರತಿಷ್ಠೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಇವುಗಳ ಮಾರಾಟ ಶೂನ್ಯದಲ್ಲಿ ಸಾಧ್ಯವಿಲ್ಲ. ಅವರು ಜನಸಮೂಹಗಳ ದೌರ್ಬಲ್ಯಗಳನ್ನು ಗುರುತಿಸಿ ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ತಮ್ಮ ದೌರ್ಬಲ್ಯಗಳು ಜನತಂತ್ರದ ಶತ್ರುಗಳ ಕೈಯಲ್ಲಿನ ಅಸ್ತ್ರವಾಗದಂತೆ ಜನಸಮೂಹಗಳು ಜಾಗ್ರತೆ ವಹಿಸಬೇಕು. ದೌರ್ಬಲ್ಯಗಳನ್ನು ಅರಿತು ಇಂತಹ ಎಚ್ಚರಿಕೆ ವಹಿಸುವುದು ಜನರನ್ನು ಫ್ಯಾಸಿಸ್ಟ್ ಕನ್ನಡಿಯಿಂದಲೂ ಕಾಪಾಡುತ್ತದೆ. ಫ್ಯಾಸಿಸಮ್ ನಮ್ಮ ಒಣಪ್ರತಿಷ್ಠೆಯಂತಹ ದೌರ್ಬಲ್ಯಗಳನ್ನು ಬಳಸಿಕೊಂಡು ಬೇರೂರುತ್ತದೆ. ನಾವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ನಮ್ಮನ್ನು ತೋರುತ್ತದೆ. ನಮ್ಮನ್ನು ನಾವು ಚೆನ್ನಾಗಿ ಬಲ್ಲೆವಾದರೆ ಈ ಮೋಹಪರವಶತೆಗೆ ಬಲಿ ಬೀಳುವುದು ಸಾಧ್ಯವಿಲ್ಲ. ಸರ್ವಾಧಿಕಾರಿಗಳು ನಿಮ್ಮ ಕಣ್ಣೆದುರಿಗೆ ಫ್ಯಾಸಿಸ್ಟ್ ಕನ್ನಡಿಯೊಂದನ್ನು ಇಡುತ್ತಾರೆ. ಆ ಕನ್ನಡಿಯು ನಿಮ್ಮ ಎಲ್ಲ ಕುರೂಪವನ್ನು ಅಡಗಿಸಿಟ್ಟು ನೀವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ತೋರಿಸುತ್ತದೆ. ನಿಮಗೆ ವಾಸ್ತವದಲ್ಲಿ ಇಲ್ಲದಸಲ್ಲದ ಪ್ರಾಮುಖ್ಯತೆಯನ್ನು ತೊಡಿಸುತ್ತದೆ. ಈ ಅವಾಸ್ತವಿಕ ಕನ್ನಡಿಯನ್ನು ಒಡೆಯಿರಿ….


ಇದನ್ನೂ ಓದಿ: ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...