Homeಅಂಕಣಗಳುಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

- Advertisement -
- Advertisement -

ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದ ಮಹಾಸ್ಫೋಟಕ್ಕೆ ಭೂಮಂಡಲ ಸಾಕ್ಷಿಯಾಗಿದೆ. ಮಾಹಿತಿ ಅಥವಾ ಡೇಟಾವನ್ನು ಹೊಸ ಪ್ರಬಲ ಅಸ್ತ್ರ ಎಂದು ಬಣ್ಣಿಸಲಾಗುತ್ತಿದೆ. ಡೇಟಾವನ್ನು ನಿಯಂತ್ರಿಸುವಾತನೇ ಸರ್ವಶಕ್ತ ಎಂಬುದು ಈ ಯುಗದ ಹೊಸ ಸತ್ಯ.

ಚಿಂತಕರು, ತಂತ್ರಜ್ಞನಿಪುಣರು ಕೆಲವು ವರ್ಷಗಳಿಂದ ಪ್ರತಿಪಾದಿಸುತ್ತಾ ಬಂದಿರುವ ಈ ಅಂಶ ದಿನಗಳೆದಂತೆ ಮತ್ತಷ್ಟು ಗಟ್ಟಿಯಾಗಿ ಸ್ಫುಟವಾಗಿ ಹರಳುಗಟ್ಟತೊಡಗಿದೆ. ಜೊತೆಜೊತೆಗೆ ಸರ್ವಾಧಿಕಾರಗಳು, ಧ್ರುವೀಕರಣ ರಾಜಕಾರಣ ಬೇರಿಳಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ತಮ್ಮ ಮೇಲೆ ಪ್ರಯೋಗಿಸಲಾಗಿರುವ ಮಂಕುಬೂದಿಯನ್ನು ಜನಸಮುದಾಯಗಳು ಕೊಡವಿಕೊಳ್ಳದಿದ್ದರೆ ಈ ಅಪಾಯ ಕೈಮೀರಲಿದೆ ಮತ್ತು ಗಹಗಹಿಸಲಿದೆ. ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಈ ಸನ್ನಿವೇಶದಲ್ಲಿ ಇಸ್ರೇಲಿ ಮೂಲದ ಜಗತ್ಪ್ರಸಿದ್ಧ ಯುವ ಚಿಂತಕ ಯುವಾಲ್ ನೋವಾ ಹರಾರಿ ಅವರ ಕೆಳಕಂಡ ಚಿಂತನೆಗೆ ಕಿವಿಗೊಟ್ಟು ಧೇನಿಸಬೇಕಿದೆ.

ಹರಾರಿ ಹೇಳುತ್ತಾರೆ… ಆರಂಭದಲ್ಲಿ ಭೂವಿಸ್ತಾರ, ಆನಂತರ ಯಂತ್ರಗಳು, ಇದೀಗ ಡೇಟಾ ಬಹುದೊಡ್ಡ ಆಸ್ತಿಯೆಂದು ಪರಿಗಣಿಸಲಾಗಿದೆ. ಡೇಟಾವನ್ನು ನಿಯಂತ್ರಿಸುವವರು ಭಾರೀ ಜನಸಮೂಹಗಳನ್ನು ಮತ್ತು ಆ ಮೂಲಕ ಅಧಿಕಾರವನ್ನು ನಿಯಂತ್ರಿಸುತ್ತಾರೆ ಎನ್ನುವ ವಾದ ಊರ್ಜಿತಗೊಂಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾಗಿರುವ ಕ್ರಾಂತಿಯೇ ಉದಾರವಾದಿ ಜನತಂತ್ರದ ಪಾಲಿಗೆ ಬಲು ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಮಾಹಿತಿ ತಂತ್ರಜ್ಞಾನವು ಕಟಾವು ಮಾಡಿರುವ ಡೇಟಾದ ಮಹಾ ಇಳುವರಿಯು ಜನತಂತ್ರಗಳಿಗೆ ಶಕ್ತಿ ತುಂಬುವ ಬದಲು ಸರ್ವಾಧಿಕಾರಗಳ ಕೈ ಬಲಪಡಿಸಲಿದೆ

ಸರ್ವಾಧಿಕಾರಗಳು ತಮ್ಮ ಲಾಭಕ್ಕಾಗಿ ಎಲ್ಲ ಡೇಟಾವನ್ನು ಒಂದೆಡೆ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿವೆ. ತಂತ್ರಜ್ಞಾನ ಬೆಳೆದಂತೆಲ್ಲ ಅಪಾರ ಡೇಟಾವನ್ನು ಒಂದೆಡೆ ಸಂಸ್ಕರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸಲೀಸಾಗಿ ಹೋಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೀವತಂತ್ರಜ್ಞಾನ (ಐಟಿ ಮತ್ತು ಬಿಟಿ) ಒಂದರೊಡನೆ ಮತ್ತೊಂದು ವಿಲೀನಗೊಳ್ಳುವ ವಿದ್ಯಮಾನವು ’ಆಲ್ಗರಿದಮ್’ಗಳನ್ನು ಸೃಷ್ಟಿಸಿದೆ. ಈ ’ಆಲ್ಗರಿದಮ್’ಗಳು ವ್ಯಕ್ತಿಗಳ ಅನಿಸಿಕೆ ಆಶಯ ಆಯ್ಕೆಗಳನ್ನು ಖುದ್ದು ಅವರೇ ಅರಿತಿರುವುದಕ್ಕಿಂತ ಹೆಚ್ಚು ನಿಖರವಾಗಿ ನಿಚ್ಚಳವಾಗಿ ಅರಿಯಬಲ್ಲವು. ಸರ್ಕಾರದಂತಹ ಸಂಸ್ಥೆಗಳು ಈ ತಂತ್ರಜ್ಞಾನದ ಲಾಭ ಪಡೆದು ಜನಸಮುದಾಯಗಳ ಒಲವು ನಿಲುವುಗಳನ್ನು ಮುಂದಾಗಿಯೇ ಕಂಡುಕೊಳ್ಳಬಲ್ಲವು. ಆವರ ಭಾವನೆಗಳನ್ನು ತಮಗೆ ಬೇಕಾದಂತೆ ತಿದ್ದಿ ತೀಡಬಲ್ಲವು. ಉದಾಹರಣೆಗೆ ತನ್ನ ಜನರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಲಾರದ ಸರ್ವಾಧಿಕಾರಿಯೊಬ್ಬನು ತನ್ನ ಜನರು ತನ್ನನ್ನು ಪ್ರೀತಿಸುವಂತೆಯೂ ಪ್ರತಿಪಕ್ಷಗಳನ್ನು ದ್ವೇಷಿಸುವಂತೆಯೂ ಮಾಡಬಲ್ಲ. ಅಂತಹ ವಿರೋಧಾಭಾಸದ ಪರಿಸ್ಥಿತಿಯಲ್ಲಿ ಜನತಂತ್ರ ಉಳಿದು ಬೆಳೆಯಲಾರದು. ಅಂತಹ ವಾತಾವರಣದಲ್ಲಿ ಜನತಂತ್ರವು ಸರಿತಪ್ಪುಗಳನ್ನು ವಿವೇಚಿಸುವ ಮಾನವ ಆಲೋಚನಾ ಶಕ್ತಿಯ ಆಧಾರವನ್ನು ಕಳೆದುಕೊಳ್ಳುತ್ತದೆ. ಬುದ್ಧಿಯ ಜಾಗವನ್ನು ಭಾವುಕತೆ ಆವರಿಸುತ್ತದೆ. ನಮ್ಮ ಭಾವನೆಗಳನ್ನು ಹ್ಯಾಕ್ ಮಾಡಿ ಧ್ರುವೀಕರಣ ಮಾಡಿ ಜನತಂತ್ರವನ್ನು ನಾಶ ಮಾಡಲು ಬಳಸಿಕೊಳ್ಳಲಾಗುತ್ತದೆ. ಜನತಂತ್ರವು ಕೇವಲ ಒಂದು ಭಾವನಾತ್ಮಕ ಗೊಂಬೆಯಾಟ ಆಗಿಬಿಡುತ್ತದೆ.

ಇಂತಹ ಅಪಾಯವನ್ನು ತಪ್ಪಿಸಲು ಭಾರೀ ಡೇಟಾ ಒಂದೇ ಕಡೆ ಕೇಂದ್ರೀಕೃತ ಆಗುವುದನ್ನು ತಪ್ಪಿಸಬೇಕು. ಡೇಟಾ ನಿಯಂತ್ರಿಸುವವರು ನಮ್ಮ ಭಾವನೆಗಳನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ತಿದ್ದಿ ತೀಡಿಕೊಳ್ಳುವುದಕ್ಕೆ ಆಗ ಸಾಧ್ಯವಾಗುವುದಿಲ್ಲ.

ದೈನಂದಿನ ಗ್ರಾಹಕ ಸರಕು ಸರಂಜಾಮುಗಳನ್ನು ನಮಗೆ ಮಾರಾಟ ಮಾಡಲು ಮಾಹಿತಿ ತಂತ್ರಜ್ಞಾನದ ಆಲ್ಗರಿದಂ ವಿಧಾನದ ಪ್ರಯೋಗ ಈಗಾಗಲೆ ಜಾರಿಯಲ್ಲಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಜನತಂತ್ರದ ಶತ್ರುಗಳು ಇದೇ ವಿಧಾನವನ್ನು ಅನುಸರಿಸಿ ಭಯ, ದ್ವೇಷ ಹಾಗೂ ಒಣಪ್ರತಿಷ್ಠೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಇವುಗಳ ಮಾರಾಟ ಶೂನ್ಯದಲ್ಲಿ ಸಾಧ್ಯವಿಲ್ಲ. ಅವರು ಜನಸಮೂಹಗಳ ದೌರ್ಬಲ್ಯಗಳನ್ನು ಗುರುತಿಸಿ ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ತಮ್ಮ ದೌರ್ಬಲ್ಯಗಳು ಜನತಂತ್ರದ ಶತ್ರುಗಳ ಕೈಯಲ್ಲಿನ ಅಸ್ತ್ರವಾಗದಂತೆ ಜನಸಮೂಹಗಳು ಜಾಗ್ರತೆ ವಹಿಸಬೇಕು. ದೌರ್ಬಲ್ಯಗಳನ್ನು ಅರಿತು ಇಂತಹ ಎಚ್ಚರಿಕೆ ವಹಿಸುವುದು ಜನರನ್ನು ಫ್ಯಾಸಿಸ್ಟ್ ಕನ್ನಡಿಯಿಂದಲೂ ಕಾಪಾಡುತ್ತದೆ. ಫ್ಯಾಸಿಸಮ್ ನಮ್ಮ ಒಣಪ್ರತಿಷ್ಠೆಯಂತಹ ದೌರ್ಬಲ್ಯಗಳನ್ನು ಬಳಸಿಕೊಂಡು ಬೇರೂರುತ್ತದೆ. ನಾವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ನಮ್ಮನ್ನು ತೋರುತ್ತದೆ. ನಮ್ಮನ್ನು ನಾವು ಚೆನ್ನಾಗಿ ಬಲ್ಲೆವಾದರೆ ಈ ಮೋಹಪರವಶತೆಗೆ ಬಲಿ ಬೀಳುವುದು ಸಾಧ್ಯವಿಲ್ಲ. ಸರ್ವಾಧಿಕಾರಿಗಳು ನಿಮ್ಮ ಕಣ್ಣೆದುರಿಗೆ ಫ್ಯಾಸಿಸ್ಟ್ ಕನ್ನಡಿಯೊಂದನ್ನು ಇಡುತ್ತಾರೆ. ಆ ಕನ್ನಡಿಯು ನಿಮ್ಮ ಎಲ್ಲ ಕುರೂಪವನ್ನು ಅಡಗಿಸಿಟ್ಟು ನೀವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ತೋರಿಸುತ್ತದೆ. ನಿಮಗೆ ವಾಸ್ತವದಲ್ಲಿ ಇಲ್ಲದಸಲ್ಲದ ಪ್ರಾಮುಖ್ಯತೆಯನ್ನು ತೊಡಿಸುತ್ತದೆ. ಈ ಅವಾಸ್ತವಿಕ ಕನ್ನಡಿಯನ್ನು ಒಡೆಯಿರಿ….


ಇದನ್ನೂ ಓದಿ: ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...