Homeಅಂಕಣಗಳುಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

- Advertisement -
- Advertisement -

ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದ ಮಹಾಸ್ಫೋಟಕ್ಕೆ ಭೂಮಂಡಲ ಸಾಕ್ಷಿಯಾಗಿದೆ. ಮಾಹಿತಿ ಅಥವಾ ಡೇಟಾವನ್ನು ಹೊಸ ಪ್ರಬಲ ಅಸ್ತ್ರ ಎಂದು ಬಣ್ಣಿಸಲಾಗುತ್ತಿದೆ. ಡೇಟಾವನ್ನು ನಿಯಂತ್ರಿಸುವಾತನೇ ಸರ್ವಶಕ್ತ ಎಂಬುದು ಈ ಯುಗದ ಹೊಸ ಸತ್ಯ.

ಚಿಂತಕರು, ತಂತ್ರಜ್ಞನಿಪುಣರು ಕೆಲವು ವರ್ಷಗಳಿಂದ ಪ್ರತಿಪಾದಿಸುತ್ತಾ ಬಂದಿರುವ ಈ ಅಂಶ ದಿನಗಳೆದಂತೆ ಮತ್ತಷ್ಟು ಗಟ್ಟಿಯಾಗಿ ಸ್ಫುಟವಾಗಿ ಹರಳುಗಟ್ಟತೊಡಗಿದೆ. ಜೊತೆಜೊತೆಗೆ ಸರ್ವಾಧಿಕಾರಗಳು, ಧ್ರುವೀಕರಣ ರಾಜಕಾರಣ ಬೇರಿಳಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ತಮ್ಮ ಮೇಲೆ ಪ್ರಯೋಗಿಸಲಾಗಿರುವ ಮಂಕುಬೂದಿಯನ್ನು ಜನಸಮುದಾಯಗಳು ಕೊಡವಿಕೊಳ್ಳದಿದ್ದರೆ ಈ ಅಪಾಯ ಕೈಮೀರಲಿದೆ ಮತ್ತು ಗಹಗಹಿಸಲಿದೆ. ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಈ ಸನ್ನಿವೇಶದಲ್ಲಿ ಇಸ್ರೇಲಿ ಮೂಲದ ಜಗತ್ಪ್ರಸಿದ್ಧ ಯುವ ಚಿಂತಕ ಯುವಾಲ್ ನೋವಾ ಹರಾರಿ ಅವರ ಕೆಳಕಂಡ ಚಿಂತನೆಗೆ ಕಿವಿಗೊಟ್ಟು ಧೇನಿಸಬೇಕಿದೆ.

ಹರಾರಿ ಹೇಳುತ್ತಾರೆ… ಆರಂಭದಲ್ಲಿ ಭೂವಿಸ್ತಾರ, ಆನಂತರ ಯಂತ್ರಗಳು, ಇದೀಗ ಡೇಟಾ ಬಹುದೊಡ್ಡ ಆಸ್ತಿಯೆಂದು ಪರಿಗಣಿಸಲಾಗಿದೆ. ಡೇಟಾವನ್ನು ನಿಯಂತ್ರಿಸುವವರು ಭಾರೀ ಜನಸಮೂಹಗಳನ್ನು ಮತ್ತು ಆ ಮೂಲಕ ಅಧಿಕಾರವನ್ನು ನಿಯಂತ್ರಿಸುತ್ತಾರೆ ಎನ್ನುವ ವಾದ ಊರ್ಜಿತಗೊಂಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾಗಿರುವ ಕ್ರಾಂತಿಯೇ ಉದಾರವಾದಿ ಜನತಂತ್ರದ ಪಾಲಿಗೆ ಬಲು ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಮಾಹಿತಿ ತಂತ್ರಜ್ಞಾನವು ಕಟಾವು ಮಾಡಿರುವ ಡೇಟಾದ ಮಹಾ ಇಳುವರಿಯು ಜನತಂತ್ರಗಳಿಗೆ ಶಕ್ತಿ ತುಂಬುವ ಬದಲು ಸರ್ವಾಧಿಕಾರಗಳ ಕೈ ಬಲಪಡಿಸಲಿದೆ

ಸರ್ವಾಧಿಕಾರಗಳು ತಮ್ಮ ಲಾಭಕ್ಕಾಗಿ ಎಲ್ಲ ಡೇಟಾವನ್ನು ಒಂದೆಡೆ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿವೆ. ತಂತ್ರಜ್ಞಾನ ಬೆಳೆದಂತೆಲ್ಲ ಅಪಾರ ಡೇಟಾವನ್ನು ಒಂದೆಡೆ ಸಂಸ್ಕರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸಲೀಸಾಗಿ ಹೋಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೀವತಂತ್ರಜ್ಞಾನ (ಐಟಿ ಮತ್ತು ಬಿಟಿ) ಒಂದರೊಡನೆ ಮತ್ತೊಂದು ವಿಲೀನಗೊಳ್ಳುವ ವಿದ್ಯಮಾನವು ’ಆಲ್ಗರಿದಮ್’ಗಳನ್ನು ಸೃಷ್ಟಿಸಿದೆ. ಈ ’ಆಲ್ಗರಿದಮ್’ಗಳು ವ್ಯಕ್ತಿಗಳ ಅನಿಸಿಕೆ ಆಶಯ ಆಯ್ಕೆಗಳನ್ನು ಖುದ್ದು ಅವರೇ ಅರಿತಿರುವುದಕ್ಕಿಂತ ಹೆಚ್ಚು ನಿಖರವಾಗಿ ನಿಚ್ಚಳವಾಗಿ ಅರಿಯಬಲ್ಲವು. ಸರ್ಕಾರದಂತಹ ಸಂಸ್ಥೆಗಳು ಈ ತಂತ್ರಜ್ಞಾನದ ಲಾಭ ಪಡೆದು ಜನಸಮುದಾಯಗಳ ಒಲವು ನಿಲುವುಗಳನ್ನು ಮುಂದಾಗಿಯೇ ಕಂಡುಕೊಳ್ಳಬಲ್ಲವು. ಆವರ ಭಾವನೆಗಳನ್ನು ತಮಗೆ ಬೇಕಾದಂತೆ ತಿದ್ದಿ ತೀಡಬಲ್ಲವು. ಉದಾಹರಣೆಗೆ ತನ್ನ ಜನರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಲಾರದ ಸರ್ವಾಧಿಕಾರಿಯೊಬ್ಬನು ತನ್ನ ಜನರು ತನ್ನನ್ನು ಪ್ರೀತಿಸುವಂತೆಯೂ ಪ್ರತಿಪಕ್ಷಗಳನ್ನು ದ್ವೇಷಿಸುವಂತೆಯೂ ಮಾಡಬಲ್ಲ. ಅಂತಹ ವಿರೋಧಾಭಾಸದ ಪರಿಸ್ಥಿತಿಯಲ್ಲಿ ಜನತಂತ್ರ ಉಳಿದು ಬೆಳೆಯಲಾರದು. ಅಂತಹ ವಾತಾವರಣದಲ್ಲಿ ಜನತಂತ್ರವು ಸರಿತಪ್ಪುಗಳನ್ನು ವಿವೇಚಿಸುವ ಮಾನವ ಆಲೋಚನಾ ಶಕ್ತಿಯ ಆಧಾರವನ್ನು ಕಳೆದುಕೊಳ್ಳುತ್ತದೆ. ಬುದ್ಧಿಯ ಜಾಗವನ್ನು ಭಾವುಕತೆ ಆವರಿಸುತ್ತದೆ. ನಮ್ಮ ಭಾವನೆಗಳನ್ನು ಹ್ಯಾಕ್ ಮಾಡಿ ಧ್ರುವೀಕರಣ ಮಾಡಿ ಜನತಂತ್ರವನ್ನು ನಾಶ ಮಾಡಲು ಬಳಸಿಕೊಳ್ಳಲಾಗುತ್ತದೆ. ಜನತಂತ್ರವು ಕೇವಲ ಒಂದು ಭಾವನಾತ್ಮಕ ಗೊಂಬೆಯಾಟ ಆಗಿಬಿಡುತ್ತದೆ.

ಇಂತಹ ಅಪಾಯವನ್ನು ತಪ್ಪಿಸಲು ಭಾರೀ ಡೇಟಾ ಒಂದೇ ಕಡೆ ಕೇಂದ್ರೀಕೃತ ಆಗುವುದನ್ನು ತಪ್ಪಿಸಬೇಕು. ಡೇಟಾ ನಿಯಂತ್ರಿಸುವವರು ನಮ್ಮ ಭಾವನೆಗಳನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ತಿದ್ದಿ ತೀಡಿಕೊಳ್ಳುವುದಕ್ಕೆ ಆಗ ಸಾಧ್ಯವಾಗುವುದಿಲ್ಲ.

ದೈನಂದಿನ ಗ್ರಾಹಕ ಸರಕು ಸರಂಜಾಮುಗಳನ್ನು ನಮಗೆ ಮಾರಾಟ ಮಾಡಲು ಮಾಹಿತಿ ತಂತ್ರಜ್ಞಾನದ ಆಲ್ಗರಿದಂ ವಿಧಾನದ ಪ್ರಯೋಗ ಈಗಾಗಲೆ ಜಾರಿಯಲ್ಲಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಜನತಂತ್ರದ ಶತ್ರುಗಳು ಇದೇ ವಿಧಾನವನ್ನು ಅನುಸರಿಸಿ ಭಯ, ದ್ವೇಷ ಹಾಗೂ ಒಣಪ್ರತಿಷ್ಠೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಇವುಗಳ ಮಾರಾಟ ಶೂನ್ಯದಲ್ಲಿ ಸಾಧ್ಯವಿಲ್ಲ. ಅವರು ಜನಸಮೂಹಗಳ ದೌರ್ಬಲ್ಯಗಳನ್ನು ಗುರುತಿಸಿ ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ತಮ್ಮ ದೌರ್ಬಲ್ಯಗಳು ಜನತಂತ್ರದ ಶತ್ರುಗಳ ಕೈಯಲ್ಲಿನ ಅಸ್ತ್ರವಾಗದಂತೆ ಜನಸಮೂಹಗಳು ಜಾಗ್ರತೆ ವಹಿಸಬೇಕು. ದೌರ್ಬಲ್ಯಗಳನ್ನು ಅರಿತು ಇಂತಹ ಎಚ್ಚರಿಕೆ ವಹಿಸುವುದು ಜನರನ್ನು ಫ್ಯಾಸಿಸ್ಟ್ ಕನ್ನಡಿಯಿಂದಲೂ ಕಾಪಾಡುತ್ತದೆ. ಫ್ಯಾಸಿಸಮ್ ನಮ್ಮ ಒಣಪ್ರತಿಷ್ಠೆಯಂತಹ ದೌರ್ಬಲ್ಯಗಳನ್ನು ಬಳಸಿಕೊಂಡು ಬೇರೂರುತ್ತದೆ. ನಾವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ನಮ್ಮನ್ನು ತೋರುತ್ತದೆ. ನಮ್ಮನ್ನು ನಾವು ಚೆನ್ನಾಗಿ ಬಲ್ಲೆವಾದರೆ ಈ ಮೋಹಪರವಶತೆಗೆ ಬಲಿ ಬೀಳುವುದು ಸಾಧ್ಯವಿಲ್ಲ. ಸರ್ವಾಧಿಕಾರಿಗಳು ನಿಮ್ಮ ಕಣ್ಣೆದುರಿಗೆ ಫ್ಯಾಸಿಸ್ಟ್ ಕನ್ನಡಿಯೊಂದನ್ನು ಇಡುತ್ತಾರೆ. ಆ ಕನ್ನಡಿಯು ನಿಮ್ಮ ಎಲ್ಲ ಕುರೂಪವನ್ನು ಅಡಗಿಸಿಟ್ಟು ನೀವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ತೋರಿಸುತ್ತದೆ. ನಿಮಗೆ ವಾಸ್ತವದಲ್ಲಿ ಇಲ್ಲದಸಲ್ಲದ ಪ್ರಾಮುಖ್ಯತೆಯನ್ನು ತೊಡಿಸುತ್ತದೆ. ಈ ಅವಾಸ್ತವಿಕ ಕನ್ನಡಿಯನ್ನು ಒಡೆಯಿರಿ….


ಇದನ್ನೂ ಓದಿ: ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...