Homeಅಂಕಣಗಳುಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

- Advertisement -
- Advertisement -

ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದ ಮಹಾಸ್ಫೋಟಕ್ಕೆ ಭೂಮಂಡಲ ಸಾಕ್ಷಿಯಾಗಿದೆ. ಮಾಹಿತಿ ಅಥವಾ ಡೇಟಾವನ್ನು ಹೊಸ ಪ್ರಬಲ ಅಸ್ತ್ರ ಎಂದು ಬಣ್ಣಿಸಲಾಗುತ್ತಿದೆ. ಡೇಟಾವನ್ನು ನಿಯಂತ್ರಿಸುವಾತನೇ ಸರ್ವಶಕ್ತ ಎಂಬುದು ಈ ಯುಗದ ಹೊಸ ಸತ್ಯ.

ಚಿಂತಕರು, ತಂತ್ರಜ್ಞನಿಪುಣರು ಕೆಲವು ವರ್ಷಗಳಿಂದ ಪ್ರತಿಪಾದಿಸುತ್ತಾ ಬಂದಿರುವ ಈ ಅಂಶ ದಿನಗಳೆದಂತೆ ಮತ್ತಷ್ಟು ಗಟ್ಟಿಯಾಗಿ ಸ್ಫುಟವಾಗಿ ಹರಳುಗಟ್ಟತೊಡಗಿದೆ. ಜೊತೆಜೊತೆಗೆ ಸರ್ವಾಧಿಕಾರಗಳು, ಧ್ರುವೀಕರಣ ರಾಜಕಾರಣ ಬೇರಿಳಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ತಮ್ಮ ಮೇಲೆ ಪ್ರಯೋಗಿಸಲಾಗಿರುವ ಮಂಕುಬೂದಿಯನ್ನು ಜನಸಮುದಾಯಗಳು ಕೊಡವಿಕೊಳ್ಳದಿದ್ದರೆ ಈ ಅಪಾಯ ಕೈಮೀರಲಿದೆ ಮತ್ತು ಗಹಗಹಿಸಲಿದೆ. ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಈ ಸನ್ನಿವೇಶದಲ್ಲಿ ಇಸ್ರೇಲಿ ಮೂಲದ ಜಗತ್ಪ್ರಸಿದ್ಧ ಯುವ ಚಿಂತಕ ಯುವಾಲ್ ನೋವಾ ಹರಾರಿ ಅವರ ಕೆಳಕಂಡ ಚಿಂತನೆಗೆ ಕಿವಿಗೊಟ್ಟು ಧೇನಿಸಬೇಕಿದೆ.

ಹರಾರಿ ಹೇಳುತ್ತಾರೆ… ಆರಂಭದಲ್ಲಿ ಭೂವಿಸ್ತಾರ, ಆನಂತರ ಯಂತ್ರಗಳು, ಇದೀಗ ಡೇಟಾ ಬಹುದೊಡ್ಡ ಆಸ್ತಿಯೆಂದು ಪರಿಗಣಿಸಲಾಗಿದೆ. ಡೇಟಾವನ್ನು ನಿಯಂತ್ರಿಸುವವರು ಭಾರೀ ಜನಸಮೂಹಗಳನ್ನು ಮತ್ತು ಆ ಮೂಲಕ ಅಧಿಕಾರವನ್ನು ನಿಯಂತ್ರಿಸುತ್ತಾರೆ ಎನ್ನುವ ವಾದ ಊರ್ಜಿತಗೊಂಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾಗಿರುವ ಕ್ರಾಂತಿಯೇ ಉದಾರವಾದಿ ಜನತಂತ್ರದ ಪಾಲಿಗೆ ಬಲು ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಮಾಹಿತಿ ತಂತ್ರಜ್ಞಾನವು ಕಟಾವು ಮಾಡಿರುವ ಡೇಟಾದ ಮಹಾ ಇಳುವರಿಯು ಜನತಂತ್ರಗಳಿಗೆ ಶಕ್ತಿ ತುಂಬುವ ಬದಲು ಸರ್ವಾಧಿಕಾರಗಳ ಕೈ ಬಲಪಡಿಸಲಿದೆ

ಸರ್ವಾಧಿಕಾರಗಳು ತಮ್ಮ ಲಾಭಕ್ಕಾಗಿ ಎಲ್ಲ ಡೇಟಾವನ್ನು ಒಂದೆಡೆ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿವೆ. ತಂತ್ರಜ್ಞಾನ ಬೆಳೆದಂತೆಲ್ಲ ಅಪಾರ ಡೇಟಾವನ್ನು ಒಂದೆಡೆ ಸಂಸ್ಕರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸಲೀಸಾಗಿ ಹೋಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೀವತಂತ್ರಜ್ಞಾನ (ಐಟಿ ಮತ್ತು ಬಿಟಿ) ಒಂದರೊಡನೆ ಮತ್ತೊಂದು ವಿಲೀನಗೊಳ್ಳುವ ವಿದ್ಯಮಾನವು ’ಆಲ್ಗರಿದಮ್’ಗಳನ್ನು ಸೃಷ್ಟಿಸಿದೆ. ಈ ’ಆಲ್ಗರಿದಮ್’ಗಳು ವ್ಯಕ್ತಿಗಳ ಅನಿಸಿಕೆ ಆಶಯ ಆಯ್ಕೆಗಳನ್ನು ಖುದ್ದು ಅವರೇ ಅರಿತಿರುವುದಕ್ಕಿಂತ ಹೆಚ್ಚು ನಿಖರವಾಗಿ ನಿಚ್ಚಳವಾಗಿ ಅರಿಯಬಲ್ಲವು. ಸರ್ಕಾರದಂತಹ ಸಂಸ್ಥೆಗಳು ಈ ತಂತ್ರಜ್ಞಾನದ ಲಾಭ ಪಡೆದು ಜನಸಮುದಾಯಗಳ ಒಲವು ನಿಲುವುಗಳನ್ನು ಮುಂದಾಗಿಯೇ ಕಂಡುಕೊಳ್ಳಬಲ್ಲವು. ಆವರ ಭಾವನೆಗಳನ್ನು ತಮಗೆ ಬೇಕಾದಂತೆ ತಿದ್ದಿ ತೀಡಬಲ್ಲವು. ಉದಾಹರಣೆಗೆ ತನ್ನ ಜನರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಲಾರದ ಸರ್ವಾಧಿಕಾರಿಯೊಬ್ಬನು ತನ್ನ ಜನರು ತನ್ನನ್ನು ಪ್ರೀತಿಸುವಂತೆಯೂ ಪ್ರತಿಪಕ್ಷಗಳನ್ನು ದ್ವೇಷಿಸುವಂತೆಯೂ ಮಾಡಬಲ್ಲ. ಅಂತಹ ವಿರೋಧಾಭಾಸದ ಪರಿಸ್ಥಿತಿಯಲ್ಲಿ ಜನತಂತ್ರ ಉಳಿದು ಬೆಳೆಯಲಾರದು. ಅಂತಹ ವಾತಾವರಣದಲ್ಲಿ ಜನತಂತ್ರವು ಸರಿತಪ್ಪುಗಳನ್ನು ವಿವೇಚಿಸುವ ಮಾನವ ಆಲೋಚನಾ ಶಕ್ತಿಯ ಆಧಾರವನ್ನು ಕಳೆದುಕೊಳ್ಳುತ್ತದೆ. ಬುದ್ಧಿಯ ಜಾಗವನ್ನು ಭಾವುಕತೆ ಆವರಿಸುತ್ತದೆ. ನಮ್ಮ ಭಾವನೆಗಳನ್ನು ಹ್ಯಾಕ್ ಮಾಡಿ ಧ್ರುವೀಕರಣ ಮಾಡಿ ಜನತಂತ್ರವನ್ನು ನಾಶ ಮಾಡಲು ಬಳಸಿಕೊಳ್ಳಲಾಗುತ್ತದೆ. ಜನತಂತ್ರವು ಕೇವಲ ಒಂದು ಭಾವನಾತ್ಮಕ ಗೊಂಬೆಯಾಟ ಆಗಿಬಿಡುತ್ತದೆ.

ಇಂತಹ ಅಪಾಯವನ್ನು ತಪ್ಪಿಸಲು ಭಾರೀ ಡೇಟಾ ಒಂದೇ ಕಡೆ ಕೇಂದ್ರೀಕೃತ ಆಗುವುದನ್ನು ತಪ್ಪಿಸಬೇಕು. ಡೇಟಾ ನಿಯಂತ್ರಿಸುವವರು ನಮ್ಮ ಭಾವನೆಗಳನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ತಿದ್ದಿ ತೀಡಿಕೊಳ್ಳುವುದಕ್ಕೆ ಆಗ ಸಾಧ್ಯವಾಗುವುದಿಲ್ಲ.

ದೈನಂದಿನ ಗ್ರಾಹಕ ಸರಕು ಸರಂಜಾಮುಗಳನ್ನು ನಮಗೆ ಮಾರಾಟ ಮಾಡಲು ಮಾಹಿತಿ ತಂತ್ರಜ್ಞಾನದ ಆಲ್ಗರಿದಂ ವಿಧಾನದ ಪ್ರಯೋಗ ಈಗಾಗಲೆ ಜಾರಿಯಲ್ಲಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಜನತಂತ್ರದ ಶತ್ರುಗಳು ಇದೇ ವಿಧಾನವನ್ನು ಅನುಸರಿಸಿ ಭಯ, ದ್ವೇಷ ಹಾಗೂ ಒಣಪ್ರತಿಷ್ಠೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಇವುಗಳ ಮಾರಾಟ ಶೂನ್ಯದಲ್ಲಿ ಸಾಧ್ಯವಿಲ್ಲ. ಅವರು ಜನಸಮೂಹಗಳ ದೌರ್ಬಲ್ಯಗಳನ್ನು ಗುರುತಿಸಿ ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ತಮ್ಮ ದೌರ್ಬಲ್ಯಗಳು ಜನತಂತ್ರದ ಶತ್ರುಗಳ ಕೈಯಲ್ಲಿನ ಅಸ್ತ್ರವಾಗದಂತೆ ಜನಸಮೂಹಗಳು ಜಾಗ್ರತೆ ವಹಿಸಬೇಕು. ದೌರ್ಬಲ್ಯಗಳನ್ನು ಅರಿತು ಇಂತಹ ಎಚ್ಚರಿಕೆ ವಹಿಸುವುದು ಜನರನ್ನು ಫ್ಯಾಸಿಸ್ಟ್ ಕನ್ನಡಿಯಿಂದಲೂ ಕಾಪಾಡುತ್ತದೆ. ಫ್ಯಾಸಿಸಮ್ ನಮ್ಮ ಒಣಪ್ರತಿಷ್ಠೆಯಂತಹ ದೌರ್ಬಲ್ಯಗಳನ್ನು ಬಳಸಿಕೊಂಡು ಬೇರೂರುತ್ತದೆ. ನಾವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ನಮ್ಮನ್ನು ತೋರುತ್ತದೆ. ನಮ್ಮನ್ನು ನಾವು ಚೆನ್ನಾಗಿ ಬಲ್ಲೆವಾದರೆ ಈ ಮೋಹಪರವಶತೆಗೆ ಬಲಿ ಬೀಳುವುದು ಸಾಧ್ಯವಿಲ್ಲ. ಸರ್ವಾಧಿಕಾರಿಗಳು ನಿಮ್ಮ ಕಣ್ಣೆದುರಿಗೆ ಫ್ಯಾಸಿಸ್ಟ್ ಕನ್ನಡಿಯೊಂದನ್ನು ಇಡುತ್ತಾರೆ. ಆ ಕನ್ನಡಿಯು ನಿಮ್ಮ ಎಲ್ಲ ಕುರೂಪವನ್ನು ಅಡಗಿಸಿಟ್ಟು ನೀವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ತೋರಿಸುತ್ತದೆ. ನಿಮಗೆ ವಾಸ್ತವದಲ್ಲಿ ಇಲ್ಲದಸಲ್ಲದ ಪ್ರಾಮುಖ್ಯತೆಯನ್ನು ತೊಡಿಸುತ್ತದೆ. ಈ ಅವಾಸ್ತವಿಕ ಕನ್ನಡಿಯನ್ನು ಒಡೆಯಿರಿ….


ಇದನ್ನೂ ಓದಿ: ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...