HomeಮುಖಪುಟCAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

- Advertisement -
- Advertisement -

ಲೋಕಸಭೆಗೆ ಚುನಾವಣೆ ಘೋಷಣೆ ಮೊದಲೇ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಾವಳಿಗಳ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರಕಾರವು ಸಜ್ಜಾಗಿದೆ ಎಂದು ಅಧಿಕಾರಿಯೋರ್ವರು ಹೇಳಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿವಾದಿತ ಸಿಎಎಯನ್ನು ಮುನ್ನೆಲೆಗೆ ತಂದಿರುವ ಬಗ್ಗೆ ಪ್ರತಿಪಕ್ಷಗಳು ವಿರೋಧವನ್ನು ವ್ಯಕ್ತಪಡಿಸಿದ್ದು, ಇದು ಬಿಜೆಪಿಯ ಚುನಾವಣಾ ಅಸ್ತ್ರ ಎಂದು ಹೇಳಿದೆ.

CAA ನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡುವುದು ಸಂವಿಧಾನಬಾಹಿರವಾಗಿದೆ.

ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ತು ಅಂಗೀಕರಿಸಿದ ದೇಶದ ಕೆಲವು ಭಾಗಗಳಲ್ಲಿ ಭಾರಿ ಪ್ರತಿಭಟನೆಗಳು ನಡೆದವು. 2019ರ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಲೋಕಸಭೆ ಚುನಾವಣೆಯ ಘೋಷಣೆಗೆ ಮೊದಲೇ ಅಧಿಸೂಚನೆಯಲ್ಲಿ ಹೊರಡಿಸಲಾಗುವುದು. ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ನಾವು ಮುಂದಿನ ದಿನಗಳಲ್ಲಿ ಸಿಎಎ ನಿಯಮಗಳನ್ನು ಹೊರಡಿಸಲಿದ್ದೇವೆ. ನಿಯಮಗಳನ್ನು ಹೊರಡಿಸಿದ ನಂತರ, ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದರು.

ಅಸಾದ್ದುದ್ದೀನ್ ಓವೈಸಿ ಪ್ರತಿಕ್ರಿಯೆ:

ಈ ಕುರಿತು ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದ್ದುದ್ದೀನ್ ಓವೈಸಿ, ಇದು ಅಂಚಿನಲ್ಲಿರುವ ಸಮುದಾಯಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಮರಿಗೆ ದೊಡ್ಡ ಮಟ್ಟದಲ್ಲಿ ಅನ್ಯಾಯವಾಗಲಿದೆ. 2019ರಲ್ಲಿ ಅಂಗೀಕರಿಸಲಾದ ಕಾನೂನು ಧರ್ಮದ ಆಧಾರದಲ್ಲಿ ರೂಪುಗೊಂಡಿರುವುದರಿಂದ ಅದು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದರು.

ಸಿಎಎ ಸಂವಿಧಾನ ವಿರೋಧಿಯಾಗಿದೆ. ಇದು ಧರ್ಮದ ಆಧಾರದ ಮೇಲೆ ರಚಿಸಲಾದ ಕಾನೂನು. ಸಿಎಎನ್ನು ಎನ್‌ಪಿಆರ್-ಎನ್‌ಆರ್‌ಸಿಯೊಂದಿಗೆ ಓದಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಅದು ಈ ದೇಶದಲ್ಲಿ ನಿಮ್ಮ ಪೌರತ್ವವನ್ನು ಸಾಬೀತುಪಡಿಸಲು ಷರತ್ತುಗಳನ್ನು ವಿಧಿಸುತ್ತದೆ. ಅದು ಸಂಭವಿಸಿದಲ್ಲಿ ವಿಶೇಷವಾಗಿ ಮುಸ್ಲಿಮರು, ದಲಿತರು ಮತ್ತು ಭಾರತದ ಬಡವರಿಗೆ ಅವರು ಜಾತಿ ಅಥವಾ ಧರ್ಮವನ್ನು ಮೀರಿ ಗಂಭೀರ ಅನ್ಯಾಯವಾಗಲಿದೆ ಎಂದು ಅಸಾದ್ದುದ್ದೀನ್ ಓವೈಸಿ ಅವರು ಹೇಳಿದ್ದಾರೆ.

ಸೀತಾರಾಂ ಯೆಚೂರಿ ಪ್ರತಿಕ್ರಿಯೆ

ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರಕಾರವು ಕೋಮು ಧ್ರುವೀಕರಣಕ್ಕೆ ಪ್ರಚೋದಿಸಲು ಪ್ರಯತ್ನಿಸುತ್ತಿದೆ. ಈಗ ಅದು ಸ್ಪಷ್ಟವಾಗಿದೆ. ಇಷ್ಟು ವರ್ಷಗಳ ಕಾಲ ಈ ನಿಯಮಗಳ ಬಗ್ಗೆ ಯಾವುದೇ ಸೂಚನೆ ನೀಡಲಾಗಿಲ್ಲ. ಸ್ಪಷ್ಟವಾಗಿ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಈ ಬಗ್ಗೆ ನಿಯಮಾವಳಿಗಳನ್ನು ತರುತ್ತಾರೆ. ಇದನ್ನು  ಚುನಾವಣೆಯಲ್ಲಿ ಲಾಭ ಗಳಿಸಲು ಅಸ್ತ್ರವಾಗಿ ಬಳಸಲಾಗುತ್ತದೆ. ಇದು ಅವರ ಸ್ಪಷ್ಟ ಗುರಿಯಾಗಿದೆ ಎಂದು ಹೇಳಿದ್ದಾರೆ.

ಮನೀಶ್ ತಿವಾರಿ ಪ್ರತಿಕ್ರಿಯೆ

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಧರ್ಮದ ಆಧಾರದಲ್ಲಿ ಪೌರತ್ವ ನೀಡಲು ಸಾಧ್ಯವಿಲ್ಲ. ಸಂವಿಧಾನದ ಪೀಠಿಕೆಯಲ್ಲಿ ಜಾತ್ಯತೀತತೆಯನ್ನು ಪ್ರತಿಪಾದಿಸಿದ ದೇಶದಲ್ಲಿ ಧರ್ಮವು ಪೌರತ್ವಕ್ಕೆ ಆಧಾರವೇ? ಪ್ರಾದೇಶಿಕತೆ? ಉತ್ತರ ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 2019ರಲ್ಲಿ ನಾನು ಲೋಕಸಭೆಯಲ್ಲಿ ಸಿಎಎ ಮಸೂದೆಗೆ ವಿರೋಧವನ್ನು ವ್ಯಕ್ತಪಡಿಸಿದಾಗ ಈ ಪ್ರಶ್ನೆಯನ್ನು ಕೇಳಿದ್ದೆ. ಕಾಲ್ಪನಿಕವಾಗಿ ನಾಳೆ ಸರ್ಕಾರವು ಧರ್ಮವು ಪೌರತ್ವದ ಆಧಾರವಾಗಿದೆ ಎಂದು ವಾದಿಸಬಹುದು. ಪ್ರಾದೇಶಿಕವಾಗಿ ಜನ್ಮಸ್ಥಳವಲ್ಲ ಅಥವಾ ಭಾರತದ ಸಂವಿಧಾನ ಅಥವಾ ಪೌರತ್ವ ಕಾಯ್ದೆಯಲ್ಲಿನ ಪೌರತ್ವದ ಇತರ ಮಾನದಂಡವಲ್ಲ ಎಂದು ಹೇಳಬಹುದು ಎಂದು ಹೇಳಿದ್ದಾರೆ.

ಫಕ್ರುಲ್ ಹಸನ್ ಪ್ರತಿಕ್ರಿಯೆ

ಈ ಬಗ್ಗೆ ಮಾತನಾಡಿದ ಸಮಾಜವಾದಿ ಪಕ್ಷದ ವಕ್ತಾರ ಫಕ್ರುಲ್ ಹಸನ್, ಜನಸಾಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಈ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಉದ್ಯೋಗ ಒದಗಿಸುವುದು, ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅದಕ್ಕಾಗಿಯೇ ಅದು ದೇವಾಲಯಗಳು ಮತ್ತು ಮಸೀದಿಗಳು, ಸಿಎಎ ಮತ್ತು ಎನ್‌ಆರ್‌ಸಿಯಂತಹ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...