HomeಮುಖಪುಟCAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

- Advertisement -
- Advertisement -

ಲೋಕಸಭೆಗೆ ಚುನಾವಣೆ ಘೋಷಣೆ ಮೊದಲೇ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಾವಳಿಗಳ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರಕಾರವು ಸಜ್ಜಾಗಿದೆ ಎಂದು ಅಧಿಕಾರಿಯೋರ್ವರು ಹೇಳಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿವಾದಿತ ಸಿಎಎಯನ್ನು ಮುನ್ನೆಲೆಗೆ ತಂದಿರುವ ಬಗ್ಗೆ ಪ್ರತಿಪಕ್ಷಗಳು ವಿರೋಧವನ್ನು ವ್ಯಕ್ತಪಡಿಸಿದ್ದು, ಇದು ಬಿಜೆಪಿಯ ಚುನಾವಣಾ ಅಸ್ತ್ರ ಎಂದು ಹೇಳಿದೆ.

CAA ನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡುವುದು ಸಂವಿಧಾನಬಾಹಿರವಾಗಿದೆ.

ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ತು ಅಂಗೀಕರಿಸಿದ ದೇಶದ ಕೆಲವು ಭಾಗಗಳಲ್ಲಿ ಭಾರಿ ಪ್ರತಿಭಟನೆಗಳು ನಡೆದವು. 2019ರ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಲೋಕಸಭೆ ಚುನಾವಣೆಯ ಘೋಷಣೆಗೆ ಮೊದಲೇ ಅಧಿಸೂಚನೆಯಲ್ಲಿ ಹೊರಡಿಸಲಾಗುವುದು. ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ನಾವು ಮುಂದಿನ ದಿನಗಳಲ್ಲಿ ಸಿಎಎ ನಿಯಮಗಳನ್ನು ಹೊರಡಿಸಲಿದ್ದೇವೆ. ನಿಯಮಗಳನ್ನು ಹೊರಡಿಸಿದ ನಂತರ, ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದರು.

ಅಸಾದ್ದುದ್ದೀನ್ ಓವೈಸಿ ಪ್ರತಿಕ್ರಿಯೆ:

ಈ ಕುರಿತು ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದ್ದುದ್ದೀನ್ ಓವೈಸಿ, ಇದು ಅಂಚಿನಲ್ಲಿರುವ ಸಮುದಾಯಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಮರಿಗೆ ದೊಡ್ಡ ಮಟ್ಟದಲ್ಲಿ ಅನ್ಯಾಯವಾಗಲಿದೆ. 2019ರಲ್ಲಿ ಅಂಗೀಕರಿಸಲಾದ ಕಾನೂನು ಧರ್ಮದ ಆಧಾರದಲ್ಲಿ ರೂಪುಗೊಂಡಿರುವುದರಿಂದ ಅದು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದರು.

ಸಿಎಎ ಸಂವಿಧಾನ ವಿರೋಧಿಯಾಗಿದೆ. ಇದು ಧರ್ಮದ ಆಧಾರದ ಮೇಲೆ ರಚಿಸಲಾದ ಕಾನೂನು. ಸಿಎಎನ್ನು ಎನ್‌ಪಿಆರ್-ಎನ್‌ಆರ್‌ಸಿಯೊಂದಿಗೆ ಓದಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಅದು ಈ ದೇಶದಲ್ಲಿ ನಿಮ್ಮ ಪೌರತ್ವವನ್ನು ಸಾಬೀತುಪಡಿಸಲು ಷರತ್ತುಗಳನ್ನು ವಿಧಿಸುತ್ತದೆ. ಅದು ಸಂಭವಿಸಿದಲ್ಲಿ ವಿಶೇಷವಾಗಿ ಮುಸ್ಲಿಮರು, ದಲಿತರು ಮತ್ತು ಭಾರತದ ಬಡವರಿಗೆ ಅವರು ಜಾತಿ ಅಥವಾ ಧರ್ಮವನ್ನು ಮೀರಿ ಗಂಭೀರ ಅನ್ಯಾಯವಾಗಲಿದೆ ಎಂದು ಅಸಾದ್ದುದ್ದೀನ್ ಓವೈಸಿ ಅವರು ಹೇಳಿದ್ದಾರೆ.

ಸೀತಾರಾಂ ಯೆಚೂರಿ ಪ್ರತಿಕ್ರಿಯೆ

ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರಕಾರವು ಕೋಮು ಧ್ರುವೀಕರಣಕ್ಕೆ ಪ್ರಚೋದಿಸಲು ಪ್ರಯತ್ನಿಸುತ್ತಿದೆ. ಈಗ ಅದು ಸ್ಪಷ್ಟವಾಗಿದೆ. ಇಷ್ಟು ವರ್ಷಗಳ ಕಾಲ ಈ ನಿಯಮಗಳ ಬಗ್ಗೆ ಯಾವುದೇ ಸೂಚನೆ ನೀಡಲಾಗಿಲ್ಲ. ಸ್ಪಷ್ಟವಾಗಿ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಈ ಬಗ್ಗೆ ನಿಯಮಾವಳಿಗಳನ್ನು ತರುತ್ತಾರೆ. ಇದನ್ನು  ಚುನಾವಣೆಯಲ್ಲಿ ಲಾಭ ಗಳಿಸಲು ಅಸ್ತ್ರವಾಗಿ ಬಳಸಲಾಗುತ್ತದೆ. ಇದು ಅವರ ಸ್ಪಷ್ಟ ಗುರಿಯಾಗಿದೆ ಎಂದು ಹೇಳಿದ್ದಾರೆ.

ಮನೀಶ್ ತಿವಾರಿ ಪ್ರತಿಕ್ರಿಯೆ

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಧರ್ಮದ ಆಧಾರದಲ್ಲಿ ಪೌರತ್ವ ನೀಡಲು ಸಾಧ್ಯವಿಲ್ಲ. ಸಂವಿಧಾನದ ಪೀಠಿಕೆಯಲ್ಲಿ ಜಾತ್ಯತೀತತೆಯನ್ನು ಪ್ರತಿಪಾದಿಸಿದ ದೇಶದಲ್ಲಿ ಧರ್ಮವು ಪೌರತ್ವಕ್ಕೆ ಆಧಾರವೇ? ಪ್ರಾದೇಶಿಕತೆ? ಉತ್ತರ ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 2019ರಲ್ಲಿ ನಾನು ಲೋಕಸಭೆಯಲ್ಲಿ ಸಿಎಎ ಮಸೂದೆಗೆ ವಿರೋಧವನ್ನು ವ್ಯಕ್ತಪಡಿಸಿದಾಗ ಈ ಪ್ರಶ್ನೆಯನ್ನು ಕೇಳಿದ್ದೆ. ಕಾಲ್ಪನಿಕವಾಗಿ ನಾಳೆ ಸರ್ಕಾರವು ಧರ್ಮವು ಪೌರತ್ವದ ಆಧಾರವಾಗಿದೆ ಎಂದು ವಾದಿಸಬಹುದು. ಪ್ರಾದೇಶಿಕವಾಗಿ ಜನ್ಮಸ್ಥಳವಲ್ಲ ಅಥವಾ ಭಾರತದ ಸಂವಿಧಾನ ಅಥವಾ ಪೌರತ್ವ ಕಾಯ್ದೆಯಲ್ಲಿನ ಪೌರತ್ವದ ಇತರ ಮಾನದಂಡವಲ್ಲ ಎಂದು ಹೇಳಬಹುದು ಎಂದು ಹೇಳಿದ್ದಾರೆ.

ಫಕ್ರುಲ್ ಹಸನ್ ಪ್ರತಿಕ್ರಿಯೆ

ಈ ಬಗ್ಗೆ ಮಾತನಾಡಿದ ಸಮಾಜವಾದಿ ಪಕ್ಷದ ವಕ್ತಾರ ಫಕ್ರುಲ್ ಹಸನ್, ಜನಸಾಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಈ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಉದ್ಯೋಗ ಒದಗಿಸುವುದು, ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅದಕ್ಕಾಗಿಯೇ ಅದು ದೇವಾಲಯಗಳು ಮತ್ತು ಮಸೀದಿಗಳು, ಸಿಎಎ ಮತ್ತು ಎನ್‌ಆರ್‌ಸಿಯಂತಹ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...