HomeಮುಖಪುಟCAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

- Advertisement -
- Advertisement -

ಲೋಕಸಭೆಗೆ ಚುನಾವಣೆ ಘೋಷಣೆ ಮೊದಲೇ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಾವಳಿಗಳ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರಕಾರವು ಸಜ್ಜಾಗಿದೆ ಎಂದು ಅಧಿಕಾರಿಯೋರ್ವರು ಹೇಳಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿವಾದಿತ ಸಿಎಎಯನ್ನು ಮುನ್ನೆಲೆಗೆ ತಂದಿರುವ ಬಗ್ಗೆ ಪ್ರತಿಪಕ್ಷಗಳು ವಿರೋಧವನ್ನು ವ್ಯಕ್ತಪಡಿಸಿದ್ದು, ಇದು ಬಿಜೆಪಿಯ ಚುನಾವಣಾ ಅಸ್ತ್ರ ಎಂದು ಹೇಳಿದೆ.

CAA ನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡುವುದು ಸಂವಿಧಾನಬಾಹಿರವಾಗಿದೆ.

ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ತು ಅಂಗೀಕರಿಸಿದ ದೇಶದ ಕೆಲವು ಭಾಗಗಳಲ್ಲಿ ಭಾರಿ ಪ್ರತಿಭಟನೆಗಳು ನಡೆದವು. 2019ರ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಲೋಕಸಭೆ ಚುನಾವಣೆಯ ಘೋಷಣೆಗೆ ಮೊದಲೇ ಅಧಿಸೂಚನೆಯಲ್ಲಿ ಹೊರಡಿಸಲಾಗುವುದು. ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ನಾವು ಮುಂದಿನ ದಿನಗಳಲ್ಲಿ ಸಿಎಎ ನಿಯಮಗಳನ್ನು ಹೊರಡಿಸಲಿದ್ದೇವೆ. ನಿಯಮಗಳನ್ನು ಹೊರಡಿಸಿದ ನಂತರ, ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದರು.

ಅಸಾದ್ದುದ್ದೀನ್ ಓವೈಸಿ ಪ್ರತಿಕ್ರಿಯೆ:

ಈ ಕುರಿತು ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದ್ದುದ್ದೀನ್ ಓವೈಸಿ, ಇದು ಅಂಚಿನಲ್ಲಿರುವ ಸಮುದಾಯಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಮರಿಗೆ ದೊಡ್ಡ ಮಟ್ಟದಲ್ಲಿ ಅನ್ಯಾಯವಾಗಲಿದೆ. 2019ರಲ್ಲಿ ಅಂಗೀಕರಿಸಲಾದ ಕಾನೂನು ಧರ್ಮದ ಆಧಾರದಲ್ಲಿ ರೂಪುಗೊಂಡಿರುವುದರಿಂದ ಅದು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದರು.

ಸಿಎಎ ಸಂವಿಧಾನ ವಿರೋಧಿಯಾಗಿದೆ. ಇದು ಧರ್ಮದ ಆಧಾರದ ಮೇಲೆ ರಚಿಸಲಾದ ಕಾನೂನು. ಸಿಎಎನ್ನು ಎನ್‌ಪಿಆರ್-ಎನ್‌ಆರ್‌ಸಿಯೊಂದಿಗೆ ಓದಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಅದು ಈ ದೇಶದಲ್ಲಿ ನಿಮ್ಮ ಪೌರತ್ವವನ್ನು ಸಾಬೀತುಪಡಿಸಲು ಷರತ್ತುಗಳನ್ನು ವಿಧಿಸುತ್ತದೆ. ಅದು ಸಂಭವಿಸಿದಲ್ಲಿ ವಿಶೇಷವಾಗಿ ಮುಸ್ಲಿಮರು, ದಲಿತರು ಮತ್ತು ಭಾರತದ ಬಡವರಿಗೆ ಅವರು ಜಾತಿ ಅಥವಾ ಧರ್ಮವನ್ನು ಮೀರಿ ಗಂಭೀರ ಅನ್ಯಾಯವಾಗಲಿದೆ ಎಂದು ಅಸಾದ್ದುದ್ದೀನ್ ಓವೈಸಿ ಅವರು ಹೇಳಿದ್ದಾರೆ.

ಸೀತಾರಾಂ ಯೆಚೂರಿ ಪ್ರತಿಕ್ರಿಯೆ

ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರಕಾರವು ಕೋಮು ಧ್ರುವೀಕರಣಕ್ಕೆ ಪ್ರಚೋದಿಸಲು ಪ್ರಯತ್ನಿಸುತ್ತಿದೆ. ಈಗ ಅದು ಸ್ಪಷ್ಟವಾಗಿದೆ. ಇಷ್ಟು ವರ್ಷಗಳ ಕಾಲ ಈ ನಿಯಮಗಳ ಬಗ್ಗೆ ಯಾವುದೇ ಸೂಚನೆ ನೀಡಲಾಗಿಲ್ಲ. ಸ್ಪಷ್ಟವಾಗಿ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಈ ಬಗ್ಗೆ ನಿಯಮಾವಳಿಗಳನ್ನು ತರುತ್ತಾರೆ. ಇದನ್ನು  ಚುನಾವಣೆಯಲ್ಲಿ ಲಾಭ ಗಳಿಸಲು ಅಸ್ತ್ರವಾಗಿ ಬಳಸಲಾಗುತ್ತದೆ. ಇದು ಅವರ ಸ್ಪಷ್ಟ ಗುರಿಯಾಗಿದೆ ಎಂದು ಹೇಳಿದ್ದಾರೆ.

ಮನೀಶ್ ತಿವಾರಿ ಪ್ರತಿಕ್ರಿಯೆ

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಧರ್ಮದ ಆಧಾರದಲ್ಲಿ ಪೌರತ್ವ ನೀಡಲು ಸಾಧ್ಯವಿಲ್ಲ. ಸಂವಿಧಾನದ ಪೀಠಿಕೆಯಲ್ಲಿ ಜಾತ್ಯತೀತತೆಯನ್ನು ಪ್ರತಿಪಾದಿಸಿದ ದೇಶದಲ್ಲಿ ಧರ್ಮವು ಪೌರತ್ವಕ್ಕೆ ಆಧಾರವೇ? ಪ್ರಾದೇಶಿಕತೆ? ಉತ್ತರ ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 2019ರಲ್ಲಿ ನಾನು ಲೋಕಸಭೆಯಲ್ಲಿ ಸಿಎಎ ಮಸೂದೆಗೆ ವಿರೋಧವನ್ನು ವ್ಯಕ್ತಪಡಿಸಿದಾಗ ಈ ಪ್ರಶ್ನೆಯನ್ನು ಕೇಳಿದ್ದೆ. ಕಾಲ್ಪನಿಕವಾಗಿ ನಾಳೆ ಸರ್ಕಾರವು ಧರ್ಮವು ಪೌರತ್ವದ ಆಧಾರವಾಗಿದೆ ಎಂದು ವಾದಿಸಬಹುದು. ಪ್ರಾದೇಶಿಕವಾಗಿ ಜನ್ಮಸ್ಥಳವಲ್ಲ ಅಥವಾ ಭಾರತದ ಸಂವಿಧಾನ ಅಥವಾ ಪೌರತ್ವ ಕಾಯ್ದೆಯಲ್ಲಿನ ಪೌರತ್ವದ ಇತರ ಮಾನದಂಡವಲ್ಲ ಎಂದು ಹೇಳಬಹುದು ಎಂದು ಹೇಳಿದ್ದಾರೆ.

ಫಕ್ರುಲ್ ಹಸನ್ ಪ್ರತಿಕ್ರಿಯೆ

ಈ ಬಗ್ಗೆ ಮಾತನಾಡಿದ ಸಮಾಜವಾದಿ ಪಕ್ಷದ ವಕ್ತಾರ ಫಕ್ರುಲ್ ಹಸನ್, ಜನಸಾಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಈ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಉದ್ಯೋಗ ಒದಗಿಸುವುದು, ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅದಕ್ಕಾಗಿಯೇ ಅದು ದೇವಾಲಯಗಳು ಮತ್ತು ಮಸೀದಿಗಳು, ಸಿಎಎ ಮತ್ತು ಎನ್‌ಆರ್‌ಸಿಯಂತಹ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...