HomeಮುಖಪುಟCAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

- Advertisement -
- Advertisement -

ಲೋಕಸಭೆಗೆ ಚುನಾವಣೆ ಘೋಷಣೆ ಮೊದಲೇ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಾವಳಿಗಳ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರಕಾರವು ಸಜ್ಜಾಗಿದೆ ಎಂದು ಅಧಿಕಾರಿಯೋರ್ವರು ಹೇಳಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿವಾದಿತ ಸಿಎಎಯನ್ನು ಮುನ್ನೆಲೆಗೆ ತಂದಿರುವ ಬಗ್ಗೆ ಪ್ರತಿಪಕ್ಷಗಳು ವಿರೋಧವನ್ನು ವ್ಯಕ್ತಪಡಿಸಿದ್ದು, ಇದು ಬಿಜೆಪಿಯ ಚುನಾವಣಾ ಅಸ್ತ್ರ ಎಂದು ಹೇಳಿದೆ.

CAA ನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡುವುದು ಸಂವಿಧಾನಬಾಹಿರವಾಗಿದೆ.

ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ತು ಅಂಗೀಕರಿಸಿದ ದೇಶದ ಕೆಲವು ಭಾಗಗಳಲ್ಲಿ ಭಾರಿ ಪ್ರತಿಭಟನೆಗಳು ನಡೆದವು. 2019ರ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಲೋಕಸಭೆ ಚುನಾವಣೆಯ ಘೋಷಣೆಗೆ ಮೊದಲೇ ಅಧಿಸೂಚನೆಯಲ್ಲಿ ಹೊರಡಿಸಲಾಗುವುದು. ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ನಾವು ಮುಂದಿನ ದಿನಗಳಲ್ಲಿ ಸಿಎಎ ನಿಯಮಗಳನ್ನು ಹೊರಡಿಸಲಿದ್ದೇವೆ. ನಿಯಮಗಳನ್ನು ಹೊರಡಿಸಿದ ನಂತರ, ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದರು.

ಅಸಾದ್ದುದ್ದೀನ್ ಓವೈಸಿ ಪ್ರತಿಕ್ರಿಯೆ:

ಈ ಕುರಿತು ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದ್ದುದ್ದೀನ್ ಓವೈಸಿ, ಇದು ಅಂಚಿನಲ್ಲಿರುವ ಸಮುದಾಯಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಮರಿಗೆ ದೊಡ್ಡ ಮಟ್ಟದಲ್ಲಿ ಅನ್ಯಾಯವಾಗಲಿದೆ. 2019ರಲ್ಲಿ ಅಂಗೀಕರಿಸಲಾದ ಕಾನೂನು ಧರ್ಮದ ಆಧಾರದಲ್ಲಿ ರೂಪುಗೊಂಡಿರುವುದರಿಂದ ಅದು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದರು.

ಸಿಎಎ ಸಂವಿಧಾನ ವಿರೋಧಿಯಾಗಿದೆ. ಇದು ಧರ್ಮದ ಆಧಾರದ ಮೇಲೆ ರಚಿಸಲಾದ ಕಾನೂನು. ಸಿಎಎನ್ನು ಎನ್‌ಪಿಆರ್-ಎನ್‌ಆರ್‌ಸಿಯೊಂದಿಗೆ ಓದಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಅದು ಈ ದೇಶದಲ್ಲಿ ನಿಮ್ಮ ಪೌರತ್ವವನ್ನು ಸಾಬೀತುಪಡಿಸಲು ಷರತ್ತುಗಳನ್ನು ವಿಧಿಸುತ್ತದೆ. ಅದು ಸಂಭವಿಸಿದಲ್ಲಿ ವಿಶೇಷವಾಗಿ ಮುಸ್ಲಿಮರು, ದಲಿತರು ಮತ್ತು ಭಾರತದ ಬಡವರಿಗೆ ಅವರು ಜಾತಿ ಅಥವಾ ಧರ್ಮವನ್ನು ಮೀರಿ ಗಂಭೀರ ಅನ್ಯಾಯವಾಗಲಿದೆ ಎಂದು ಅಸಾದ್ದುದ್ದೀನ್ ಓವೈಸಿ ಅವರು ಹೇಳಿದ್ದಾರೆ.

ಸೀತಾರಾಂ ಯೆಚೂರಿ ಪ್ರತಿಕ್ರಿಯೆ

ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರಕಾರವು ಕೋಮು ಧ್ರುವೀಕರಣಕ್ಕೆ ಪ್ರಚೋದಿಸಲು ಪ್ರಯತ್ನಿಸುತ್ತಿದೆ. ಈಗ ಅದು ಸ್ಪಷ್ಟವಾಗಿದೆ. ಇಷ್ಟು ವರ್ಷಗಳ ಕಾಲ ಈ ನಿಯಮಗಳ ಬಗ್ಗೆ ಯಾವುದೇ ಸೂಚನೆ ನೀಡಲಾಗಿಲ್ಲ. ಸ್ಪಷ್ಟವಾಗಿ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಈ ಬಗ್ಗೆ ನಿಯಮಾವಳಿಗಳನ್ನು ತರುತ್ತಾರೆ. ಇದನ್ನು  ಚುನಾವಣೆಯಲ್ಲಿ ಲಾಭ ಗಳಿಸಲು ಅಸ್ತ್ರವಾಗಿ ಬಳಸಲಾಗುತ್ತದೆ. ಇದು ಅವರ ಸ್ಪಷ್ಟ ಗುರಿಯಾಗಿದೆ ಎಂದು ಹೇಳಿದ್ದಾರೆ.

ಮನೀಶ್ ತಿವಾರಿ ಪ್ರತಿಕ್ರಿಯೆ

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಧರ್ಮದ ಆಧಾರದಲ್ಲಿ ಪೌರತ್ವ ನೀಡಲು ಸಾಧ್ಯವಿಲ್ಲ. ಸಂವಿಧಾನದ ಪೀಠಿಕೆಯಲ್ಲಿ ಜಾತ್ಯತೀತತೆಯನ್ನು ಪ್ರತಿಪಾದಿಸಿದ ದೇಶದಲ್ಲಿ ಧರ್ಮವು ಪೌರತ್ವಕ್ಕೆ ಆಧಾರವೇ? ಪ್ರಾದೇಶಿಕತೆ? ಉತ್ತರ ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 2019ರಲ್ಲಿ ನಾನು ಲೋಕಸಭೆಯಲ್ಲಿ ಸಿಎಎ ಮಸೂದೆಗೆ ವಿರೋಧವನ್ನು ವ್ಯಕ್ತಪಡಿಸಿದಾಗ ಈ ಪ್ರಶ್ನೆಯನ್ನು ಕೇಳಿದ್ದೆ. ಕಾಲ್ಪನಿಕವಾಗಿ ನಾಳೆ ಸರ್ಕಾರವು ಧರ್ಮವು ಪೌರತ್ವದ ಆಧಾರವಾಗಿದೆ ಎಂದು ವಾದಿಸಬಹುದು. ಪ್ರಾದೇಶಿಕವಾಗಿ ಜನ್ಮಸ್ಥಳವಲ್ಲ ಅಥವಾ ಭಾರತದ ಸಂವಿಧಾನ ಅಥವಾ ಪೌರತ್ವ ಕಾಯ್ದೆಯಲ್ಲಿನ ಪೌರತ್ವದ ಇತರ ಮಾನದಂಡವಲ್ಲ ಎಂದು ಹೇಳಬಹುದು ಎಂದು ಹೇಳಿದ್ದಾರೆ.

ಫಕ್ರುಲ್ ಹಸನ್ ಪ್ರತಿಕ್ರಿಯೆ

ಈ ಬಗ್ಗೆ ಮಾತನಾಡಿದ ಸಮಾಜವಾದಿ ಪಕ್ಷದ ವಕ್ತಾರ ಫಕ್ರುಲ್ ಹಸನ್, ಜನಸಾಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಈ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಉದ್ಯೋಗ ಒದಗಿಸುವುದು, ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅದಕ್ಕಾಗಿಯೇ ಅದು ದೇವಾಲಯಗಳು ಮತ್ತು ಮಸೀದಿಗಳು, ಸಿಎಎ ಮತ್ತು ಎನ್‌ಆರ್‌ಸಿಯಂತಹ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...