HomeಮುಖಪುಟCAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

CAA ಬಿಜೆಪಿಯ ಚುನಾವಣಾ ಅಸ್ತ್ರ: ಅಧಿಸೂಚನೆಗೆ ಪ್ರತಿಪಕ್ಷಗಳ ವಿರೋಧ

- Advertisement -
- Advertisement -

ಲೋಕಸಭೆಗೆ ಚುನಾವಣೆ ಘೋಷಣೆ ಮೊದಲೇ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಾವಳಿಗಳ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲು ಕೇಂದ್ರ ಸರಕಾರವು ಸಜ್ಜಾಗಿದೆ ಎಂದು ಅಧಿಕಾರಿಯೋರ್ವರು ಹೇಳಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿವಾದಿತ ಸಿಎಎಯನ್ನು ಮುನ್ನೆಲೆಗೆ ತಂದಿರುವ ಬಗ್ಗೆ ಪ್ರತಿಪಕ್ಷಗಳು ವಿರೋಧವನ್ನು ವ್ಯಕ್ತಪಡಿಸಿದ್ದು, ಇದು ಬಿಜೆಪಿಯ ಚುನಾವಣಾ ಅಸ್ತ್ರ ಎಂದು ಹೇಳಿದೆ.

CAA ನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡುವುದು ಸಂವಿಧಾನಬಾಹಿರವಾಗಿದೆ.

ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ತು ಅಂಗೀಕರಿಸಿದ ದೇಶದ ಕೆಲವು ಭಾಗಗಳಲ್ಲಿ ಭಾರಿ ಪ್ರತಿಭಟನೆಗಳು ನಡೆದವು. 2019ರ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ಲೋಕಸಭೆ ಚುನಾವಣೆಯ ಘೋಷಣೆಗೆ ಮೊದಲೇ ಅಧಿಸೂಚನೆಯಲ್ಲಿ ಹೊರಡಿಸಲಾಗುವುದು. ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ನಾವು ಮುಂದಿನ ದಿನಗಳಲ್ಲಿ ಸಿಎಎ ನಿಯಮಗಳನ್ನು ಹೊರಡಿಸಲಿದ್ದೇವೆ. ನಿಯಮಗಳನ್ನು ಹೊರಡಿಸಿದ ನಂತರ, ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದರು.

ಅಸಾದ್ದುದ್ದೀನ್ ಓವೈಸಿ ಪ್ರತಿಕ್ರಿಯೆ:

ಈ ಕುರಿತು ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದ್ದುದ್ದೀನ್ ಓವೈಸಿ, ಇದು ಅಂಚಿನಲ್ಲಿರುವ ಸಮುದಾಯಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಮರಿಗೆ ದೊಡ್ಡ ಮಟ್ಟದಲ್ಲಿ ಅನ್ಯಾಯವಾಗಲಿದೆ. 2019ರಲ್ಲಿ ಅಂಗೀಕರಿಸಲಾದ ಕಾನೂನು ಧರ್ಮದ ಆಧಾರದಲ್ಲಿ ರೂಪುಗೊಂಡಿರುವುದರಿಂದ ಅದು ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದರು.

ಸಿಎಎ ಸಂವಿಧಾನ ವಿರೋಧಿಯಾಗಿದೆ. ಇದು ಧರ್ಮದ ಆಧಾರದ ಮೇಲೆ ರಚಿಸಲಾದ ಕಾನೂನು. ಸಿಎಎನ್ನು ಎನ್‌ಪಿಆರ್-ಎನ್‌ಆರ್‌ಸಿಯೊಂದಿಗೆ ಓದಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಅದು ಈ ದೇಶದಲ್ಲಿ ನಿಮ್ಮ ಪೌರತ್ವವನ್ನು ಸಾಬೀತುಪಡಿಸಲು ಷರತ್ತುಗಳನ್ನು ವಿಧಿಸುತ್ತದೆ. ಅದು ಸಂಭವಿಸಿದಲ್ಲಿ ವಿಶೇಷವಾಗಿ ಮುಸ್ಲಿಮರು, ದಲಿತರು ಮತ್ತು ಭಾರತದ ಬಡವರಿಗೆ ಅವರು ಜಾತಿ ಅಥವಾ ಧರ್ಮವನ್ನು ಮೀರಿ ಗಂಭೀರ ಅನ್ಯಾಯವಾಗಲಿದೆ ಎಂದು ಅಸಾದ್ದುದ್ದೀನ್ ಓವೈಸಿ ಅವರು ಹೇಳಿದ್ದಾರೆ.

ಸೀತಾರಾಂ ಯೆಚೂರಿ ಪ್ರತಿಕ್ರಿಯೆ

ಈ ಕುರಿತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರಕಾರವು ಕೋಮು ಧ್ರುವೀಕರಣಕ್ಕೆ ಪ್ರಚೋದಿಸಲು ಪ್ರಯತ್ನಿಸುತ್ತಿದೆ. ಈಗ ಅದು ಸ್ಪಷ್ಟವಾಗಿದೆ. ಇಷ್ಟು ವರ್ಷಗಳ ಕಾಲ ಈ ನಿಯಮಗಳ ಬಗ್ಗೆ ಯಾವುದೇ ಸೂಚನೆ ನೀಡಲಾಗಿಲ್ಲ. ಸ್ಪಷ್ಟವಾಗಿ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಈ ಬಗ್ಗೆ ನಿಯಮಾವಳಿಗಳನ್ನು ತರುತ್ತಾರೆ. ಇದನ್ನು  ಚುನಾವಣೆಯಲ್ಲಿ ಲಾಭ ಗಳಿಸಲು ಅಸ್ತ್ರವಾಗಿ ಬಳಸಲಾಗುತ್ತದೆ. ಇದು ಅವರ ಸ್ಪಷ್ಟ ಗುರಿಯಾಗಿದೆ ಎಂದು ಹೇಳಿದ್ದಾರೆ.

ಮನೀಶ್ ತಿವಾರಿ ಪ್ರತಿಕ್ರಿಯೆ

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಧರ್ಮದ ಆಧಾರದಲ್ಲಿ ಪೌರತ್ವ ನೀಡಲು ಸಾಧ್ಯವಿಲ್ಲ. ಸಂವಿಧಾನದ ಪೀಠಿಕೆಯಲ್ಲಿ ಜಾತ್ಯತೀತತೆಯನ್ನು ಪ್ರತಿಪಾದಿಸಿದ ದೇಶದಲ್ಲಿ ಧರ್ಮವು ಪೌರತ್ವಕ್ಕೆ ಆಧಾರವೇ? ಪ್ರಾದೇಶಿಕತೆ? ಉತ್ತರ ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 2019ರಲ್ಲಿ ನಾನು ಲೋಕಸಭೆಯಲ್ಲಿ ಸಿಎಎ ಮಸೂದೆಗೆ ವಿರೋಧವನ್ನು ವ್ಯಕ್ತಪಡಿಸಿದಾಗ ಈ ಪ್ರಶ್ನೆಯನ್ನು ಕೇಳಿದ್ದೆ. ಕಾಲ್ಪನಿಕವಾಗಿ ನಾಳೆ ಸರ್ಕಾರವು ಧರ್ಮವು ಪೌರತ್ವದ ಆಧಾರವಾಗಿದೆ ಎಂದು ವಾದಿಸಬಹುದು. ಪ್ರಾದೇಶಿಕವಾಗಿ ಜನ್ಮಸ್ಥಳವಲ್ಲ ಅಥವಾ ಭಾರತದ ಸಂವಿಧಾನ ಅಥವಾ ಪೌರತ್ವ ಕಾಯ್ದೆಯಲ್ಲಿನ ಪೌರತ್ವದ ಇತರ ಮಾನದಂಡವಲ್ಲ ಎಂದು ಹೇಳಬಹುದು ಎಂದು ಹೇಳಿದ್ದಾರೆ.

ಫಕ್ರುಲ್ ಹಸನ್ ಪ್ರತಿಕ್ರಿಯೆ

ಈ ಬಗ್ಗೆ ಮಾತನಾಡಿದ ಸಮಾಜವಾದಿ ಪಕ್ಷದ ವಕ್ತಾರ ಫಕ್ರುಲ್ ಹಸನ್, ಜನಸಾಮಾನ್ಯರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಈ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಉದ್ಯೋಗ ಒದಗಿಸುವುದು, ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅದಕ್ಕಾಗಿಯೇ ಅದು ದೇವಾಲಯಗಳು ಮತ್ತು ಮಸೀದಿಗಳು, ಸಿಎಎ ಮತ್ತು ಎನ್‌ಆರ್‌ಸಿಯಂತಹ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...