Homeಮುಖಪುಟಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

- Advertisement -
- Advertisement -

ಹಿಂದುತ್ವ ವಿರುದ್ಧದ ವಿಚಾರವಾಗಿ ಭಾನುವಾರ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.

ಭಾನುವಾರ ಮುಸ್ಲಿಂ ರಾಷ್ಟ್ರೀಯ ಮಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಗುಂಪು ಹತ್ಯೆಗಳನ್ನು ಮಾಡುವ ತಪ್ಪಿತಸ್ಥರು ಹಿಂದುತ್ವ ವಿರೋಧಿಗಳು ಎಂದಿದ್ದರು.

ಸೋಮವಾರ ಸರಣಿ ಟ್ವೀಟ್‌ಗಳನನ್ನು ಮಾಡಿರುವ ಓವೈಸಿ, ಹಸುಗಳು ಮತ್ತು ಎಮ್ಮೆಗಳ ನಡುವಿನ ವ್ಯತ್ಯಾಸವನ್ನು ತಿಳಿದಿಲ್ಲದ ಈ ಅಪರಾಧಿಗಳಿಗೆ, ನಿರ್ದಿಷ್ಟ ಸಮುದಾಯದ ಹೆಸರುಗಳ ಆಧಾರದ ಮೇಲೆ ಜನರನ್ನು ಕೊಲ್ಲವ ಬಗೆ ಸಾಕಷ್ಟು ತಿಳಿದಿದೆ. ಈ ಅಪರಾಧಿಗಳಿಗೆ ಬೆನ್ನೆಲುಬಾಗಿ ಹಿಂದುತ್ವ ಸರ್ಕಾರ ಇದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಓವೈಸಿ ಸವಾಲು ಸ್ವೀಕರಿಸಿದ್ದೇವೆ, ಯುಪಿಯಲ್ಲಿ 300ಕ್ಕೂ ಅಧಿಕ ಸ್ಥಾನ ಪಡೆಯುತ್ತೇವೆ- ಯೋಗಿ ಆದಿತ್ಯನಾಥ್

 

“ಆರ್‌ಎಸ್‌ಎಸ್‌ನ ಭಾಗವತ್ ಅವರು ಗುಂಪುಹತ್ಯೆ ಮಾಡಿದವರು ‘ಹಿಂದುತ್ವ ವಿರೋಧಿ’ ಎಂದು ಹೇಳಿದ್ದಾರೆ. ಈ ಅಪರಾಧಿಗಳಿಗೆ ಹಸು ಮತ್ತು ಎಮ್ಮೆಯ ನಡುವಿನ ವ್ಯತ್ಯಾಸ ತಿಳಿದಿಲ್ಲ ಆದರೆ ಜುನೈದ್, ಅಖ್ಲಾಕ್, ಪೆಹ್ಲೂ, ರಕ್ಬರ್, ಅಲಿಮುದ್ದೀನ್ ಎಂಬ ಹೆಸರುಗಳ ಆಧಾರದ ಮೇಲೆ ಜನರನ್ನು ಕೊಲ್ಲವ ಬಗೆಯನ್ನು ಸಾಕಷ್ಟು ತಿಳಿದಿದ್ದಾರೆ. ಈ ಅಪರಾಧಿಗಳಿಗೆ ಹಿಂದುತ್ವ ಸರ್ಕಾರದ ಬೆಂಬಲವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಜೊತೆಗೆ ಕಳೆದ ಕೆಲವು ವರ್ಷಗಳಿಂದ ಮುಸ್ಲಿಮರ ಮೇಲೆ ಆಗುತ್ತಿರುವ ದಾಳಿಗಳನ್ನು ಉಲ್ಲೇಖಿಸಿದ್ದಾರೆ, 2015 ರಲ್ಲಿ ಮೊಹಮ್ಮದ್ ಅಖ್ಲಾಕ್ ಅವರ ಕ್ರೂರ ಹತ್ಯೆ, 2017 ರಲ್ಲಿ ಪೆಹ್ಲೂ ಖಾನ್ ಮೇಲೆ ನಡೆದ ದಾಳಿ ಮತ್ತು 2018 ರಲ್ಲಿ ಅಲಿಮುದ್ದೀನ್ ಸಾವುಗಳನ್ನು ಉಲ್ಲೇಖಿಸಿದ್ದಾರೆ.

“ಅಲಿಮುದ್ದೀನ್ ಕೊಲೆಗಾರರಿಗೆ ಕೇಂದ್ರ ಸಚಿವರ ಕೈಯಲ್ಲಿ ಹಾರ ಹಾಕಿಸಲಾಗುತ್ತದೆ. ಅಖ್ಲಾಕ್ ಕೊಲೆಗಾರನ ದೇಹದ ಮೇಲೆ ತ್ರಿವರ್ಣ ಧ್ವಜವನ್ನು ಹಾಕಲಾಗಿದೆ. ಆಸಿಫ್ ಕೊಲೆಗಾರರಿಗೆ ಬೆಂಬಲವಾಗಿ ಮಹಾಪಂಚಾಯತ್ ಅನ್ನು ಕರೆಯಲಾಗುತ್ತದೆ” ಎಂದು ಒತ್ತಿ ಹೇಳಿದ್ದಾರೆ.

“ಹೇಡಿತನ, ಹಿಂಸೆ ಮತ್ತು ಕೊಲೆ ಗಾಡ್ಸೆಯ ಹಿಂದುತ್ವ ಚಿಂತನೆಯ ಅವಿಭಾಜ್ಯ ಅಂಗವಾಗಿದೆ. ಮುಸ್ಲಿಮರನ್ನು ಹತ್ಯೆ ಮಾಡುವುದು ಈ ಚಿಂತನೆಯ ಪರಿಣಾಮವಾಗಿದೆ” ಎಂದು ಓವೈಸಿ ಟ್ವೀಟ್ ಮಾಡಿದ್ದಾರೆ.

ಮೋಹನ್ ಭಾಗವತ್ ಅವರು “ಗುಂಪು ಹತ್ಯೆ” ಯ ಅಪರಾಧಿಗಳನ್ನು ಶಿಕ್ಷಿಸಬೇಕು. ಆದರೂ “ಕೆಲವೊಮ್ಮೆ, ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಭಾನುವಾರ ಕಾರ್ಯಕ್ರಮದಲ್ಲಿ ಹೇಳಿದ್ದರು.

“ಹಸು ಪವಿತ್ರ ಪ್ರಾಣಿ. ಆದರೆ ಹಲ್ಲೆ ಮಾಡುವವರು ಕೂಡ ಹಿಂದುತ್ವದ ವಿರುದ್ಧ ಹೋಗುತ್ತಿದ್ದಾರೆ. ಕಾನೂನು ಯಾವುದೇ ಪಕ್ಷಪಾತವಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೋಹನ್ ಭಾಗವತ್ ಹೇಳಿದ್ದರು.

ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 100 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.


ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಸ್ಪರ್ಧೆ: ಓವೈಸಿ ಜೊತೆ ಮೈತ್ರಿ ತಳ್ಳಿ ಹಾಕಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...