Homeಮುಖಪುಟಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ಹಿಂದುತ್ವ ವಿಚಾರ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

- Advertisement -
- Advertisement -

ಹಿಂದುತ್ವ ವಿರುದ್ಧದ ವಿಚಾರವಾಗಿ ಭಾನುವಾರ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.

ಭಾನುವಾರ ಮುಸ್ಲಿಂ ರಾಷ್ಟ್ರೀಯ ಮಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಗುಂಪು ಹತ್ಯೆಗಳನ್ನು ಮಾಡುವ ತಪ್ಪಿತಸ್ಥರು ಹಿಂದುತ್ವ ವಿರೋಧಿಗಳು ಎಂದಿದ್ದರು.

ಸೋಮವಾರ ಸರಣಿ ಟ್ವೀಟ್‌ಗಳನನ್ನು ಮಾಡಿರುವ ಓವೈಸಿ, ಹಸುಗಳು ಮತ್ತು ಎಮ್ಮೆಗಳ ನಡುವಿನ ವ್ಯತ್ಯಾಸವನ್ನು ತಿಳಿದಿಲ್ಲದ ಈ ಅಪರಾಧಿಗಳಿಗೆ, ನಿರ್ದಿಷ್ಟ ಸಮುದಾಯದ ಹೆಸರುಗಳ ಆಧಾರದ ಮೇಲೆ ಜನರನ್ನು ಕೊಲ್ಲವ ಬಗೆ ಸಾಕಷ್ಟು ತಿಳಿದಿದೆ. ಈ ಅಪರಾಧಿಗಳಿಗೆ ಬೆನ್ನೆಲುಬಾಗಿ ಹಿಂದುತ್ವ ಸರ್ಕಾರ ಇದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಓವೈಸಿ ಸವಾಲು ಸ್ವೀಕರಿಸಿದ್ದೇವೆ, ಯುಪಿಯಲ್ಲಿ 300ಕ್ಕೂ ಅಧಿಕ ಸ್ಥಾನ ಪಡೆಯುತ್ತೇವೆ- ಯೋಗಿ ಆದಿತ್ಯನಾಥ್

 

“ಆರ್‌ಎಸ್‌ಎಸ್‌ನ ಭಾಗವತ್ ಅವರು ಗುಂಪುಹತ್ಯೆ ಮಾಡಿದವರು ‘ಹಿಂದುತ್ವ ವಿರೋಧಿ’ ಎಂದು ಹೇಳಿದ್ದಾರೆ. ಈ ಅಪರಾಧಿಗಳಿಗೆ ಹಸು ಮತ್ತು ಎಮ್ಮೆಯ ನಡುವಿನ ವ್ಯತ್ಯಾಸ ತಿಳಿದಿಲ್ಲ ಆದರೆ ಜುನೈದ್, ಅಖ್ಲಾಕ್, ಪೆಹ್ಲೂ, ರಕ್ಬರ್, ಅಲಿಮುದ್ದೀನ್ ಎಂಬ ಹೆಸರುಗಳ ಆಧಾರದ ಮೇಲೆ ಜನರನ್ನು ಕೊಲ್ಲವ ಬಗೆಯನ್ನು ಸಾಕಷ್ಟು ತಿಳಿದಿದ್ದಾರೆ. ಈ ಅಪರಾಧಿಗಳಿಗೆ ಹಿಂದುತ್ವ ಸರ್ಕಾರದ ಬೆಂಬಲವಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಜೊತೆಗೆ ಕಳೆದ ಕೆಲವು ವರ್ಷಗಳಿಂದ ಮುಸ್ಲಿಮರ ಮೇಲೆ ಆಗುತ್ತಿರುವ ದಾಳಿಗಳನ್ನು ಉಲ್ಲೇಖಿಸಿದ್ದಾರೆ, 2015 ರಲ್ಲಿ ಮೊಹಮ್ಮದ್ ಅಖ್ಲಾಕ್ ಅವರ ಕ್ರೂರ ಹತ್ಯೆ, 2017 ರಲ್ಲಿ ಪೆಹ್ಲೂ ಖಾನ್ ಮೇಲೆ ನಡೆದ ದಾಳಿ ಮತ್ತು 2018 ರಲ್ಲಿ ಅಲಿಮುದ್ದೀನ್ ಸಾವುಗಳನ್ನು ಉಲ್ಲೇಖಿಸಿದ್ದಾರೆ.

“ಅಲಿಮುದ್ದೀನ್ ಕೊಲೆಗಾರರಿಗೆ ಕೇಂದ್ರ ಸಚಿವರ ಕೈಯಲ್ಲಿ ಹಾರ ಹಾಕಿಸಲಾಗುತ್ತದೆ. ಅಖ್ಲಾಕ್ ಕೊಲೆಗಾರನ ದೇಹದ ಮೇಲೆ ತ್ರಿವರ್ಣ ಧ್ವಜವನ್ನು ಹಾಕಲಾಗಿದೆ. ಆಸಿಫ್ ಕೊಲೆಗಾರರಿಗೆ ಬೆಂಬಲವಾಗಿ ಮಹಾಪಂಚಾಯತ್ ಅನ್ನು ಕರೆಯಲಾಗುತ್ತದೆ” ಎಂದು ಒತ್ತಿ ಹೇಳಿದ್ದಾರೆ.

“ಹೇಡಿತನ, ಹಿಂಸೆ ಮತ್ತು ಕೊಲೆ ಗಾಡ್ಸೆಯ ಹಿಂದುತ್ವ ಚಿಂತನೆಯ ಅವಿಭಾಜ್ಯ ಅಂಗವಾಗಿದೆ. ಮುಸ್ಲಿಮರನ್ನು ಹತ್ಯೆ ಮಾಡುವುದು ಈ ಚಿಂತನೆಯ ಪರಿಣಾಮವಾಗಿದೆ” ಎಂದು ಓವೈಸಿ ಟ್ವೀಟ್ ಮಾಡಿದ್ದಾರೆ.

ಮೋಹನ್ ಭಾಗವತ್ ಅವರು “ಗುಂಪು ಹತ್ಯೆ” ಯ ಅಪರಾಧಿಗಳನ್ನು ಶಿಕ್ಷಿಸಬೇಕು. ಆದರೂ “ಕೆಲವೊಮ್ಮೆ, ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಭಾನುವಾರ ಕಾರ್ಯಕ್ರಮದಲ್ಲಿ ಹೇಳಿದ್ದರು.

“ಹಸು ಪವಿತ್ರ ಪ್ರಾಣಿ. ಆದರೆ ಹಲ್ಲೆ ಮಾಡುವವರು ಕೂಡ ಹಿಂದುತ್ವದ ವಿರುದ್ಧ ಹೋಗುತ್ತಿದ್ದಾರೆ. ಕಾನೂನು ಯಾವುದೇ ಪಕ್ಷಪಾತವಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೋಹನ್ ಭಾಗವತ್ ಹೇಳಿದ್ದರು.

ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 100 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.


ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಸ್ಪರ್ಧೆ: ಓವೈಸಿ ಜೊತೆ ಮೈತ್ರಿ ತಳ್ಳಿ ಹಾಕಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...