Homeಕರ್ನಾಟಕಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧಿಸಲಾಗಿದೆ.

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆದರೆ ಪ್ರತಿಭಟನೆಗೆ ಪೊಲೀಸರು ಅಡ್ಡಿ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ತೆರಳಿದ್ದ ಆಶಾ ಕಾರ್ಯಕರ್ತರನ್ನು ತುಮಕೂರು, ಮಂಡ್ಯ, ಮದ್ದೂರಿನಲ್ಲಿ ತಡೆಹಿಡಿಯಲಾಗಿದೆ ಎಂದು ದೂರಿದ್ದಾರೆ.

12,000 ರೂ. ಮಾಸಿಕ ಗೌರವಧನ ನಿಗದಿ, ಬಾಕಿಯಿರುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಆರಂಭಿಸಿರುವ ಆಶಾ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹತ್ತಿಕ್ಕುತ್ತಿದೆ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘವು ಪ್ರತಿಭಟನೆಯ ನೇತೃತ್ವ ವಹಿಸಿದೆ. ಜುಲೈನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?


“ನಮ್ಮನ್ನು ಸಾಂಕ್ರಾಮಿಕ ರೋಗದ ಮುಂಚೂಣಿಯ ಯೋಧರು ಎಂದು ಕರೆಯಲಾಗುತ್ತದೆ. ಆದರೆ ಯಾವುದೇ ಸುರಕ್ಷತೆಯಿಲ್ಲದೆ ಕರ್ತವ್ಯಕ್ಕೆ ಹೋಗುತ್ತಿದ್ದೇವೆ. ನಮಗೆ ಪಿಪಿಇ ಕಿಟ್‌ಗಳು ಬೇಕು. ಕನಿಷ್ಠ 12,000 ರೂ.ಗಳ ಸ್ಥಿರ ವೇತನವನ್ನು ನಾವು ಕೋರುತ್ತಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರ ಅಳಲು

ಎಷ್ಟು ಹೋರಾಡಿದರೂ ನಮ್ಮತ್ತ ತಿರುಗಿ ನೋಡದ ಸರ್ಕಾರ.. ನೀವಾದರೂ ನಮ್ಮೊಡನೆ ದನಿಯೆತ್ತಿ

Posted by Naanu Gauri on Wednesday, September 23, 2020

“ಪ್ರಸ್ತುತ ಆಶಾ ಕಾರ್ಯಕರ್ತರಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತಿದೆ. ಕೊರೊನಾ ಸಾಂಕ್ರಮಿಕ ಪ್ರಾರಂಭವಾದಾಗ ಸರ್ಕಾರ 3 ಸಾವಿರ ರೂ. ಗಳ ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಇದುವರೆಗೂ ನೀಡಿಲ್ಲ. ನಮ್ಮನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಹೆಸರಿಗೆ ಕರೆದು ನಮಗಾಗಿ ಚಪ್ಪಾಳೆ ತಟ್ಟಿದ್ದು ಮಾತ್ರವೇ ಬಂತು. ಆದರೆ ಸರ್ಕಾರ ನಮ್ಮ ಯಾವ ಬೇಡಿಕೆಯನ್ನು ಈಡೇರಿಸದೇ ಸಂಕಷ್ಟಕ್ಕೆ ನೂಕಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮಿ ಹೇಳಿದ್ದಾರೆ

ಆಶಾ ಕಾರ್ಯಕರ್ತೆಯರ ವೇತನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿ ಎಂಬ ಬೇಡಿಕೆಯೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಇಂದು ಜಿಲ್ಲಾ ಘಟಕಗಳ ಮುಖಂಡರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧನದ ಭೀತಿಯನ್ನು ಸರ್ಕಾರ ಒಡ್ಡುತ್ತಿದೆ. ಇದೇ ಏನು ಸರ್ಕಾರದ ಧೋರಣೆ. ಥೂ, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ” ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಕಾರ್ಯದರ್ಶಿಗಳಾದ ಕೆ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...