Homeಕರ್ನಾಟಕಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಆಶಾ ಕಾರ್ಯಕರ್ತೆಯರ ಮೇಲೆ ಪೊಲೀಸರ ದೌರ್ಜನ್ಯ, ಪ್ರತಿಭಟನೆಗೆ ಅಡ್ಡಿ ಆರೋಪ

ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧಿಸಲಾಗಿದೆ.

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆದರೆ ಪ್ರತಿಭಟನೆಗೆ ಪೊಲೀಸರು ಅಡ್ಡಿ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ತೆರಳಿದ್ದ ಆಶಾ ಕಾರ್ಯಕರ್ತರನ್ನು ತುಮಕೂರು, ಮಂಡ್ಯ, ಮದ್ದೂರಿನಲ್ಲಿ ತಡೆಹಿಡಿಯಲಾಗಿದೆ ಎಂದು ದೂರಿದ್ದಾರೆ.

12,000 ರೂ. ಮಾಸಿಕ ಗೌರವಧನ ನಿಗದಿ, ಬಾಕಿಯಿರುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಆರಂಭಿಸಿರುವ ಆಶಾ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹತ್ತಿಕ್ಕುತ್ತಿದೆ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘವು ಪ್ರತಿಭಟನೆಯ ನೇತೃತ್ವ ವಹಿಸಿದೆ. ಜುಲೈನಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ನೀಡಿದ್ದ ಭರವಸೆಗಳು ಈಡೇರದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?


“ನಮ್ಮನ್ನು ಸಾಂಕ್ರಾಮಿಕ ರೋಗದ ಮುಂಚೂಣಿಯ ಯೋಧರು ಎಂದು ಕರೆಯಲಾಗುತ್ತದೆ. ಆದರೆ ಯಾವುದೇ ಸುರಕ್ಷತೆಯಿಲ್ಲದೆ ಕರ್ತವ್ಯಕ್ಕೆ ಹೋಗುತ್ತಿದ್ದೇವೆ. ನಮಗೆ ಪಿಪಿಇ ಕಿಟ್‌ಗಳು ಬೇಕು. ಕನಿಷ್ಠ 12,000 ರೂ.ಗಳ ಸ್ಥಿರ ವೇತನವನ್ನು ನಾವು ಕೋರುತ್ತಿದ್ದೇವೆ. ಆದರೆ ಸರ್ಕಾರ ಸ್ಪಂದಿಸಿಲ್ಲ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರ ಅಳಲು

ಎಷ್ಟು ಹೋರಾಡಿದರೂ ನಮ್ಮತ್ತ ತಿರುಗಿ ನೋಡದ ಸರ್ಕಾರ.. ನೀವಾದರೂ ನಮ್ಮೊಡನೆ ದನಿಯೆತ್ತಿ

Posted by Naanu Gauri on Wednesday, September 23, 2020

“ಪ್ರಸ್ತುತ ಆಶಾ ಕಾರ್ಯಕರ್ತರಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತಿದೆ. ಕೊರೊನಾ ಸಾಂಕ್ರಮಿಕ ಪ್ರಾರಂಭವಾದಾಗ ಸರ್ಕಾರ 3 ಸಾವಿರ ರೂ. ಗಳ ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಇದುವರೆಗೂ ನೀಡಿಲ್ಲ. ನಮ್ಮನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಹೆಸರಿಗೆ ಕರೆದು ನಮಗಾಗಿ ಚಪ್ಪಾಳೆ ತಟ್ಟಿದ್ದು ಮಾತ್ರವೇ ಬಂತು. ಆದರೆ ಸರ್ಕಾರ ನಮ್ಮ ಯಾವ ಬೇಡಿಕೆಯನ್ನು ಈಡೇರಿಸದೇ ಸಂಕಷ್ಟಕ್ಕೆ ನೂಕಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮಿ ಹೇಳಿದ್ದಾರೆ

ಆಶಾ ಕಾರ್ಯಕರ್ತೆಯರ ವೇತನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿ ಎಂಬ ಬೇಡಿಕೆಯೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿದೆ. ಇಂದು ಜಿಲ್ಲಾ ಘಟಕಗಳ ಮುಖಂಡರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಇಂದು ಪ್ರತಿಭಟನೆ ಮಾಡಲು ಆಯಾ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ಅಲ್ಲಲ್ಲಿಯೇ ಬಲವಂತವಾಗಿ ತಡೆದು, ಬಂಧನದ ಭೀತಿಯನ್ನು ಸರ್ಕಾರ ಒಡ್ಡುತ್ತಿದೆ. ಇದೇ ಏನು ಸರ್ಕಾರದ ಧೋರಣೆ. ಥೂ, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ” ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಕಾರ್ಯದರ್ಶಿಗಳಾದ ಕೆ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಸರ್ಕಾರದ ವಿರುದ್ಧ ಗುಡುಗಿದ ಆಶಾ ಕಾರ್ಯಕರ್ತರು: ನಾಳೆ ಬೆಂಗಳೂರು ಚಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...