Homeಕರ್ನಾಟಕಸರ್ಕಾರದ ಸಂಧಾನ ವಿಫಲ : ಮುಂದುವರಿದ 'ಆಶಾ' ಕಾರ್ಯಕರ್ತೆಯರ ಮುಷ್ಕರ

ಸರ್ಕಾರದ ಸಂಧಾನ ವಿಫಲ : ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ

ಕೊರೆಯುವ ಚಳಿಯಲ್ಲಿ ರಸ್ತೆಯಲ್ಲೇ ರಾತ್ರಿ ಕಳೆದ ಮಹಿಳೆಯರು

- Advertisement -
- Advertisement -

ಮಾಸಿಕ 15,000 ರೂಪಾಯಿ ನಿಶ್ಚಿತ ಗೌರವಧನ ನಿಗದಿ ಮಾಡುವುದು ಸೇರಿದಂತೆ ಇತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರದಿಂದ (ಜ. 7) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ.

ಬುಧವಾರ (ಜ.8) ಪ್ರತಿಭಟನಾ ಸ್ಥಳಕ್ಕೆ ರಾಜ್ಯ ಸರ್ಕಾರದ ‌ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.

ಈ‌ ಸಂದರ್ಭದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಯೋಜಿತ ಯೋಜನೆಯ ಭಾಗವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಮತ್ತು ‌ಕೇಂದ್ರದ ಗೌರವಧನ ಸೇರಿಸಿ ಸದ್ಯಕ್ಕೆ 9,500 ರೂ. ಮುಂಗಡವಾಗಿ ನೀಡಲಾಗುವುದು. ಆದರೆ, ಆಶಾಗಳು ಮಾಡುವ ಕೆಲಸವು ಕಡಿಮೆಯಾದರೆ, ವ್ಯತ್ಯಾಸದ ಮೊತ್ತವನ್ನು ಈ 9,500ರೂ.ನಿಂದ ಕಡಿತ ಮಾಡಲಾಗುವುದು ಎಂದರು.

ಗೌರವಧನವನ್ನು ಹೆಚ್ಚುವರಿಯಾಗಿ ಹೆಚ್ಚಳ ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕುರಿತು ಮಾರ್ಚ್‌ನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಚರ್ಚಿಸಿ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಉಳಿದ ಬೇಡಿಕೆಗಳ ಕುರಿತು ಸಂಘದ ಜೊತೆಗೆ ಚರ್ಚೆ ನಡೆಸುವುದಾಗಿ, ಈಗ ಪ್ರತಿಭಟನೆಯನ್ನು ಕೈಬಿಟ್ಟು ಕೆಲಸಕ್ಕೆ ಹಿಂತಿರುಗಬೇಕೆಂದು ಸೂಚಿಸಿದರು.

ಸಚಿವರ ಭರವಸೆ ಕುರಿತು ಪ್ರತಿಕ್ರಿಯಿಸಿದ ಅಶಾ ಕಾರ್ಯಕರ್ತೆಯರ ಸಂಘದ ಮುಖಂಡರು, ಈಗಾಗಲೇ ಈ ಎಲ್ಲಾ ಸಮಸ್ಯೆಗಳ ಕುರಿತು ವಿವಿಧ ಹಂತಗಳಲ್ಲಿ 16ಕ್ಕೂ ಹೆಚ್ಚು ಸಭೆಗಳು ನಡೆದಿವೆ. ಆದರೆ, ಸಮಸ್ಯೆಗಳು ಬಗೆಹರಿದಿಲ್ಲ. ಅಲ್ಲದೇ ನಿಶ್ಚಿತವಾಗಿ 15,000 ಗೌರವಧನವನ್ನು ನಿಗದಿ ಮಾಡಬೇಕು. ಈ ಹಣದಲ್ಲಿ ಯಾವುದೇ ರೀತಿಯ ಕಡಿತ ಮಾಡಬಾರದು ಎಂಬುವುದು ಸಂಘದ ನಿಲುವಾಗಿದ್ದು, ಅದನ್ನು ಒಪ್ಪುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ತಿಳಿಸಿದರು.|

ಮುಷ್ಕರ ಮುಂದುವರೆದ ಹಿನ್ನೆಲೆ ಬುಧವಾರ ರಾತ್ರಿ ಫ್ರೀಡಂ ಪಾರ್ಕ್‌ ಮತ್ತು ಅದರ ಪಕ್ಕದ ರಸ್ತೆಗಳಲ್ಲಿ ಮೈ ಕೊರೆಯುವ ಚಳಿಯಲ್ಲಿ ಆಶಾ ಕಾರ್ಯಕರ್ತೆಯರು ಪುಟ್ಟ ಮಕ್ಕಳೊಂದಿಗೆ ರಾತ್ರಿ ಕಳೆದರು.

ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಬಂದ್; ಹೋಟೆಲ್, ಅಂಗಡಿ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...