Homeಕರ್ನಾಟಕಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಕರ್ನಾಟಕದ ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಕಳೆದ 9 ತಿಂಗಳುಗಳಿಂದಲೂ ಸಂಬಳ/ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಆಂಧ್ರಪ್ರದೇಶದಲ್ಲಿ ಇತ್ತಿಚಿಗಷ್ಟೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅಲ್ಲಿನ ಆಶಾ ಕಾರ್ಯಕರ್ತರ ಸಂಬಳವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಿ ಸುದ್ದಿಯಾಗಿದ್ದಾರೆ.

ಇದೇನಪ್ಪ ಇಷ್ಟು ತ್ವರಿತಗತಿಯಲ್ಲಿ ಇಂಥಾ ನಿರ್ಧಾರ ಅಂತಿರಾ. ಜಗನ್ ಮೋಹನ್ ರೆಡ್ಡಿ ಚುನಾವಣೆಗೂ ಮುನ್ನ ಆಂಧ್ರ ಪ್ರದೇಶದಲ್ಲಿ ಪಾದಯಾತ್ರೆ ನಡೆಸಿದ್ದ ಸಮಯದಲ್ಲಿ ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳದ ಕುರಿತು ಆಶ್ವಾಸನೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಜಗನ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ 42 ಸಾವಿರ ಆಶಾ ಕಾರ್ಯಕರ್ತರ ವೇತನವನ್ನು ದಿಡೀರ್ ಹತ್ತು ಸಾವಿರಕ್ಕೆ ಏರಿಸಿದ್ದಾರೆ. ಈ ಕಾರ್ಯಕ್ಕಾಗಿ ಅವರು ಅಭಿನಂದನಾರ್ಹರು.

ಯಾರಿದು ಆಶಾ ಕಾರ್ಯಕರ್ತರು?
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್( ಎನ್.ಆರ್.ಹೆಚ್.ಎಮ್)ನ ಅಡಿಯಲ್ಲಿ 2005ರಲ್ಲಿ ಜಾರಿಯಾದ ರಾಷ್ಟ್ರೀಯ ಸ್ವಾಸ್ಥ ಮಿಷನ್‍ನ ಯೋಜನೆಯ ಭಾಗವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯವನ್ನು ಉತ್ತಮಪಡಿಸಲು, ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿ ಆಶಾ ಹೆಸರಿನಲ್ಲಿ ಈ ಯೋಜನೆ ಪ್ರಾರಂಭವಾಯಿತು. 2012ರಲ್ಲಿ ಈ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಪ್ರಾರಂಭಿಸಲು ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆ ಇರಬೇಕು ಎಂಬ ನಿಯಮವನ್ನು ಜಾರಿ ಮಾಡಿದ್ದರು.

ಆದರೆ ಪ್ರತಿ ಹಳ್ಳಿಯಲ್ಲಿ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿಂದ ಕೆಲಸ ಮಾಡುವಂತಹ ಆಶಾ ಕಾರ್ಯಕರ್ತರ ಜೀವನದ ಬಗೆಗೂ ಕಾಳಜಿ ವಹಿಸಬೇಕಾದ ಜವಾಬ್ದಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮರೆತಿವೆ. ಬಹಳ ದಿನಗಳಿಂದ ಆಶಾ ಕಾರ್ಯಕರ್ತರಿಂದ ಹೆಚ್ಚು ಕೆಲಸ ಮಾಡಿಸಿ ಕಡಿಮೆ ಸಂಬಳವನ್ನು ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರನ್ನು ನಿರ್ಲಕ್ಷ್ಯ ಮಾಡಿವೆ. ಇವರನ್ನು ನೌಕರರನ್ನಾಗಿ ಪರಿಗಣಿಸುವುದಿಲ್ಲ ಬದಲಿಗೆ ಗುತ್ತಿಗೆ ಆಧಾರದಲ್ಲಿ ಸ್ಕೀಮ್ ವರ್ಕರ್ ಎಂದು ಕರೆಯಲಾಗುತ್ತಿದೆ. ಇ.ಎಸ್.ಐ, ಪಿ.ಎಫ್ ಯಾವುದೇ ಸೌಲಭ್ಯಗಳಿಲ್ಲದ ನತದೃಷ್ಟರು ಇವರು.

ಕರ್ನಾಟಕದ ಸ್ಥಿತಿಯೇನು?
ಕರ್ನಾಟಕದಲ್ಲಿ ಆಶಾ ಕಾರ್ಯಕರ್ತರ ಕೆಲಸವನ್ನು ಸೇವೆ ಎಂದು ಪರಿಗಣಿಸಿ ರಾಜ್ಯ ಸರ್ಕಾರ ಕೆಲವು ಸಾವಿರ ಗೌರವಧವನ್ನು ನೀಡಲಾಗುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಕೆಲಸ ಮಾಡುತ್ತಿದ್ದ ಮಹಿಳೆಯರು ವೇತನ ಹೆಚ್ಚಿಸಬೇಕೆಂದು ನೂರಾರು ಬಾರಿ ಹೋರಾಟ ಪ್ರತಿಭಟನೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ 2017ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ನಡೆದ ದೊಡ್ಡ ಹೋರಾಟ ಗಮನಸೆಳೆಯುವಂತದ್ದು. ತದನಂತರ ರಾಜ್ಯಸರ್ಕಾರ 3500 ರೂಗಳನ್ನು ಮಾಸಿಕ ವೇತನ ನಿಗದಿಗೊಳಿಸಿತು.

ಆದರೆ ಕೇಂದ್ರ ಸರ್ಕಾರ ಕೇವಲ ಪ್ರೋತ್ಸಾಹ ಧನ ಮಾತ್ರ ಕೊಡುತ್ತಿದೆ. ಗರ್ಭಿಣಿಗೆ ನೋವು ಬಂದೊಡನೆ ಯಾವುದೇ ಸಮಯವಾಗಿರಲಿ ಸುರಕ್ಷಿತ ಹೆರಿಗೆಗೆ ಹಳ್ಳಿಯಿಂದ ಜಿಲ್ಲೆ/ತಾಲೂಕು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿದರೆ ಆಶಾಗೆ ಸಿಗುವ ಪ್ರೋತ್ಸಾಹಧನ ಕೇವಲ ರೂ 200! ಬಾಣಂತಿಯ 45 ದಿನಗಳ ಆರೋಗ್ಯ ವಿಚಾರಣಾ ಭೇಟಿಗೆ ರೂ 250! ಚುಚ್ಚುಮದ್ದು ಹಾಕಿಸಿದರೆ ರೂ 50! ಗರ್ಭಿಣಿ ಮಹಿಳೆಗೆ ತಪಾಸಣೆ ಮಾಡಿಸಿ ಮಾತ್ರೆ ಕೊಡಿಸಿದರೆ ರೂ 75! ಲಾರ್ವಾ ಸರ್ವೆಗೆ ಮನೆಯೊಂದಕ್ಕೆ 1 ರೂ. ಮಾತ್ರ!! ಇವೆಲ್ಲಾ ಪ್ರೋತ್ಸಾಹಧನವಂತೆ! ಅದು ಅಲ್ಲದೇ ಕರ್ನಾಟಕದಲ್ಲಿ ಕಳೆದ 9 ತಿಂಗಳುಗಳಿಂದಲೂ ಈ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆಯಡಿ ಸುಮಾರು 40,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸುವ ಇವರು, ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆಯ ಅರಿವು ಮೂಡಿಸುತ್ತ, ಕ್ಷಯ, ಕುಷ್ಠ ರೋಗ, ಮಲೇರಿಯಾ, ಡೆಂಗ್ಯೂ, ಚಿಕುನ್‍ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಶ್ರಮಿಸುತ್ತಾ, ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಗ್ರಾಮೀಣ ಸಮಾಜದ ಆರೋಗ್ಯಕರ ಬದಲಾವಣೆಗೆ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಜಾರಿಯಾಗಿರುವ ವೇತನ ಕರ್ನಾಟಕದಲ್ಲಿ ಏಕೆ ಕೊಡಲು ಸಾಧ್ಯವಿಲ್ಲ? ಹಾಗೆ ನೋಡಿದರೆ ಆಂಧ್ರಕ್ಕಿಂತಲೂ ಕರ್ನಾಟಕದಲ್ಲಿಯೇ ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿದೆ ಅಲ್ಲವೇ? ಕಳೆದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯವರು ಈಗಿರುವ 3500 ರೂಗಳ ಜೊತೆಗೆ 500 ರೂ ಗಳನ್ನು ನವೆಂಬರ್ 1 ರಿಂದ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದರು! ಇವರಿಗೆ ಮಾನವೀಯತೆ ಇಲ್ಲವೇ? ಹಗಲು ರಾತ್ರಿ ದುಡಿಯುವ ಈ ಹೆಣ್ಣು ಮಕ್ಕಳಿಗೆ ಗೌರವಯುತವಾಗಿ ಬದುಕುವಷ್ಟು ಸಂಬಳ ನೀಡಲು ಹಿಂದೇಟು ಏಕೆ?

ಸಭೆಯೊಂದರಲ್ಲಿ ಡಿ ನಾಗಲಕ್ಷ್ಮಿಯವರು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಕರ್ನಾಟಕದಲ್ಲಿ ಈ ವಿಚಾರವಾಗಿ ಪ್ರಾಮಾಣಿಕವಾಗಿ ಮತ್ತು ನಿರಂತರವಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರನ್ನು ಮಾತನಾಡಿಸಿತು. ಅವರು “ಆಂಧ್ರದಲ್ಲಿನ ಆಶಾ ಕಾರ್ಯಕರ್ತರ ದುಡಿಮೆಗೆ ಅಲ್ಲಿನ ಸರ್ಕಾರ 10 ಸಾವಿರ ವೇತನ ನಿಗದಿ ಮಾಡುವ ಮೂಲಕ ಗೌರವಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ತಾಯಿ ಮರಣ, ಶಿಶುಮರಣ ದರ ಕಡಿಮೆಯಾಗುವಲ್ಲಿ ಆಶಾ ಕಾರ್ಯಕರ್ತರೆ ಮುಖ್ಯ ಕಾರಣರಾಗಿದ್ದಾರೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ವೇತನ 12 ಸಾವಿರ ಕೊಡಬೇಕೆಂಬ ನಮ್ಮ ಹಕ್ಕೊತ್ತಾಯವನ್ನು ಈಡೇರಿಸಿಲ್ಲ. ಹಾಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ರೂಪಿಸಲಿದ್ದೇವೆ. ನಾಗರೀಕ ಸಮಾಜನ ನಮಗೆ ಬೆಂಬಲ ನೀಡಬೇಕಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...