Homeಕರ್ನಾಟಕಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಕರ್ನಾಟಕದ ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಕಳೆದ 9 ತಿಂಗಳುಗಳಿಂದಲೂ ಸಂಬಳ/ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಆಂಧ್ರಪ್ರದೇಶದಲ್ಲಿ ಇತ್ತಿಚಿಗಷ್ಟೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅಲ್ಲಿನ ಆಶಾ ಕಾರ್ಯಕರ್ತರ ಸಂಬಳವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಿ ಸುದ್ದಿಯಾಗಿದ್ದಾರೆ.

ಇದೇನಪ್ಪ ಇಷ್ಟು ತ್ವರಿತಗತಿಯಲ್ಲಿ ಇಂಥಾ ನಿರ್ಧಾರ ಅಂತಿರಾ. ಜಗನ್ ಮೋಹನ್ ರೆಡ್ಡಿ ಚುನಾವಣೆಗೂ ಮುನ್ನ ಆಂಧ್ರ ಪ್ರದೇಶದಲ್ಲಿ ಪಾದಯಾತ್ರೆ ನಡೆಸಿದ್ದ ಸಮಯದಲ್ಲಿ ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳದ ಕುರಿತು ಆಶ್ವಾಸನೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಜಗನ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ 42 ಸಾವಿರ ಆಶಾ ಕಾರ್ಯಕರ್ತರ ವೇತನವನ್ನು ದಿಡೀರ್ ಹತ್ತು ಸಾವಿರಕ್ಕೆ ಏರಿಸಿದ್ದಾರೆ. ಈ ಕಾರ್ಯಕ್ಕಾಗಿ ಅವರು ಅಭಿನಂದನಾರ್ಹರು.

ಯಾರಿದು ಆಶಾ ಕಾರ್ಯಕರ್ತರು?
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್( ಎನ್.ಆರ್.ಹೆಚ್.ಎಮ್)ನ ಅಡಿಯಲ್ಲಿ 2005ರಲ್ಲಿ ಜಾರಿಯಾದ ರಾಷ್ಟ್ರೀಯ ಸ್ವಾಸ್ಥ ಮಿಷನ್‍ನ ಯೋಜನೆಯ ಭಾಗವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯವನ್ನು ಉತ್ತಮಪಡಿಸಲು, ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿ ಆಶಾ ಹೆಸರಿನಲ್ಲಿ ಈ ಯೋಜನೆ ಪ್ರಾರಂಭವಾಯಿತು. 2012ರಲ್ಲಿ ಈ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಪ್ರಾರಂಭಿಸಲು ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆ ಇರಬೇಕು ಎಂಬ ನಿಯಮವನ್ನು ಜಾರಿ ಮಾಡಿದ್ದರು.

ಆದರೆ ಪ್ರತಿ ಹಳ್ಳಿಯಲ್ಲಿ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿಂದ ಕೆಲಸ ಮಾಡುವಂತಹ ಆಶಾ ಕಾರ್ಯಕರ್ತರ ಜೀವನದ ಬಗೆಗೂ ಕಾಳಜಿ ವಹಿಸಬೇಕಾದ ಜವಾಬ್ದಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮರೆತಿವೆ. ಬಹಳ ದಿನಗಳಿಂದ ಆಶಾ ಕಾರ್ಯಕರ್ತರಿಂದ ಹೆಚ್ಚು ಕೆಲಸ ಮಾಡಿಸಿ ಕಡಿಮೆ ಸಂಬಳವನ್ನು ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರನ್ನು ನಿರ್ಲಕ್ಷ್ಯ ಮಾಡಿವೆ. ಇವರನ್ನು ನೌಕರರನ್ನಾಗಿ ಪರಿಗಣಿಸುವುದಿಲ್ಲ ಬದಲಿಗೆ ಗುತ್ತಿಗೆ ಆಧಾರದಲ್ಲಿ ಸ್ಕೀಮ್ ವರ್ಕರ್ ಎಂದು ಕರೆಯಲಾಗುತ್ತಿದೆ. ಇ.ಎಸ್.ಐ, ಪಿ.ಎಫ್ ಯಾವುದೇ ಸೌಲಭ್ಯಗಳಿಲ್ಲದ ನತದೃಷ್ಟರು ಇವರು.

ಕರ್ನಾಟಕದ ಸ್ಥಿತಿಯೇನು?
ಕರ್ನಾಟಕದಲ್ಲಿ ಆಶಾ ಕಾರ್ಯಕರ್ತರ ಕೆಲಸವನ್ನು ಸೇವೆ ಎಂದು ಪರಿಗಣಿಸಿ ರಾಜ್ಯ ಸರ್ಕಾರ ಕೆಲವು ಸಾವಿರ ಗೌರವಧವನ್ನು ನೀಡಲಾಗುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಕೆಲಸ ಮಾಡುತ್ತಿದ್ದ ಮಹಿಳೆಯರು ವೇತನ ಹೆಚ್ಚಿಸಬೇಕೆಂದು ನೂರಾರು ಬಾರಿ ಹೋರಾಟ ಪ್ರತಿಭಟನೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ 2017ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ನಡೆದ ದೊಡ್ಡ ಹೋರಾಟ ಗಮನಸೆಳೆಯುವಂತದ್ದು. ತದನಂತರ ರಾಜ್ಯಸರ್ಕಾರ 3500 ರೂಗಳನ್ನು ಮಾಸಿಕ ವೇತನ ನಿಗದಿಗೊಳಿಸಿತು.

ಆದರೆ ಕೇಂದ್ರ ಸರ್ಕಾರ ಕೇವಲ ಪ್ರೋತ್ಸಾಹ ಧನ ಮಾತ್ರ ಕೊಡುತ್ತಿದೆ. ಗರ್ಭಿಣಿಗೆ ನೋವು ಬಂದೊಡನೆ ಯಾವುದೇ ಸಮಯವಾಗಿರಲಿ ಸುರಕ್ಷಿತ ಹೆರಿಗೆಗೆ ಹಳ್ಳಿಯಿಂದ ಜಿಲ್ಲೆ/ತಾಲೂಕು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿದರೆ ಆಶಾಗೆ ಸಿಗುವ ಪ್ರೋತ್ಸಾಹಧನ ಕೇವಲ ರೂ 200! ಬಾಣಂತಿಯ 45 ದಿನಗಳ ಆರೋಗ್ಯ ವಿಚಾರಣಾ ಭೇಟಿಗೆ ರೂ 250! ಚುಚ್ಚುಮದ್ದು ಹಾಕಿಸಿದರೆ ರೂ 50! ಗರ್ಭಿಣಿ ಮಹಿಳೆಗೆ ತಪಾಸಣೆ ಮಾಡಿಸಿ ಮಾತ್ರೆ ಕೊಡಿಸಿದರೆ ರೂ 75! ಲಾರ್ವಾ ಸರ್ವೆಗೆ ಮನೆಯೊಂದಕ್ಕೆ 1 ರೂ. ಮಾತ್ರ!! ಇವೆಲ್ಲಾ ಪ್ರೋತ್ಸಾಹಧನವಂತೆ! ಅದು ಅಲ್ಲದೇ ಕರ್ನಾಟಕದಲ್ಲಿ ಕಳೆದ 9 ತಿಂಗಳುಗಳಿಂದಲೂ ಈ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆಯಡಿ ಸುಮಾರು 40,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸುವ ಇವರು, ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆಯ ಅರಿವು ಮೂಡಿಸುತ್ತ, ಕ್ಷಯ, ಕುಷ್ಠ ರೋಗ, ಮಲೇರಿಯಾ, ಡೆಂಗ್ಯೂ, ಚಿಕುನ್‍ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಶ್ರಮಿಸುತ್ತಾ, ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಗ್ರಾಮೀಣ ಸಮಾಜದ ಆರೋಗ್ಯಕರ ಬದಲಾವಣೆಗೆ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಜಾರಿಯಾಗಿರುವ ವೇತನ ಕರ್ನಾಟಕದಲ್ಲಿ ಏಕೆ ಕೊಡಲು ಸಾಧ್ಯವಿಲ್ಲ? ಹಾಗೆ ನೋಡಿದರೆ ಆಂಧ್ರಕ್ಕಿಂತಲೂ ಕರ್ನಾಟಕದಲ್ಲಿಯೇ ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿದೆ ಅಲ್ಲವೇ? ಕಳೆದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯವರು ಈಗಿರುವ 3500 ರೂಗಳ ಜೊತೆಗೆ 500 ರೂ ಗಳನ್ನು ನವೆಂಬರ್ 1 ರಿಂದ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದರು! ಇವರಿಗೆ ಮಾನವೀಯತೆ ಇಲ್ಲವೇ? ಹಗಲು ರಾತ್ರಿ ದುಡಿಯುವ ಈ ಹೆಣ್ಣು ಮಕ್ಕಳಿಗೆ ಗೌರವಯುತವಾಗಿ ಬದುಕುವಷ್ಟು ಸಂಬಳ ನೀಡಲು ಹಿಂದೇಟು ಏಕೆ?

ಸಭೆಯೊಂದರಲ್ಲಿ ಡಿ ನಾಗಲಕ್ಷ್ಮಿಯವರು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಕರ್ನಾಟಕದಲ್ಲಿ ಈ ವಿಚಾರವಾಗಿ ಪ್ರಾಮಾಣಿಕವಾಗಿ ಮತ್ತು ನಿರಂತರವಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರನ್ನು ಮಾತನಾಡಿಸಿತು. ಅವರು “ಆಂಧ್ರದಲ್ಲಿನ ಆಶಾ ಕಾರ್ಯಕರ್ತರ ದುಡಿಮೆಗೆ ಅಲ್ಲಿನ ಸರ್ಕಾರ 10 ಸಾವಿರ ವೇತನ ನಿಗದಿ ಮಾಡುವ ಮೂಲಕ ಗೌರವಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ತಾಯಿ ಮರಣ, ಶಿಶುಮರಣ ದರ ಕಡಿಮೆಯಾಗುವಲ್ಲಿ ಆಶಾ ಕಾರ್ಯಕರ್ತರೆ ಮುಖ್ಯ ಕಾರಣರಾಗಿದ್ದಾರೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ವೇತನ 12 ಸಾವಿರ ಕೊಡಬೇಕೆಂಬ ನಮ್ಮ ಹಕ್ಕೊತ್ತಾಯವನ್ನು ಈಡೇರಿಸಿಲ್ಲ. ಹಾಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ರೂಪಿಸಲಿದ್ದೇವೆ. ನಾಗರೀಕ ಸಮಾಜನ ನಮಗೆ ಬೆಂಬಲ ನೀಡಬೇಕಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...