Homeಕರ್ನಾಟಕಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಕರ್ನಾಟಕದ ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಕಳೆದ 9 ತಿಂಗಳುಗಳಿಂದಲೂ ಸಂಬಳ/ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಆಂಧ್ರಪ್ರದೇಶದಲ್ಲಿ ಇತ್ತಿಚಿಗಷ್ಟೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅಲ್ಲಿನ ಆಶಾ ಕಾರ್ಯಕರ್ತರ ಸಂಬಳವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಿ ಸುದ್ದಿಯಾಗಿದ್ದಾರೆ.

ಇದೇನಪ್ಪ ಇಷ್ಟು ತ್ವರಿತಗತಿಯಲ್ಲಿ ಇಂಥಾ ನಿರ್ಧಾರ ಅಂತಿರಾ. ಜಗನ್ ಮೋಹನ್ ರೆಡ್ಡಿ ಚುನಾವಣೆಗೂ ಮುನ್ನ ಆಂಧ್ರ ಪ್ರದೇಶದಲ್ಲಿ ಪಾದಯಾತ್ರೆ ನಡೆಸಿದ್ದ ಸಮಯದಲ್ಲಿ ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳದ ಕುರಿತು ಆಶ್ವಾಸನೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಜಗನ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ 42 ಸಾವಿರ ಆಶಾ ಕಾರ್ಯಕರ್ತರ ವೇತನವನ್ನು ದಿಡೀರ್ ಹತ್ತು ಸಾವಿರಕ್ಕೆ ಏರಿಸಿದ್ದಾರೆ. ಈ ಕಾರ್ಯಕ್ಕಾಗಿ ಅವರು ಅಭಿನಂದನಾರ್ಹರು.

ಯಾರಿದು ಆಶಾ ಕಾರ್ಯಕರ್ತರು?
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್( ಎನ್.ಆರ್.ಹೆಚ್.ಎಮ್)ನ ಅಡಿಯಲ್ಲಿ 2005ರಲ್ಲಿ ಜಾರಿಯಾದ ರಾಷ್ಟ್ರೀಯ ಸ್ವಾಸ್ಥ ಮಿಷನ್‍ನ ಯೋಜನೆಯ ಭಾಗವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯವನ್ನು ಉತ್ತಮಪಡಿಸಲು, ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿ ಆಶಾ ಹೆಸರಿನಲ್ಲಿ ಈ ಯೋಜನೆ ಪ್ರಾರಂಭವಾಯಿತು. 2012ರಲ್ಲಿ ಈ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಪ್ರಾರಂಭಿಸಲು ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆ ಇರಬೇಕು ಎಂಬ ನಿಯಮವನ್ನು ಜಾರಿ ಮಾಡಿದ್ದರು.

ಆದರೆ ಪ್ರತಿ ಹಳ್ಳಿಯಲ್ಲಿ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿಂದ ಕೆಲಸ ಮಾಡುವಂತಹ ಆಶಾ ಕಾರ್ಯಕರ್ತರ ಜೀವನದ ಬಗೆಗೂ ಕಾಳಜಿ ವಹಿಸಬೇಕಾದ ಜವಾಬ್ದಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮರೆತಿವೆ. ಬಹಳ ದಿನಗಳಿಂದ ಆಶಾ ಕಾರ್ಯಕರ್ತರಿಂದ ಹೆಚ್ಚು ಕೆಲಸ ಮಾಡಿಸಿ ಕಡಿಮೆ ಸಂಬಳವನ್ನು ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರನ್ನು ನಿರ್ಲಕ್ಷ್ಯ ಮಾಡಿವೆ. ಇವರನ್ನು ನೌಕರರನ್ನಾಗಿ ಪರಿಗಣಿಸುವುದಿಲ್ಲ ಬದಲಿಗೆ ಗುತ್ತಿಗೆ ಆಧಾರದಲ್ಲಿ ಸ್ಕೀಮ್ ವರ್ಕರ್ ಎಂದು ಕರೆಯಲಾಗುತ್ತಿದೆ. ಇ.ಎಸ್.ಐ, ಪಿ.ಎಫ್ ಯಾವುದೇ ಸೌಲಭ್ಯಗಳಿಲ್ಲದ ನತದೃಷ್ಟರು ಇವರು.

ಕರ್ನಾಟಕದ ಸ್ಥಿತಿಯೇನು?
ಕರ್ನಾಟಕದಲ್ಲಿ ಆಶಾ ಕಾರ್ಯಕರ್ತರ ಕೆಲಸವನ್ನು ಸೇವೆ ಎಂದು ಪರಿಗಣಿಸಿ ರಾಜ್ಯ ಸರ್ಕಾರ ಕೆಲವು ಸಾವಿರ ಗೌರವಧವನ್ನು ನೀಡಲಾಗುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಕೆಲಸ ಮಾಡುತ್ತಿದ್ದ ಮಹಿಳೆಯರು ವೇತನ ಹೆಚ್ಚಿಸಬೇಕೆಂದು ನೂರಾರು ಬಾರಿ ಹೋರಾಟ ಪ್ರತಿಭಟನೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ 2017ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ನಡೆದ ದೊಡ್ಡ ಹೋರಾಟ ಗಮನಸೆಳೆಯುವಂತದ್ದು. ತದನಂತರ ರಾಜ್ಯಸರ್ಕಾರ 3500 ರೂಗಳನ್ನು ಮಾಸಿಕ ವೇತನ ನಿಗದಿಗೊಳಿಸಿತು.

ಆದರೆ ಕೇಂದ್ರ ಸರ್ಕಾರ ಕೇವಲ ಪ್ರೋತ್ಸಾಹ ಧನ ಮಾತ್ರ ಕೊಡುತ್ತಿದೆ. ಗರ್ಭಿಣಿಗೆ ನೋವು ಬಂದೊಡನೆ ಯಾವುದೇ ಸಮಯವಾಗಿರಲಿ ಸುರಕ್ಷಿತ ಹೆರಿಗೆಗೆ ಹಳ್ಳಿಯಿಂದ ಜಿಲ್ಲೆ/ತಾಲೂಕು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿದರೆ ಆಶಾಗೆ ಸಿಗುವ ಪ್ರೋತ್ಸಾಹಧನ ಕೇವಲ ರೂ 200! ಬಾಣಂತಿಯ 45 ದಿನಗಳ ಆರೋಗ್ಯ ವಿಚಾರಣಾ ಭೇಟಿಗೆ ರೂ 250! ಚುಚ್ಚುಮದ್ದು ಹಾಕಿಸಿದರೆ ರೂ 50! ಗರ್ಭಿಣಿ ಮಹಿಳೆಗೆ ತಪಾಸಣೆ ಮಾಡಿಸಿ ಮಾತ್ರೆ ಕೊಡಿಸಿದರೆ ರೂ 75! ಲಾರ್ವಾ ಸರ್ವೆಗೆ ಮನೆಯೊಂದಕ್ಕೆ 1 ರೂ. ಮಾತ್ರ!! ಇವೆಲ್ಲಾ ಪ್ರೋತ್ಸಾಹಧನವಂತೆ! ಅದು ಅಲ್ಲದೇ ಕರ್ನಾಟಕದಲ್ಲಿ ಕಳೆದ 9 ತಿಂಗಳುಗಳಿಂದಲೂ ಈ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆಯಡಿ ಸುಮಾರು 40,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸುವ ಇವರು, ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆಯ ಅರಿವು ಮೂಡಿಸುತ್ತ, ಕ್ಷಯ, ಕುಷ್ಠ ರೋಗ, ಮಲೇರಿಯಾ, ಡೆಂಗ್ಯೂ, ಚಿಕುನ್‍ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಶ್ರಮಿಸುತ್ತಾ, ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಗ್ರಾಮೀಣ ಸಮಾಜದ ಆರೋಗ್ಯಕರ ಬದಲಾವಣೆಗೆ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಜಾರಿಯಾಗಿರುವ ವೇತನ ಕರ್ನಾಟಕದಲ್ಲಿ ಏಕೆ ಕೊಡಲು ಸಾಧ್ಯವಿಲ್ಲ? ಹಾಗೆ ನೋಡಿದರೆ ಆಂಧ್ರಕ್ಕಿಂತಲೂ ಕರ್ನಾಟಕದಲ್ಲಿಯೇ ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿದೆ ಅಲ್ಲವೇ? ಕಳೆದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯವರು ಈಗಿರುವ 3500 ರೂಗಳ ಜೊತೆಗೆ 500 ರೂ ಗಳನ್ನು ನವೆಂಬರ್ 1 ರಿಂದ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದರು! ಇವರಿಗೆ ಮಾನವೀಯತೆ ಇಲ್ಲವೇ? ಹಗಲು ರಾತ್ರಿ ದುಡಿಯುವ ಈ ಹೆಣ್ಣು ಮಕ್ಕಳಿಗೆ ಗೌರವಯುತವಾಗಿ ಬದುಕುವಷ್ಟು ಸಂಬಳ ನೀಡಲು ಹಿಂದೇಟು ಏಕೆ?

ಸಭೆಯೊಂದರಲ್ಲಿ ಡಿ ನಾಗಲಕ್ಷ್ಮಿಯವರು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಕರ್ನಾಟಕದಲ್ಲಿ ಈ ವಿಚಾರವಾಗಿ ಪ್ರಾಮಾಣಿಕವಾಗಿ ಮತ್ತು ನಿರಂತರವಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರನ್ನು ಮಾತನಾಡಿಸಿತು. ಅವರು “ಆಂಧ್ರದಲ್ಲಿನ ಆಶಾ ಕಾರ್ಯಕರ್ತರ ದುಡಿಮೆಗೆ ಅಲ್ಲಿನ ಸರ್ಕಾರ 10 ಸಾವಿರ ವೇತನ ನಿಗದಿ ಮಾಡುವ ಮೂಲಕ ಗೌರವಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ತಾಯಿ ಮರಣ, ಶಿಶುಮರಣ ದರ ಕಡಿಮೆಯಾಗುವಲ್ಲಿ ಆಶಾ ಕಾರ್ಯಕರ್ತರೆ ಮುಖ್ಯ ಕಾರಣರಾಗಿದ್ದಾರೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ವೇತನ 12 ಸಾವಿರ ಕೊಡಬೇಕೆಂಬ ನಮ್ಮ ಹಕ್ಕೊತ್ತಾಯವನ್ನು ಈಡೇರಿಸಿಲ್ಲ. ಹಾಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ರೂಪಿಸಲಿದ್ದೇವೆ. ನಾಗರೀಕ ಸಮಾಜನ ನಮಗೆ ಬೆಂಬಲ ನೀಡಬೇಕಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...