Homeಕರ್ನಾಟಕಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಕರ್ನಾಟಕದ ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಕಳೆದ 9 ತಿಂಗಳುಗಳಿಂದಲೂ ಸಂಬಳ/ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಆಂಧ್ರಪ್ರದೇಶದಲ್ಲಿ ಇತ್ತಿಚಿಗಷ್ಟೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅಲ್ಲಿನ ಆಶಾ ಕಾರ್ಯಕರ್ತರ ಸಂಬಳವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಿ ಸುದ್ದಿಯಾಗಿದ್ದಾರೆ.

ಇದೇನಪ್ಪ ಇಷ್ಟು ತ್ವರಿತಗತಿಯಲ್ಲಿ ಇಂಥಾ ನಿರ್ಧಾರ ಅಂತಿರಾ. ಜಗನ್ ಮೋಹನ್ ರೆಡ್ಡಿ ಚುನಾವಣೆಗೂ ಮುನ್ನ ಆಂಧ್ರ ಪ್ರದೇಶದಲ್ಲಿ ಪಾದಯಾತ್ರೆ ನಡೆಸಿದ್ದ ಸಮಯದಲ್ಲಿ ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳದ ಕುರಿತು ಆಶ್ವಾಸನೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಜಗನ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ 42 ಸಾವಿರ ಆಶಾ ಕಾರ್ಯಕರ್ತರ ವೇತನವನ್ನು ದಿಡೀರ್ ಹತ್ತು ಸಾವಿರಕ್ಕೆ ಏರಿಸಿದ್ದಾರೆ. ಈ ಕಾರ್ಯಕ್ಕಾಗಿ ಅವರು ಅಭಿನಂದನಾರ್ಹರು.

ಯಾರಿದು ಆಶಾ ಕಾರ್ಯಕರ್ತರು?
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್( ಎನ್.ಆರ್.ಹೆಚ್.ಎಮ್)ನ ಅಡಿಯಲ್ಲಿ 2005ರಲ್ಲಿ ಜಾರಿಯಾದ ರಾಷ್ಟ್ರೀಯ ಸ್ವಾಸ್ಥ ಮಿಷನ್‍ನ ಯೋಜನೆಯ ಭಾಗವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯವನ್ನು ಉತ್ತಮಪಡಿಸಲು, ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿ ಆಶಾ ಹೆಸರಿನಲ್ಲಿ ಈ ಯೋಜನೆ ಪ್ರಾರಂಭವಾಯಿತು. 2012ರಲ್ಲಿ ಈ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಪ್ರಾರಂಭಿಸಲು ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆ ಇರಬೇಕು ಎಂಬ ನಿಯಮವನ್ನು ಜಾರಿ ಮಾಡಿದ್ದರು.

ಆದರೆ ಪ್ರತಿ ಹಳ್ಳಿಯಲ್ಲಿ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿಂದ ಕೆಲಸ ಮಾಡುವಂತಹ ಆಶಾ ಕಾರ್ಯಕರ್ತರ ಜೀವನದ ಬಗೆಗೂ ಕಾಳಜಿ ವಹಿಸಬೇಕಾದ ಜವಾಬ್ದಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮರೆತಿವೆ. ಬಹಳ ದಿನಗಳಿಂದ ಆಶಾ ಕಾರ್ಯಕರ್ತರಿಂದ ಹೆಚ್ಚು ಕೆಲಸ ಮಾಡಿಸಿ ಕಡಿಮೆ ಸಂಬಳವನ್ನು ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರನ್ನು ನಿರ್ಲಕ್ಷ್ಯ ಮಾಡಿವೆ. ಇವರನ್ನು ನೌಕರರನ್ನಾಗಿ ಪರಿಗಣಿಸುವುದಿಲ್ಲ ಬದಲಿಗೆ ಗುತ್ತಿಗೆ ಆಧಾರದಲ್ಲಿ ಸ್ಕೀಮ್ ವರ್ಕರ್ ಎಂದು ಕರೆಯಲಾಗುತ್ತಿದೆ. ಇ.ಎಸ್.ಐ, ಪಿ.ಎಫ್ ಯಾವುದೇ ಸೌಲಭ್ಯಗಳಿಲ್ಲದ ನತದೃಷ್ಟರು ಇವರು.

ಕರ್ನಾಟಕದ ಸ್ಥಿತಿಯೇನು?
ಕರ್ನಾಟಕದಲ್ಲಿ ಆಶಾ ಕಾರ್ಯಕರ್ತರ ಕೆಲಸವನ್ನು ಸೇವೆ ಎಂದು ಪರಿಗಣಿಸಿ ರಾಜ್ಯ ಸರ್ಕಾರ ಕೆಲವು ಸಾವಿರ ಗೌರವಧವನ್ನು ನೀಡಲಾಗುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಕೆಲಸ ಮಾಡುತ್ತಿದ್ದ ಮಹಿಳೆಯರು ವೇತನ ಹೆಚ್ಚಿಸಬೇಕೆಂದು ನೂರಾರು ಬಾರಿ ಹೋರಾಟ ಪ್ರತಿಭಟನೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ 2017ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ನಡೆದ ದೊಡ್ಡ ಹೋರಾಟ ಗಮನಸೆಳೆಯುವಂತದ್ದು. ತದನಂತರ ರಾಜ್ಯಸರ್ಕಾರ 3500 ರೂಗಳನ್ನು ಮಾಸಿಕ ವೇತನ ನಿಗದಿಗೊಳಿಸಿತು.

ಆದರೆ ಕೇಂದ್ರ ಸರ್ಕಾರ ಕೇವಲ ಪ್ರೋತ್ಸಾಹ ಧನ ಮಾತ್ರ ಕೊಡುತ್ತಿದೆ. ಗರ್ಭಿಣಿಗೆ ನೋವು ಬಂದೊಡನೆ ಯಾವುದೇ ಸಮಯವಾಗಿರಲಿ ಸುರಕ್ಷಿತ ಹೆರಿಗೆಗೆ ಹಳ್ಳಿಯಿಂದ ಜಿಲ್ಲೆ/ತಾಲೂಕು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿದರೆ ಆಶಾಗೆ ಸಿಗುವ ಪ್ರೋತ್ಸಾಹಧನ ಕೇವಲ ರೂ 200! ಬಾಣಂತಿಯ 45 ದಿನಗಳ ಆರೋಗ್ಯ ವಿಚಾರಣಾ ಭೇಟಿಗೆ ರೂ 250! ಚುಚ್ಚುಮದ್ದು ಹಾಕಿಸಿದರೆ ರೂ 50! ಗರ್ಭಿಣಿ ಮಹಿಳೆಗೆ ತಪಾಸಣೆ ಮಾಡಿಸಿ ಮಾತ್ರೆ ಕೊಡಿಸಿದರೆ ರೂ 75! ಲಾರ್ವಾ ಸರ್ವೆಗೆ ಮನೆಯೊಂದಕ್ಕೆ 1 ರೂ. ಮಾತ್ರ!! ಇವೆಲ್ಲಾ ಪ್ರೋತ್ಸಾಹಧನವಂತೆ! ಅದು ಅಲ್ಲದೇ ಕರ್ನಾಟಕದಲ್ಲಿ ಕಳೆದ 9 ತಿಂಗಳುಗಳಿಂದಲೂ ಈ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆಯಡಿ ಸುಮಾರು 40,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸುವ ಇವರು, ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆಯ ಅರಿವು ಮೂಡಿಸುತ್ತ, ಕ್ಷಯ, ಕುಷ್ಠ ರೋಗ, ಮಲೇರಿಯಾ, ಡೆಂಗ್ಯೂ, ಚಿಕುನ್‍ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಶ್ರಮಿಸುತ್ತಾ, ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಗ್ರಾಮೀಣ ಸಮಾಜದ ಆರೋಗ್ಯಕರ ಬದಲಾವಣೆಗೆ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಜಾರಿಯಾಗಿರುವ ವೇತನ ಕರ್ನಾಟಕದಲ್ಲಿ ಏಕೆ ಕೊಡಲು ಸಾಧ್ಯವಿಲ್ಲ? ಹಾಗೆ ನೋಡಿದರೆ ಆಂಧ್ರಕ್ಕಿಂತಲೂ ಕರ್ನಾಟಕದಲ್ಲಿಯೇ ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿದೆ ಅಲ್ಲವೇ? ಕಳೆದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯವರು ಈಗಿರುವ 3500 ರೂಗಳ ಜೊತೆಗೆ 500 ರೂ ಗಳನ್ನು ನವೆಂಬರ್ 1 ರಿಂದ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದರು! ಇವರಿಗೆ ಮಾನವೀಯತೆ ಇಲ್ಲವೇ? ಹಗಲು ರಾತ್ರಿ ದುಡಿಯುವ ಈ ಹೆಣ್ಣು ಮಕ್ಕಳಿಗೆ ಗೌರವಯುತವಾಗಿ ಬದುಕುವಷ್ಟು ಸಂಬಳ ನೀಡಲು ಹಿಂದೇಟು ಏಕೆ?

ಸಭೆಯೊಂದರಲ್ಲಿ ಡಿ ನಾಗಲಕ್ಷ್ಮಿಯವರು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಕರ್ನಾಟಕದಲ್ಲಿ ಈ ವಿಚಾರವಾಗಿ ಪ್ರಾಮಾಣಿಕವಾಗಿ ಮತ್ತು ನಿರಂತರವಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರನ್ನು ಮಾತನಾಡಿಸಿತು. ಅವರು “ಆಂಧ್ರದಲ್ಲಿನ ಆಶಾ ಕಾರ್ಯಕರ್ತರ ದುಡಿಮೆಗೆ ಅಲ್ಲಿನ ಸರ್ಕಾರ 10 ಸಾವಿರ ವೇತನ ನಿಗದಿ ಮಾಡುವ ಮೂಲಕ ಗೌರವಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ತಾಯಿ ಮರಣ, ಶಿಶುಮರಣ ದರ ಕಡಿಮೆಯಾಗುವಲ್ಲಿ ಆಶಾ ಕಾರ್ಯಕರ್ತರೆ ಮುಖ್ಯ ಕಾರಣರಾಗಿದ್ದಾರೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ವೇತನ 12 ಸಾವಿರ ಕೊಡಬೇಕೆಂಬ ನಮ್ಮ ಹಕ್ಕೊತ್ತಾಯವನ್ನು ಈಡೇರಿಸಿಲ್ಲ. ಹಾಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ರೂಪಿಸಲಿದ್ದೇವೆ. ನಾಗರೀಕ ಸಮಾಜನ ನಮಗೆ ಬೆಂಬಲ ನೀಡಬೇಕಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...