Homeಕರ್ನಾಟಕಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಕರ್ನಾಟಕದ ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಕಳೆದ 9 ತಿಂಗಳುಗಳಿಂದಲೂ ಸಂಬಳ/ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಆಂಧ್ರಪ್ರದೇಶದಲ್ಲಿ ಇತ್ತಿಚಿಗಷ್ಟೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅಲ್ಲಿನ ಆಶಾ ಕಾರ್ಯಕರ್ತರ ಸಂಬಳವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಿ ಸುದ್ದಿಯಾಗಿದ್ದಾರೆ.

ಇದೇನಪ್ಪ ಇಷ್ಟು ತ್ವರಿತಗತಿಯಲ್ಲಿ ಇಂಥಾ ನಿರ್ಧಾರ ಅಂತಿರಾ. ಜಗನ್ ಮೋಹನ್ ರೆಡ್ಡಿ ಚುನಾವಣೆಗೂ ಮುನ್ನ ಆಂಧ್ರ ಪ್ರದೇಶದಲ್ಲಿ ಪಾದಯಾತ್ರೆ ನಡೆಸಿದ್ದ ಸಮಯದಲ್ಲಿ ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳದ ಕುರಿತು ಆಶ್ವಾಸನೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಜಗನ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ 42 ಸಾವಿರ ಆಶಾ ಕಾರ್ಯಕರ್ತರ ವೇತನವನ್ನು ದಿಡೀರ್ ಹತ್ತು ಸಾವಿರಕ್ಕೆ ಏರಿಸಿದ್ದಾರೆ. ಈ ಕಾರ್ಯಕ್ಕಾಗಿ ಅವರು ಅಭಿನಂದನಾರ್ಹರು.

ಯಾರಿದು ಆಶಾ ಕಾರ್ಯಕರ್ತರು?
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್( ಎನ್.ಆರ್.ಹೆಚ್.ಎಮ್)ನ ಅಡಿಯಲ್ಲಿ 2005ರಲ್ಲಿ ಜಾರಿಯಾದ ರಾಷ್ಟ್ರೀಯ ಸ್ವಾಸ್ಥ ಮಿಷನ್‍ನ ಯೋಜನೆಯ ಭಾಗವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯವನ್ನು ಉತ್ತಮಪಡಿಸಲು, ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿ ಆಶಾ ಹೆಸರಿನಲ್ಲಿ ಈ ಯೋಜನೆ ಪ್ರಾರಂಭವಾಯಿತು. 2012ರಲ್ಲಿ ಈ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಪ್ರಾರಂಭಿಸಲು ಪ್ರತಿ ಗ್ರಾಮದಲ್ಲೂ ಆಶಾ ಕಾರ್ಯಕರ್ತೆ ಇರಬೇಕು ಎಂಬ ನಿಯಮವನ್ನು ಜಾರಿ ಮಾಡಿದ್ದರು.

ಆದರೆ ಪ್ರತಿ ಹಳ್ಳಿಯಲ್ಲಿ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿಂದ ಕೆಲಸ ಮಾಡುವಂತಹ ಆಶಾ ಕಾರ್ಯಕರ್ತರ ಜೀವನದ ಬಗೆಗೂ ಕಾಳಜಿ ವಹಿಸಬೇಕಾದ ಜವಾಬ್ದಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮರೆತಿವೆ. ಬಹಳ ದಿನಗಳಿಂದ ಆಶಾ ಕಾರ್ಯಕರ್ತರಿಂದ ಹೆಚ್ಚು ಕೆಲಸ ಮಾಡಿಸಿ ಕಡಿಮೆ ಸಂಬಳವನ್ನು ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರನ್ನು ನಿರ್ಲಕ್ಷ್ಯ ಮಾಡಿವೆ. ಇವರನ್ನು ನೌಕರರನ್ನಾಗಿ ಪರಿಗಣಿಸುವುದಿಲ್ಲ ಬದಲಿಗೆ ಗುತ್ತಿಗೆ ಆಧಾರದಲ್ಲಿ ಸ್ಕೀಮ್ ವರ್ಕರ್ ಎಂದು ಕರೆಯಲಾಗುತ್ತಿದೆ. ಇ.ಎಸ್.ಐ, ಪಿ.ಎಫ್ ಯಾವುದೇ ಸೌಲಭ್ಯಗಳಿಲ್ಲದ ನತದೃಷ್ಟರು ಇವರು.

ಕರ್ನಾಟಕದ ಸ್ಥಿತಿಯೇನು?
ಕರ್ನಾಟಕದಲ್ಲಿ ಆಶಾ ಕಾರ್ಯಕರ್ತರ ಕೆಲಸವನ್ನು ಸೇವೆ ಎಂದು ಪರಿಗಣಿಸಿ ರಾಜ್ಯ ಸರ್ಕಾರ ಕೆಲವು ಸಾವಿರ ಗೌರವಧವನ್ನು ನೀಡಲಾಗುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಕೆಲಸ ಮಾಡುತ್ತಿದ್ದ ಮಹಿಳೆಯರು ವೇತನ ಹೆಚ್ಚಿಸಬೇಕೆಂದು ನೂರಾರು ಬಾರಿ ಹೋರಾಟ ಪ್ರತಿಭಟನೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ 2017ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ನಡೆದ ದೊಡ್ಡ ಹೋರಾಟ ಗಮನಸೆಳೆಯುವಂತದ್ದು. ತದನಂತರ ರಾಜ್ಯಸರ್ಕಾರ 3500 ರೂಗಳನ್ನು ಮಾಸಿಕ ವೇತನ ನಿಗದಿಗೊಳಿಸಿತು.

ಆದರೆ ಕೇಂದ್ರ ಸರ್ಕಾರ ಕೇವಲ ಪ್ರೋತ್ಸಾಹ ಧನ ಮಾತ್ರ ಕೊಡುತ್ತಿದೆ. ಗರ್ಭಿಣಿಗೆ ನೋವು ಬಂದೊಡನೆ ಯಾವುದೇ ಸಮಯವಾಗಿರಲಿ ಸುರಕ್ಷಿತ ಹೆರಿಗೆಗೆ ಹಳ್ಳಿಯಿಂದ ಜಿಲ್ಲೆ/ತಾಲೂಕು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿದರೆ ಆಶಾಗೆ ಸಿಗುವ ಪ್ರೋತ್ಸಾಹಧನ ಕೇವಲ ರೂ 200! ಬಾಣಂತಿಯ 45 ದಿನಗಳ ಆರೋಗ್ಯ ವಿಚಾರಣಾ ಭೇಟಿಗೆ ರೂ 250! ಚುಚ್ಚುಮದ್ದು ಹಾಕಿಸಿದರೆ ರೂ 50! ಗರ್ಭಿಣಿ ಮಹಿಳೆಗೆ ತಪಾಸಣೆ ಮಾಡಿಸಿ ಮಾತ್ರೆ ಕೊಡಿಸಿದರೆ ರೂ 75! ಲಾರ್ವಾ ಸರ್ವೆಗೆ ಮನೆಯೊಂದಕ್ಕೆ 1 ರೂ. ಮಾತ್ರ!! ಇವೆಲ್ಲಾ ಪ್ರೋತ್ಸಾಹಧನವಂತೆ! ಅದು ಅಲ್ಲದೇ ಕರ್ನಾಟಕದಲ್ಲಿ ಕಳೆದ 9 ತಿಂಗಳುಗಳಿಂದಲೂ ಈ ಪ್ರೋತ್ಸಾಹ ಧನ ನೀಡಿಲ್ಲ ಎಂದರೆ ನೀವು ನಂಬಲೇಬೇಕು.

ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆಯಡಿ ಸುಮಾರು 40,000 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸುವ ಇವರು, ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆಯ ಅರಿವು ಮೂಡಿಸುತ್ತ, ಕ್ಷಯ, ಕುಷ್ಠ ರೋಗ, ಮಲೇರಿಯಾ, ಡೆಂಗ್ಯೂ, ಚಿಕುನ್‍ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಶ್ರಮಿಸುತ್ತಾ, ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಗ್ರಾಮೀಣ ಸಮಾಜದ ಆರೋಗ್ಯಕರ ಬದಲಾವಣೆಗೆ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಜಾರಿಯಾಗಿರುವ ವೇತನ ಕರ್ನಾಟಕದಲ್ಲಿ ಏಕೆ ಕೊಡಲು ಸಾಧ್ಯವಿಲ್ಲ? ಹಾಗೆ ನೋಡಿದರೆ ಆಂಧ್ರಕ್ಕಿಂತಲೂ ಕರ್ನಾಟಕದಲ್ಲಿಯೇ ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿದೆ ಅಲ್ಲವೇ? ಕಳೆದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯವರು ಈಗಿರುವ 3500 ರೂಗಳ ಜೊತೆಗೆ 500 ರೂ ಗಳನ್ನು ನವೆಂಬರ್ 1 ರಿಂದ ಹೆಚ್ಚಳ ಮಾಡುತ್ತೇವೆ ಎಂದು ಘೋಷಿಸಿದ್ದರು! ಇವರಿಗೆ ಮಾನವೀಯತೆ ಇಲ್ಲವೇ? ಹಗಲು ರಾತ್ರಿ ದುಡಿಯುವ ಈ ಹೆಣ್ಣು ಮಕ್ಕಳಿಗೆ ಗೌರವಯುತವಾಗಿ ಬದುಕುವಷ್ಟು ಸಂಬಳ ನೀಡಲು ಹಿಂದೇಟು ಏಕೆ?

ಸಭೆಯೊಂದರಲ್ಲಿ ಡಿ ನಾಗಲಕ್ಷ್ಮಿಯವರು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಕರ್ನಾಟಕದಲ್ಲಿ ಈ ವಿಚಾರವಾಗಿ ಪ್ರಾಮಾಣಿಕವಾಗಿ ಮತ್ತು ನಿರಂತರವಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರನ್ನು ಮಾತನಾಡಿಸಿತು. ಅವರು “ಆಂಧ್ರದಲ್ಲಿನ ಆಶಾ ಕಾರ್ಯಕರ್ತರ ದುಡಿಮೆಗೆ ಅಲ್ಲಿನ ಸರ್ಕಾರ 10 ಸಾವಿರ ವೇತನ ನಿಗದಿ ಮಾಡುವ ಮೂಲಕ ಗೌರವಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ತಾಯಿ ಮರಣ, ಶಿಶುಮರಣ ದರ ಕಡಿಮೆಯಾಗುವಲ್ಲಿ ಆಶಾ ಕಾರ್ಯಕರ್ತರೆ ಮುಖ್ಯ ಕಾರಣರಾಗಿದ್ದಾರೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ವೇತನ 12 ಸಾವಿರ ಕೊಡಬೇಕೆಂಬ ನಮ್ಮ ಹಕ್ಕೊತ್ತಾಯವನ್ನು ಈಡೇರಿಸಿಲ್ಲ. ಹಾಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ರೂಪಿಸಲಿದ್ದೇವೆ. ನಾಗರೀಕ ಸಮಾಜನ ನಮಗೆ ಬೆಂಬಲ ನೀಡಬೇಕಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...