Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...