Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...