Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...