Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...