Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...