Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...