Homeಚಳವಳಿಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ 'ಚಲೋ ವಿಜಯವಾಡ'

ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

- Advertisement -
- Advertisement -

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ಕೂಡಲೇ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದರು. ದೇಶದ ಬೇರೆ ರಾಜ್ಯದ ಜನರೂ ಮೆಚ್ಚುಗೆ ವ್ಯಕ್ತಪಡಿಸಿದಂತಹ ಒಂದು ಘೋಷಣೆ ಆಶಾ ಕಾರ್ಯಕರ್ತೆಯರ ಸಂಬಳವನ್ನು 10000ಕ್ಕೆ ಹೆಚ್ಚಿಸುತ್ತೇನೆ ಎಂದು ಹೇಳಿದ್ದು. ಇದರಿಂದ ಆಶಾ ಕಾರ್ಯಕರ್ತೆಯರ ಸಂಘಟನೆಗಳೂ ಸೇರಿದಂತೆ ಬಹಳಷ್ಟು ಜನ ಜಗನ್ ರಿಗೆ ಮೆಚ್ಚುಗೆ ಸೂಚಿಸಿ ಈ ತೀಮಾರ್ನವನ್ನು ಸ್ವಾಗತಿಸಿದ್ದವು.

ಆದರೆ ಈಗ ಆಂಧ್ರ ಸರ್ಕಾರವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಆಗುತ್ತಿದ್ದರೂ ಸಂಬಳ ಹೆಚ್ಚು ಮಾಡುವುದು ಇರಲಿ ಎಂಟು ತಿಂಗಳಿಂದ ಕೊಡಬೇಕಾದ ಗೌರವಧನವನ್ನು ನೀಡದೆ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ತರುವ ಮೂಲಕ ‘ಆಶಾ’ ಕಾರ್ಯಕರ್ತರ ಕೆಲಸವನ್ನೆ ಅಭದ್ರತೆಯಲ್ಲಿ ಇಟ್ಟಿದ್ದಾರೆ. ಇದರ ವಿರುದ್ದ ಸೋಮವಾರ ಬೇರೆ ಬೇರೆ ಜಿಲ್ಲೆಯ ಸಾವಿರಾರು ಜನ ಆಶಾ ಕಾರ್ಯಕರ್ತೆಯರು ವಿಜಯವಾಡದ ಲೆನಿನ್ ಸರ್ಕಲ್‍ನಲ್ಲಿ ‘ಚಲೋ ವಿಜಯವಾಡ’ ಹೆಸರಿನಲ್ಲಿ ಬಹಿರಂಗ ಸಭೆ ಸೇರಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರ ಹೊಸದಾಗಿ ಗ್ರೇಡಿಂಗ್ ಪದ್ದತಿಯನ್ನು ಶುರು ಮಾಡಿದ್ದು, ಸರ್ಕಾರ ಆಶಾ ಕಾರ್ಯಕರ್ತರಿಗೆ ಎ.ಬಿ.ಸಿ ಎಂಬ ಗ್ರೇಡ್ ಗಳನ್ನು ನೀಡುವ  ವರ್ಕಿಂಗ್ ಚಾಟ್ ಬಿಡುಗಡೆ ಮಾಡಿದೆ. ಅದರಲ್ಲಿ 75 ರಿಂದ 100 ಪಾಯಿಂಟ್ ಗಳು ಬಂದರೆ ‘ಎ’ ಗ್ರೇಡ್, 74 ರಿಂದ 50ರವರೆಗೂ ‘ಬಿ’ ಗ್ರೇಡ್, ಮತ್ತು  49ಕ್ಕಿಂತ ಕಡಿಮೆ ಇದ್ದರೆ ‘ಸಿ’ ಗ್ರೇಡ್ ಕೊಡುತ್ತೇವೆಂದು ಸರ್ಕಾರ ಹೇಳುತ್ತಿದೆ. ಇದರ ಪ್ರಕಾರ ‘ಎ’ ಗ್ರೇಡ್‍ಗೆ 10000/-, ‘ಬಿ’ ಗ್ರೇಡ್‍ಗೆ 5000/-, ‘ಸಿ’ ಗ್ರೇಡ್‍ಗೆ 3000/- ಸಂಬಳ ಕೊಡಲು ಸರ್ಕಾರ ತಯಾರಿ ನಡೆಸಿದೆ. ಈ ಗ್ರೇಡ್ ಗಳನ್ನು ಯಾರು, ಯಾವ ಆಧಾರದಲ್ಲಿ ನೀಡುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ.

ಇದು ಆಶಾ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಸರ್ಕಾರ ಎಂಟು ತಿಂಗಳಿಂದ ಆಶಾ ಕಾರ್ಯಕರ್ತೆಯರ ಗೌರವಧನ ನೀಡದೆ ಸತಾಯಿಸುತ್ತಿರುವುದು ಸಹಾ ಅವರನ್ನು ಕೆರಳಿಸಿದೆ. ಆಂಧ್ರದಲ್ಲಿರುವ 42ಸಾವಿರ ಆಶಾ ಕಾರ್ಯಕರ್ತರಿಗೂ 10ಸಾವಿರ ಸಂಬಳ ನೀಡುವುದಾಗಿ ಘೋಷಿಸಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಜಗನ್ ಈಗ ಗ್ರೇಡಿಂಗ್ ಮೂಲಕ ಸಂಬಳ ವಂಚಿಸುತ್ತಿರುವುದನ್ನು ಬಹಳಷ್ಟು ಪ್ರಜ್ಞಾವಂತರು ವಿರೋಧಿಸಿದ್ದಾರೆ.

ಎಲ್ಲಾ ಸರ್ಕಾರಿ ವೆಬ್‍ಗಳಲ್ಲಿ ಆಶಾ ಕಾರ್ಯಕರ್ತರ ಹೆಸರಗಳನ್ನು ಸೇರಿಸಿದ್ದರೂ ಸಹ  ಸರ್ಕಾರಿ ನೌಕರರೆಂದು ಪರಿಗಣಿಸದೆ, ಗುರುತಿನ ಚೀಟಿ ಮತ್ತಿತರ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡುತ್ತಿದ್ಧಾರೆ, ನಮಗೆ ಉದ್ಯೋಗ ಭದ್ರತೆಯನ್ನು ನೀಡಬೇಕು ಮತ್ತು ಕೂಡಲೇ ಪ್ರತಿಯೊಬ್ಬರಿಗೂ 10000/- ಸಂಬಳವನ್ನು ನೀಡಬೇಕು ಎಂದು ಸಭೆಯಲ್ಲಿ ಆಂಧ್ರ ಆಶಾ ಯೂನಿಯನ್‍ನ ರಾಜ್ಯ ಮುಖಂಡರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಹೋರಾಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಹೊರಟಿದ್ದ ಸಾವಿರಾರು ಕಾರ್ಯಕರ್ತರನ್ನು ಪೋಲಿಸರು ತಡೆದಿದ್ದು, ಕೆಲವು ಕಡೆ ಬಂದಿಸಿದ್ದಾರೆ. ಆ ಮೂಲಕ ಪ್ರತಿಭಟನೆ ನಡೆಯದಂತೆ ತಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಪ್ರತಿಭಟನೆಯ ನೇತೃತ್ವವವನ್ನು ಆಶಾ ವರ್ಕರ್ಸ್ ಯೂನಿಯನ್ ನ ಪ್ರಧಾನ ಕಾರ್ಯದಶಿ ಧನಲಕ್ಷ್ಮಿ, ಸಿ.ಐ.ಟಿ.ಯು ರಾಜ್ಯ ಕಾರ್ಯದರ್ಶಿ ಯು.ಉಮಾ ಮಹೇಶ್ವರರಾವು, ರಾಜ್ಯ ಮುಖಂಡರಾದ ಸ್ವರೂಪರಾಣಿ, ಮುಜಾಫರ್ ಅಹಮದ್, ಆರ್.ವಿ. ನರಸಿಂಹರಾವು ಮುಂತಾದ ಮುಖಂಡರು ವಹಿಸಿದ್ದಾರೆ.

ಪ್ರತಿಭಟನೆಯ ನಂತರ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಮ್) ನಿರ್ದೇಶಕ ಕಾರ್ತಿಕೇಯ ಮಿಶ್ರಾ ‘ಸಿಎಮ್‍ಎಫ್‍ಎಸ್ ಸರ್ವರ್ ನಲ್ಲಿ ಸಾಂಕೇತಿಕ ಸಮಸ್ಯೆಗಳಿರುವುದರಿಂದ ಬಿಲ್ಲುಗಳು ನಿಂತಿವೆ. ಒಂದು ವಾರದಲ್ಲಿ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಆಶಾ ಕಾರ್ಯಕರ್ತರ ಹಕ್ಕೊತ್ತಾಯಗಳನ್ನು ಮತ್ತೊಮ್ಮೆ ಚರ್ಚಿಸುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ: ಆಶಾ ಕಾರ್ಯಕರ್ತರೆ ಆಸೆ ಈಡೇರಿಸಿದ ಆಂಧ್ರ ಸಿಎಂ ಜಗನ್ : ಆದರೆ ಕರ್ನಾಟಕದಲ್ಲಿ??

ಹೊಸ ಭರವಸೆಗಳು ಮತ್ತು ಹೊಸ ಘೋಷಣೆಗಳೊಂದಿಗೆ ಜನರ ಮತ ಪಡೆಯುವ ಸರ್ಕಾರಗಳು ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಮರೆಯುತ್ತವೆ ಎಂಬುದಕ್ಕೆ ಆಂಧ್ರದ ಈ ಉದಾಹರಣೆ ಮತ್ತೊಂದು ಸೇರ್ಪಡೆಯಾಗಿದೆ. ಆಂಧ್ರದಲ್ಲಿ ಹತ್ತು ಸಾವಿರ ಸಂಬಳ ಘೋಷಣೆ ಮಾಡಿದ್ದನ್ನು ನಾವು ಕೂಡ ಸ್ವಾಗತಿಸಿದ್ದೆವು. ಅವರು ಸುಮ್ಮನೆ ಘೋಷಣೆ ಮಾಡಿರಲಿಲ್ಲ. ಚುನಾವಣೆಯೂ ಮುಂಚೆ ಹಲವು ಯುನಿಯನ್‍ಗಳಿಲ್ಲಿರುವ ಆಶಾ ಹೆಣ್ಣುಮಕ್ಕಳು ಸತತ ಹೋರಾಟ ಮಾಡಿ ಒತ್ತಡ ತಂದಿದ್ದರು. ಆದರೆ ಈಗ ಅದನ್ನು ಜಾರಿಗೆ ತರದೆ ಇರುವುದು ವಿಷಾದನೀಯ. ಈ ಕುರಿತು ನಾವು ಕರ್ನಾಟಕದಲ್ಲಿಯೂ ಸಹ ಮುಂದಿನ ದಿನಗಳಲ್ಲಿ ದೊಡ್ಡ ಹೊರಾಟವನ್ನು ನಡೆಸುವ ಯೋಜನೆಯಲ್ಲಿ ಇದ್ದೇವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಕಾರ್ಯದರ್ಶಿಯಾದ ಡಿ.ನಾಗಲಕ್ಷಿಯವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...