Homeಮುಖಪುಟಕೇರಳ : ಆಶಾ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ, ಸಚಿವಾಲಯಕ್ಕೆ ಮುತ್ತಿಗೆ

ಕೇರಳ : ಆಶಾ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ, ಸಚಿವಾಲಯಕ್ಕೆ ಮುತ್ತಿಗೆ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಕೇರಳದ ನೂರಾರು ಆಶಾ ಕಾರ್ಯಕರ್ತರು ಸೋಮವಾರ (ಮಾ.17) ರಾಜ್ಯ ಸಚಿವಾಲಯಕ್ಕೆ ಮುತ್ತಿಗೆ ಹಾಕುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ನಿವೃತ್ತಿ ನಂತರದ ಸೌಲಭ್ಯಗಳು ಮತ್ತು ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತರು 36 ದಿನಗಳಿಂದ ತಿರುವನಂತಪುರಂನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮ್ಮ ಬೇಡಿಕೆಗಳ ಕುರಿತು ಅಧಿಕಾರಿಗಳಿಂದ ಯಾವುದೇ ಭರವಸೆ ಇನ್ನೂ ಸಿಗದ ಕಾರಣ, ಪ್ರತಿಭಟನಾಕಾರರು ಇಂದು ನಗರದ ಹೃದಯಭಾಗದಲ್ಲಿರುವ ಸಚಿವಾಲಯದ ವಿವಿಧ ದ್ವಾರಗಳಲ್ಲಿ ತಡೆಯೊಡ್ಡಿದರು. ಪ್ರತಿಭಟನಾ ಸ್ಥಳದಲ್ಲಿ ಒಟ್ಟುಗೂಡಿದ ನಂತರ, ಅವರು ಸಚಿವಾಲಯದ ಕಡೆಗೆ ತೆರಳಿ, ರಸ್ತೆಯಲ್ಲಿ ಕುಳಿತು ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಚಿವಾಲಯದ ಆವರಣದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸಚಿವಾಲಯದ ಒಳಗೆ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಪ್ರತಿಭಟನಾಕಾರರು ಸಚಿವಾಲಯದೊಳಗೆ ಪ್ರವೇಶಿಸದಂತೆ ತಡೆಯಲು 800 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಪ್ರತಿಭಟನೆಯಿಂದ ಸಚಿವಾಲಯದ ಸಾಮಾನ್ಯ ಕಾರ್ಯಚಟುವಟಿಕೆಗೆ ಯಾವುದೇ ಅಡ್ಡಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ, ಆಡಳಿತಾರೂಢ ಎಲ್‌ಡಿಎಫ್ ಆಶಾ ಕಾರ್ಯಕರ್ತರ ಹೋರಾಟವನ್ನು ಟೀಕಿಸಿದೆ. ಈ ಪ್ರತಿಭಟನೆಯ ಹಿಂದೆ ಗುಪ್ತ ಅಜೆಂಡಾ ಇದೆ ಎಂದಿದೆ.

“ಅವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕಿತ್ತು… ರಾಜ್ಯ ಸರ್ಕಾರದ ವಿರುದ್ಧ ಅಲ್ಲ” ಎಂದು ಹಿರಿಯ ಸಿಪಿಐ(ಎಂ) ನಾಯಕ ಮತ್ತು ಎಲ್‌ಡಿಎಫ್ ಸಂಚಾಲಕ ಟಿ.ಪಿ. ರಾಮಕೃಷ್ಣನ್ ಹೇಳಿದ್ದಾರೆ. ಆಶಾ ಕಾರ್ಯಕರ್ತರ ಹಿತಾಸಕ್ತಿಗಳನ್ನು ರಕ್ಷಿಸಲು ಎಲ್‌ಡಿಎಫ್ ಮತ್ತು ಸಿಪಿಐ(ಎಂ) ಯಾವಾಗಲೂ ಬದ್ದವಾಗಿದೆ ಎಂದಿದ್ದಾರೆ.

ಆಶಾ ಸೇರಿದಂತೆ ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಪಾವತಿಗಾಗಿ 2023-24 ರ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ ಎಂದು ಎಲ್‌ಡಿಎಫ್‌ ಸರ್ಕಾರ ಹೇಳಿಕೊಂಡಿದೆ.

ಆದರೆ, ಕೇಂದ್ರ ಸರ್ಕಾರವು ರಾಜ್ಯದ ಆರೋಪವನ್ನು ತಿರಸ್ಕರಿಸಿದೆ. ಬಾಕಿ ಹಣವನ್ನು ನೀಡಲಾಗಿದೆ. ಅದರ ಬಳಕೆಯ ಪ್ರಮಾಣಪತ್ರ ಕೇರಳದಿಂದ ಬಂದಿಲ್ಲ ಎಂದಿದೆ. ಪ್ರಮಾಣಪತ್ರ ಬಂದ ನಂತರ, ಅಗತ್ಯವಿರುವ ಮೊತ್ತವನ್ನು ಆಶಾ ಕಾರ್ಯಕರ್ತೆಯರಿಗೆ ಮತ್ತು ರಾಜ್ಯಕ್ಕೆ ನೀಡಲಾಗುವುದು ಎಂದು ಹೇಳಿದೆ.

ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ಎನ್‌ಹೆಚ್‌ಎಂನ ಮಿಷನ್ ಸ್ಟೀರಿಂಗ್ ಗ್ರೂಪ್ ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಸಂಸತ್ತಿಗೆ ಹೇಳಿದ್ದಾರೆ.

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...