Homeಕರ್ನಾಟಕಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರುವವರೆಗೂ ಕೆಲಸಕ್ಕೆ ಗೈರಾಗಲು ನಿರ್ಧಾರ..

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರುವವರೆಗೂ ಕೆಲಸಕ್ಕೆ ಗೈರಾಗಲು ನಿರ್ಧಾರ..

- Advertisement -
- Advertisement -

12000 ಸಂಬಳ, ಕೆಲಸದ ಭದ್ರತೆ, 15 ತಿಂಗಳಿನಿಂದ ಬರಬೇಕಾದ ಬಾಕಿ ಹಣ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ 30ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಡೆಸಿದ ಬೃಹತ್‌ ಪ್ರತಿಭಟನೆ ಕಡೆಗೂ ಅಂತ್ಯಕಂಡಿದೆ.

ಬೆಳಿಗ್ಗೆಯೇ ರೈಲುನಿಲ್ದಾಣದಿಂದ ಬೃಹತ್‌ ಮೆರವಣಿಗೆಯ ಮೂಲಕ ಫ್ರೀಡಂಪಾರ್ಕ್‌‌ನಲ್ಲಿ ಜಮಾಯಿಸಿದ ಮಹಿಳೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಆರೋಗ್ಯ ಮಂತ್ರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆಗಳನ್ನು ಸ್ಥಳದಲ್ಲಿಯೇ ಈಡೇರಿಸಬೇಕೆಂದು ಪಟ್ಟು ಹಿಡಿದಿದ್ದರು.

ಆದರೆ ಕೆಲಸದ ನಿಮಿತ್ತ ದೆಹಲಿಗೆ ತೆರಳಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳನ್ನು ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ತೆರಲಿ ಸಂಧಾನ ಸಭೆ ನಡೆಸುವಂತೆ ಆದೇಸಿಸಿದ್ದರು. ಆಶಾ ಕಾರ್ಯಕರ್ತೆಯರ ಏಳು ಬೇಡಿಕೆಗಳಿಗೂ ಒಪ್ಪಿಕೊಂಡು ಸಮಯಾವಕಾಶ ನೀಡುವಂತೆ ಸೂಚಿಸಿದ್ದರು.

ಅದರಂತೆ ಸ್ಥಳಕ್ಕೆ ಬಂದ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದರು. AIUTUC ವತಿಯಿಂದ ನಡೆದ ಹೋರಾಟವನ್ನು ಆಶಾ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿಯವರು ಮತ್ತು ಅಧ್ಯಕ್ಷರಾದ ಸೋಮಶೇಖರ್‌ ಯಾದಗಿರಿಯವರು ಮುನ್ನಡೆಸಿದ್ದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನವನ್ನು ಒಟ್ಟಿಗೆ ಸೇರಿಸಿ 12000 ಕೊಡಬೇಕು ಎಂದು ಹಕ್ಕೊತ್ತಾಯ ಮಾಡಲಾಗಿತ್ತು. ಇದಕ್ಕೆ ಒಪ್ಪಿದ ಸರ್ಕಾರ ಪ್ರತಿತಿಂಗಳು 10 ರಿಂದ 15ನೇ ತಾರೀಖಿನ ಒಳಗೆ ನೀಡುತ್ತೇವೆ ಎಂದು ಹೇಳಿದೆ. ಈಗ ರಾಜ್ಯ ಸರ್ಕಾರ ನಿಡುತ್ತಿರುವ ನಿಶ್ಚಿತ ಗೌರವಧನ 4ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಲು ಬಜೆಟ್‌ನಲ್ಲಿ ಮನವಿ ಮಾಡಲಾಗುವುದು ಎಂದು ಅಧಿಕಾರಗಳು ಹೇಳಿದ್ದಾರೆ.

ಆಶಾ ನಿಧಿ ತಂತ್ರಾಂಶಗಳನ್ನು ಮಾರ್ಚ್‌ ಒಳಗೆ ಸರಿಪಡಿಸಲಾಗುವುದು. ಅದರಲ್ಲಿ ಆಶಾ ಕಾರ್ಯಕರ್ತೆಯರ ವಿವರಗಳನ್ನು ಲಿಂಕ್‌ ಮಾಡುವುದನ್ನು ತೆಗೆಯಲು ಸರ್ಕಾರ ಒಪ್ಪಿದೆ.

ಪ್ರತಿತಿಂಗಳು ಸಚಿವರೊಂದಿಗೆ ಪ್ರತಿ ತಿಂಗಳು ಒಂದು ದಿನ ಆಶಾ ಕಾರ್ಯಕರ್ತೆಯರ ಸಂಘಟಕರೊಂದಿಗೆ ಸಭೆ ನಡೆಸಲಾಗುವುದು. ವಾಟ್ಸಾಪ್‌ ಗುಂಪು ಮಾಡಿ ಸಂವಾದ ನಡೆಸುವುದು.

15 ತಿಂಗಳಿಂದ ಬಾಕಿ ಇರುವ ವೇತನ ಪಾವತಿಗೆ ಸಂಬಂಧಿಸಿದಂತೆ ಸರಾಸರಿ ಮೊತ್ತ ಕೊಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದರಲ್ಲಿ ಭಾಗಶಃ ನಮ್ಮ ಹಕ್ಕೊತ್ತಾಯಗಳು ಈಡೇರಿವೆ. ಇನ್ನು ಕೆಲವು ಭರವಸೆಯ ರೂಪದಲ್ಲಿಯೇ ಇವೆ. ಹಾಗಾಗಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆಯನ್ನು ನಿಲ್ಲಿಸುತ್ತಿದ್ದೇವೆ. ಆದರೆ ಭರವಸೆ ಈಡೇರುವವರೆಗೂ ಕೆಲಸಕ್ಕೆ ತೆರಳುವುದಿಲ್ಲ. ಸರ್ಕಾರಕ್ಕೆ ಮಾರ್ಚ್‌‌ವರೆಗೆ ಗಡುವು ನೀಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...