Homeಕರ್ನಾಟಕಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರುವವರೆಗೂ ಕೆಲಸಕ್ಕೆ ಗೈರಾಗಲು ನಿರ್ಧಾರ..

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರುವವರೆಗೂ ಕೆಲಸಕ್ಕೆ ಗೈರಾಗಲು ನಿರ್ಧಾರ..

- Advertisement -
- Advertisement -

12000 ಸಂಬಳ, ಕೆಲಸದ ಭದ್ರತೆ, 15 ತಿಂಗಳಿನಿಂದ ಬರಬೇಕಾದ ಬಾಕಿ ಹಣ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ 30ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಡೆಸಿದ ಬೃಹತ್‌ ಪ್ರತಿಭಟನೆ ಕಡೆಗೂ ಅಂತ್ಯಕಂಡಿದೆ.

ಬೆಳಿಗ್ಗೆಯೇ ರೈಲುನಿಲ್ದಾಣದಿಂದ ಬೃಹತ್‌ ಮೆರವಣಿಗೆಯ ಮೂಲಕ ಫ್ರೀಡಂಪಾರ್ಕ್‌‌ನಲ್ಲಿ ಜಮಾಯಿಸಿದ ಮಹಿಳೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಆರೋಗ್ಯ ಮಂತ್ರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆಗಳನ್ನು ಸ್ಥಳದಲ್ಲಿಯೇ ಈಡೇರಿಸಬೇಕೆಂದು ಪಟ್ಟು ಹಿಡಿದಿದ್ದರು.

ಆದರೆ ಕೆಲಸದ ನಿಮಿತ್ತ ದೆಹಲಿಗೆ ತೆರಳಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳನ್ನು ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ತೆರಲಿ ಸಂಧಾನ ಸಭೆ ನಡೆಸುವಂತೆ ಆದೇಸಿಸಿದ್ದರು. ಆಶಾ ಕಾರ್ಯಕರ್ತೆಯರ ಏಳು ಬೇಡಿಕೆಗಳಿಗೂ ಒಪ್ಪಿಕೊಂಡು ಸಮಯಾವಕಾಶ ನೀಡುವಂತೆ ಸೂಚಿಸಿದ್ದರು.

ಅದರಂತೆ ಸ್ಥಳಕ್ಕೆ ಬಂದ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದರು. AIUTUC ವತಿಯಿಂದ ನಡೆದ ಹೋರಾಟವನ್ನು ಆಶಾ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿಯವರು ಮತ್ತು ಅಧ್ಯಕ್ಷರಾದ ಸೋಮಶೇಖರ್‌ ಯಾದಗಿರಿಯವರು ಮುನ್ನಡೆಸಿದ್ದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನವನ್ನು ಒಟ್ಟಿಗೆ ಸೇರಿಸಿ 12000 ಕೊಡಬೇಕು ಎಂದು ಹಕ್ಕೊತ್ತಾಯ ಮಾಡಲಾಗಿತ್ತು. ಇದಕ್ಕೆ ಒಪ್ಪಿದ ಸರ್ಕಾರ ಪ್ರತಿತಿಂಗಳು 10 ರಿಂದ 15ನೇ ತಾರೀಖಿನ ಒಳಗೆ ನೀಡುತ್ತೇವೆ ಎಂದು ಹೇಳಿದೆ. ಈಗ ರಾಜ್ಯ ಸರ್ಕಾರ ನಿಡುತ್ತಿರುವ ನಿಶ್ಚಿತ ಗೌರವಧನ 4ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಲು ಬಜೆಟ್‌ನಲ್ಲಿ ಮನವಿ ಮಾಡಲಾಗುವುದು ಎಂದು ಅಧಿಕಾರಗಳು ಹೇಳಿದ್ದಾರೆ.

ಆಶಾ ನಿಧಿ ತಂತ್ರಾಂಶಗಳನ್ನು ಮಾರ್ಚ್‌ ಒಳಗೆ ಸರಿಪಡಿಸಲಾಗುವುದು. ಅದರಲ್ಲಿ ಆಶಾ ಕಾರ್ಯಕರ್ತೆಯರ ವಿವರಗಳನ್ನು ಲಿಂಕ್‌ ಮಾಡುವುದನ್ನು ತೆಗೆಯಲು ಸರ್ಕಾರ ಒಪ್ಪಿದೆ.

ಪ್ರತಿತಿಂಗಳು ಸಚಿವರೊಂದಿಗೆ ಪ್ರತಿ ತಿಂಗಳು ಒಂದು ದಿನ ಆಶಾ ಕಾರ್ಯಕರ್ತೆಯರ ಸಂಘಟಕರೊಂದಿಗೆ ಸಭೆ ನಡೆಸಲಾಗುವುದು. ವಾಟ್ಸಾಪ್‌ ಗುಂಪು ಮಾಡಿ ಸಂವಾದ ನಡೆಸುವುದು.

15 ತಿಂಗಳಿಂದ ಬಾಕಿ ಇರುವ ವೇತನ ಪಾವತಿಗೆ ಸಂಬಂಧಿಸಿದಂತೆ ಸರಾಸರಿ ಮೊತ್ತ ಕೊಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದರಲ್ಲಿ ಭಾಗಶಃ ನಮ್ಮ ಹಕ್ಕೊತ್ತಾಯಗಳು ಈಡೇರಿವೆ. ಇನ್ನು ಕೆಲವು ಭರವಸೆಯ ರೂಪದಲ್ಲಿಯೇ ಇವೆ. ಹಾಗಾಗಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆಯನ್ನು ನಿಲ್ಲಿಸುತ್ತಿದ್ದೇವೆ. ಆದರೆ ಭರವಸೆ ಈಡೇರುವವರೆಗೂ ಕೆಲಸಕ್ಕೆ ತೆರಳುವುದಿಲ್ಲ. ಸರ್ಕಾರಕ್ಕೆ ಮಾರ್ಚ್‌‌ವರೆಗೆ ಗಡುವು ನೀಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...