Homeಕರ್ನಾಟಕಬೆಂಗಳೂರು ತುಂಬಿಕೊಂಡ ಆಶಾ ಕಾರ್ಯಕರ್ತರು: ಎಲ್ಲೆಲ್ಲೂ ಗುಲಾಬಿ ಬಣ್ಣ.. ಸರ್ಕಾರಕ್ಕೆ ದಿಟ್ಟ ಮಹಿಳೆಯರ ಖಡಕ್‌ ಎಚ್ಚರಿಕೆ

ಬೆಂಗಳೂರು ತುಂಬಿಕೊಂಡ ಆಶಾ ಕಾರ್ಯಕರ್ತರು: ಎಲ್ಲೆಲ್ಲೂ ಗುಲಾಬಿ ಬಣ್ಣ.. ಸರ್ಕಾರಕ್ಕೆ ದಿಟ್ಟ ಮಹಿಳೆಯರ ಖಡಕ್‌ ಎಚ್ಚರಿಕೆ

- Advertisement -
- Advertisement -

ಇಂದು ಬೆಂಗಳೂರು ಬೃಹತ್‌ ಆಶಾ ಕಾರ್ಯಕರ್ತರ ಮೆರವಣಿಗೆ ಮತ್ತು ದಿಟ್ಟ ಹೋರಾಟಕ್ಕೆ ಸಾಕ್ಷಿಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ಲಗ್ಗೆ ಇಟ್ಟ ಮಹಿಳೆಯರು ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೂ ಮೆರವಣಿಗೆ ನಡೆಸಿ ಗಮನ ಸೆಳೆದರು.

ಆನಂದ್‌ರಾವ್‌ ವೃತ್ತ ಸಂಪೂರ್ಣ ಗುಲಾಬಿ ಬಣ್ಣದಿಂದ ತುಂಬಿಹೋಗಿತ್ತು. ಗುಲಾಬಿ ಬಣ್ಣದ ಸೀರೆ ಕೈಯಲ್ಲಿ ಕೆಂಪು ಧ್ವಜ ಹಿಡಿದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆ ಕೂಗಿದ ಮಹಿಳೆಯರು ಕೂಡಲೇ ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಶಾಶ್ವತ ಉದ್ಯೋಗ ಭದ್ರತೆ, 12000 ವೇತನ ಮತ್ತು ಬಾಕಿ ಪಾವತಿಗಾಗಿ ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆಗಿಳಿದಿರುವ ಆಶಾ ಕಾರ್ಯಕರ್ತರು ಲಿಖಿತ ಭರವಸೆ ಸಿಗುವವರೆಗೂ ಪ್ರತಿಭಟನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಖಡಕ್‌ಆಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ದೆಹಲಿಯಲ್ಲಿದ್ದು ಆಶಾ ಕಾರ್ಯಕರ್ತರ ಸಂಬಳ ಹೆಚ್ಚು ಮಾಡುತ್ತೇವೆ. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತೇವೆ. ದಯವಿಟ್ಟು ಪ್ರತಿಭಟನೆ ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ದಿನ ಸಂಬಳ ನೀಡಬೇಕು, ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಶಾ ಕಾರ್ಯಕರ್ತರು ತಿಳಿಸಿದ್ದಾರೆ. ಈ ಕುರಿತು ಪರಿಶೀಲಿಸುತ್ತೇವೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

30 ಸಾವಿರಕ್ಕೂ ಹೆಚ್ಚು ಮಹಿಳೆಯರು ಒಟ್ಟುಗೂಡಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಆನಂದ್‌ ರಾವ್‌ ಸರ್ಕಲ್‌ ಸೇರಿದಂತೆ ಸುತ್ತಮುತ್ತಲ ರಸ್ತೆಗಳು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಹಾಗಾಗಿ ಟ್ರಾಫಿಕ್ ನಿಭಾಯಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಬಿ.ಶ್ರೀರಾಮುಲು ರವರ ಭರವಸೆ ಕುರಿತು ಪ್ರತಿಕ್ರಿಯಿಸಿರುವ ಪ್ರತಿಭಟನಾಕಾರರು ನಮಗೆ ಕೇವಲ ಭರವಸೆ ಬೇಡ. ಏಕೆಂದರೆ ಈ ಹಿಂದೆಯೂ ಹಲವು ಪ್ರತಿಭಟನೆ ನಡೆಸಿದ್ದೇವೆ. ಭರವಸೆಗಳು ಸಿಕ್ಕಿವೆಯೇ ಹೊರತು ಕೆಲಸ ಆಗಿಲ್ಲ. ಹಾಗಾಗಿ ನಮಗೆ ಸಂಬಳ ಹೆಚ್ಚಳದ ಆದೇಶ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಅನಿರ್ದಿಷ್ಠಾವಧಿ ಪ್ರತಿಭಟನೆಗೆ ಕರೆ ನೀಡಿರುವ ಮಹಿಳೆಯರು ಕಳೆದ ಸೆಪ್ಟಂಬರ್‌ನಲ್ಲಿ ಹೋರಾಟ ಮಾಡಿದರೂ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಹಾಗಾಗಿ ಈ ಬಾರಿ ಪ್ರತಿಫಲ ಸಿಗದೇ ವಾಪಸ್‌ ಹೋಗುವುದಿಲ್ಲ ಎಂದು ಧೃಡ ತೀರ್ಮಾನ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...