Homeಕರ್ನಾಟಕಬೆಂಗಳೂರು ತುಂಬಿಕೊಂಡ ಆಶಾ ಕಾರ್ಯಕರ್ತರು: ಎಲ್ಲೆಲ್ಲೂ ಗುಲಾಬಿ ಬಣ್ಣ.. ಸರ್ಕಾರಕ್ಕೆ ದಿಟ್ಟ ಮಹಿಳೆಯರ ಖಡಕ್‌ ಎಚ್ಚರಿಕೆ

ಬೆಂಗಳೂರು ತುಂಬಿಕೊಂಡ ಆಶಾ ಕಾರ್ಯಕರ್ತರು: ಎಲ್ಲೆಲ್ಲೂ ಗುಲಾಬಿ ಬಣ್ಣ.. ಸರ್ಕಾರಕ್ಕೆ ದಿಟ್ಟ ಮಹಿಳೆಯರ ಖಡಕ್‌ ಎಚ್ಚರಿಕೆ

- Advertisement -
- Advertisement -

ಇಂದು ಬೆಂಗಳೂರು ಬೃಹತ್‌ ಆಶಾ ಕಾರ್ಯಕರ್ತರ ಮೆರವಣಿಗೆ ಮತ್ತು ದಿಟ್ಟ ಹೋರಾಟಕ್ಕೆ ಸಾಕ್ಷಿಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ಲಗ್ಗೆ ಇಟ್ಟ ಮಹಿಳೆಯರು ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್‌‌ವರೆಗೂ ಮೆರವಣಿಗೆ ನಡೆಸಿ ಗಮನ ಸೆಳೆದರು.

ಆನಂದ್‌ರಾವ್‌ ವೃತ್ತ ಸಂಪೂರ್ಣ ಗುಲಾಬಿ ಬಣ್ಣದಿಂದ ತುಂಬಿಹೋಗಿತ್ತು. ಗುಲಾಬಿ ಬಣ್ಣದ ಸೀರೆ ಕೈಯಲ್ಲಿ ಕೆಂಪು ಧ್ವಜ ಹಿಡಿದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಘೋಷಣೆ ಕೂಗಿದ ಮಹಿಳೆಯರು ಕೂಡಲೇ ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

ಶಾಶ್ವತ ಉದ್ಯೋಗ ಭದ್ರತೆ, 12000 ವೇತನ ಮತ್ತು ಬಾಕಿ ಪಾವತಿಗಾಗಿ ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆಗಿಳಿದಿರುವ ಆಶಾ ಕಾರ್ಯಕರ್ತರು ಲಿಖಿತ ಭರವಸೆ ಸಿಗುವವರೆಗೂ ಪ್ರತಿಭಟನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಖಡಕ್‌ಆಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ದೆಹಲಿಯಲ್ಲಿದ್ದು ಆಶಾ ಕಾರ್ಯಕರ್ತರ ಸಂಬಳ ಹೆಚ್ಚು ಮಾಡುತ್ತೇವೆ. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತೇವೆ. ದಯವಿಟ್ಟು ಪ್ರತಿಭಟನೆ ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ದಿನ ಸಂಬಳ ನೀಡಬೇಕು, ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಶಾ ಕಾರ್ಯಕರ್ತರು ತಿಳಿಸಿದ್ದಾರೆ. ಈ ಕುರಿತು ಪರಿಶೀಲಿಸುತ್ತೇವೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

30 ಸಾವಿರಕ್ಕೂ ಹೆಚ್ಚು ಮಹಿಳೆಯರು ಒಟ್ಟುಗೂಡಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಆನಂದ್‌ ರಾವ್‌ ಸರ್ಕಲ್‌ ಸೇರಿದಂತೆ ಸುತ್ತಮುತ್ತಲ ರಸ್ತೆಗಳು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಹಾಗಾಗಿ ಟ್ರಾಫಿಕ್ ನಿಭಾಯಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಬಿ.ಶ್ರೀರಾಮುಲು ರವರ ಭರವಸೆ ಕುರಿತು ಪ್ರತಿಕ್ರಿಯಿಸಿರುವ ಪ್ರತಿಭಟನಾಕಾರರು ನಮಗೆ ಕೇವಲ ಭರವಸೆ ಬೇಡ. ಏಕೆಂದರೆ ಈ ಹಿಂದೆಯೂ ಹಲವು ಪ್ರತಿಭಟನೆ ನಡೆಸಿದ್ದೇವೆ. ಭರವಸೆಗಳು ಸಿಕ್ಕಿವೆಯೇ ಹೊರತು ಕೆಲಸ ಆಗಿಲ್ಲ. ಹಾಗಾಗಿ ನಮಗೆ ಸಂಬಳ ಹೆಚ್ಚಳದ ಆದೇಶ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಅನಿರ್ದಿಷ್ಠಾವಧಿ ಪ್ರತಿಭಟನೆಗೆ ಕರೆ ನೀಡಿರುವ ಮಹಿಳೆಯರು ಕಳೆದ ಸೆಪ್ಟಂಬರ್‌ನಲ್ಲಿ ಹೋರಾಟ ಮಾಡಿದರೂ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಹಾಗಾಗಿ ಈ ಬಾರಿ ಪ್ರತಿಫಲ ಸಿಗದೇ ವಾಪಸ್‌ ಹೋಗುವುದಿಲ್ಲ ಎಂದು ಧೃಡ ತೀರ್ಮಾನ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...