Homeಚಳವಳಿಕೊರೊನಾ ಕಾಲದಲ್ಲೂ 'ಆಶಾ'ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?

ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಜುಲೈ 10 ರಿಂದ ತಮ್ಮ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಅಲ್ಲದೆ ಇಂದು ಮುಖ್ಯಮಂತ್ರಿ ಮನೆ ಮುತ್ತಿಗೆಗೂ ಕರೆ ನೀಡಿದ್ದಾರೆ.

- Advertisement -
- Advertisement -

ಭಾರತದಂತಹ ದೇಶದಲ್ಲಿ ಪ್ರತಿಯೊಂದು ಗ್ರಾಮಗಳಿಗೂ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವೈದ್ಯರನ್ನು ಒದಗಿಸುವುದು ಯಾವ ಸರ್ಕಾರಗಳಿಗೂ ಈವರೆಗೆ ಸಾಧ್ಯವಾಗಿಲ್ಲ. ಹೀಗಾಗಿ ಭಾರತದಲ್ಲಿ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ಗ್ರಾಮೀಣ ಪ್ರದೇಶಗಳಲ್ಲಿ ಆಲದ ಬೇರಿನಂತೆ ಹರಡಿಕೊಂಡಿರುವ ಆಶಾ ಕಾರ್ಯಕರ್ತೆಯರ ಸೇವೆ ಬಡ ಜನರ ಪಾಲಿಗೆ ಜೀವಾಮೃತ ಎಂದರೂ ಅತಿಶಯೋಕ್ತಿಯಲ್ಲ.

ಆಶಾ ಕಾರ್ಯಕರ್ತೆಯರ ಕಾರ್ಯಕ್ಷೇತ್ರಕ್ಕೆ ನಿಗದಿತ ಚೌಕಟ್ಟಿಲ್ಲ. ಹಲವು ಕಾರ್ಯವಿಧಾನಗಳನ್ನು ಅನುಸರಿಸಿ ಇವರು ಕೆಲಸ ಮಾಡಬೇಕು. ತಳಮಟ್ಟದಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು ಸುರಕ್ಷಿತ ಹೆರಿಗೆ, ಆರೋಗ್ಯವಂತ ಶಿಶುವಿನ ಜನನ, ಆರೈಕೆ ಹಾಗೂ ಪೌಷ್ಟಿಕತೆಯ ಅರಿವು ಮೂಡಿಸುತ್ತಾ ಕ್ಷಯ, ಕುಷ್ಠ ರೋಗ, ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಅವಿರತ ಶ್ರಮಿಸುತ್ತಿದ್ದಾರೆ. ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿ ಕುರಿತು ಗ್ರಾಮೀಣ ಸಮಾಜದ ಆರೋಗ್ಯಕರ ಬದಲಾವಣೆಯಲ್ಲಿ ಇವರದ್ದು ಮೌನಕ್ರಾಂತಿ.

ಇನ್ನು ಈ ದೇಶಕ್ಕೆ ಕೊರೊನಾ ಹಾವಳಿ ಇಟ್ಟ ನಂತರ ಇವರ ಜವಾಬ್ದಾರಿಗಳು ಮತ್ತಷ್ಟು ಅಧಿಕವಾಗಿವೆ. ಜವಾಬ್ದಾರಿಗಳ ಜೊತೆ ಜೊತೆಗೆ ಅಪಾಯವೂ ಪೆಡಂಭೂತದಂತೆ ಬೆದರಿಕೆಯೊಡ್ಡಿರುವುದು ಸುಳ್ಳಲ್ಲ. ಆದರೆ, ಇದ್ಯಾವ ಬೆದರಿಕೆಗೂ ಜಗ್ಗದ ಆಶಾ ಕಾರ್ಯಕರ್ತೆಯರು ಈವರೆಗೆ ತಮ್ಮ ಕೆಲಸವನ್ನು ಚಾಚೂ ತಪ್ಪದೆ ಪಾಲಿಸುತ್ತಾ-ನಿರ್ವಹಿಸುತ್ತಾ ಬಂದಿದ್ದಾರೆ.

ಕೊರೊನಾ ರೋಗಿಗಳ ಕುರಿತು ಮಾಹಿತಿ ಕಲೆ ಹಾಕಲು ತೆರಳಿದ್ದ ಸಂದರ್ಭದಲ್ಲೂ ಸಹ ಆಶಾ ಕಾರ್ಯಕರ್ತೆಯರ ಮೇಲೆ ಜನ ಹಲ್ಲೆಗೆ ಮುಂದಾದ ಕುರಿತು ಸಾಕಷ್ಟು ವರದಿಗಳಾಗಿದ್ದವು. ಆದರೆ, ಯಾವ ಹಲ್ಲೆಗಳು-ಅಪಾಯಗಳಿಗೂ ಸ್ಥಗಿತವಾಗದ ಆಶಾ ಕಾರ್ಯಕರ್ತೆಯರ ಕೆಲಸ ಇದೀಗ ಸರ್ಕಾರದಿಂದಲೇ ಸ್ಥಗಿತವಾಗಿರುವುದು ಮಾತ್ರ ವಿಪರ್ಯಾಸ.

ಹೌದು! ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಜುಲೈ 10 ರಿಂದ ತಮ್ಮ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಅಲ್ಲದೆ ಇಂದು ಮುಖ್ಯಮಂತ್ರಿ ಮನೆ ಮುತ್ತಿಗೆಗೂ ಕರೆ ನೀಡಿದ್ದಾರೆ. ಆದರೆ, ಇಷ್ಟಾದರೂ ಯಾವೊಬ್ಬ ಸಚಿವರೂ ಇವರ ಮನವಿಯನ್ನು ಆಲಿಸಲು ಸಿದ್ಧರಿಲ್ಲ. ಇವರ ಬೇಡಿಕೆಯನ್ನು ಕೇಳಿಸಿಕೊಳ್ಳುವ ವ್ಯವಧಾನವಂತೂ ಸರ್ಕಾರಕ್ಕೆ ಮೊದಲೇ ಇಲ್ಲ.


ಇದನ್ನೂ ಓದಿ: ಆಶಾ ಕಾರ್ಯಕರ್ತರ ಬೇಡಿಕೆಗೆ ಸರ್ಕಾರ ಜಗ್ಗದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ: ಡಿಕೆಶಿ


ಹಾಗೆಂದು ಇದು ಕೊರೊನಾ ಸಂಕಷ್ಟ ಕಾಲದ ಹೋರಾಟ ಮಾತ್ರವಲ್ಲ. ಬದಲಿಗೆ, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ದಶಕಗಳ ಇತಿಹಾಸವಿದೆ. ಈ ಹಿಂದೆಯೂ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತೆಯರು ಹಲವು ಬಾರಿ ಬೀದಿಗಿಳಿದಿದ್ದರು. ಆದರ್‍ಲೆ ಅಧಿಕಾರದಲ್ಲಿದ್ದ ಯಾವ ಸರ್ಕಾರಗಳೂ ಇವರ ಬೇಡಿಕೆಯನ್ನು ಈಡೇರಿಸಿಲ್ಲ. ಇದಕ್ಕೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವೂ ಹೊರತಲ್ಲ.

ಆಶಾ ಕಾರ್ಯಕರ್ತೆಯರ ಹೋರಾಟ ಏತಕ್ಕಾಗಿ? ಇವರ ಬೇಡಿಕೆಯಾದರೂ ಏನು? ಕೊರೊನಾ ಕಾಲದಲ್ಲಿ ಇವರು ಸಂಧಿಸುತ್ತಿರುವ ಅಪಾಯವಾದರೂ ಎಂತಾದ್ದು? ಆಶಾ ಕಾರ್ಯಕರ್ತೆಯರೆಂದರೆ ಸರ್ಕಾರಕ್ಕೆ ಏಕಿಷ್ಟು ತಾತ್ಸಾರ?

‘ಆಶಾ’ರೋಧನ..!

ಆಶಾ ಅಂದರೆ ‘ಅಕ್ರೆಡಿಟೆಡ್ ಸೋಷಿಯಲ್ ಹೆಲ್ತ್ ಆಕ್ಟಿವಿಸ್ಟ್’ (ASHA). ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ 2005ರಲ್ಲಿ ಆಶಾ ಯೋಜನೆಗೆ ಹಸಿರು ನಿಶಾನೆ ಸಿಕ್ಕಿದೆ. ರಾಜ್ಯದಲ್ಲಿ 2008-09 ಸಾಲಿನಿಂದ ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಇಲಾಖೆಯಡಿ ತರಬೇತಿ ನೀಡಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ರಾಜ್ಯದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ ಒಬ್ಬರಂತೆ ಗ್ರಾಮೀಣ ಪ್ರದೇಶಗಳಲ್ಲಿ ಅಂದಾಜು 35 ಸಾವಿರಕ್ಕೂ ಹೆಚ್ಚು, ಪ್ರತಿ 2000 ಜನಸಂಖ್ಯೆಗೆ ಒಬ್ಬರಂತೆ, ನಗರ ಕೊಳಚೆ ಪ್ರದೇಶಗಳಲ್ಲಿ 3000ಕ್ಕೂ ಹೆಚ್ಚು, ಒಟ್ಟು ದೇಶದಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಆಶಾಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕದಲ್ಲಿ 25 ಸಾವಿರಕ್ಕೂ ಅಧಿಕ ಹೆಣ್ಣುಮಕ್ಕಳು ಆಶಾಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನಿಷ್ಠ ಎಂಟನೇ ತರಗತಿ ಓದಿರುವ ಆಯಾ ಗ್ರಾಮಗಳ ಹೆಣ್ಣು ಮಕ್ಕಳೇ ಈ ಆಶಾ ತಾರೆಯರು.

ಆದರೆ, ಈ ಹೆಣ್ಣುಮಕ್ಕಳನ್ನು ಸರ್ಕಾರ ತನ್ನ ಅನುಕೂಲಕ್ಕಾಗಿ ಬಳಸಿಕೊಂಡು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎನ್ನುವುದು ದೊಡ್ಡ ಆರೋಪ ಮತ್ತು ನೋವಿನ ಸಂಗತಿಯಾಗಿದೆ. ಆಕೆ ಕೂಡಾ ಮೂಕಳಂತೆ ಏನನ್ನೂ ಪ್ರಶ್ನಿಸದೆ ತನ್ನ ಪಾಡಿಗೆ ದುಡಿಯುತ್ತಾಳೆ. ಈ ಪಾಟಿ ದುಡಿದೂ ನೆಟ್ಟಗೆ ಕಾಸು ಕೊಡಲ್ಲ ಅಂದರೆ ಇದ್ಯಾವ ಸೀಮೆ ದುಡಿಮೆ? ಎನ್ನುವುದು ಈ ಜೀವಗಳ ಬೆನ್ನ ಹಿಂದೆ ನಿಂತ ಕಾರ್ಮಿಕ ಪರ ಸಂಘಟನೆಗಳ, ಸಾಮಾಜಿಕ ಚಿಂತಕರ ಆಕ್ರೋಶ.

ತಳಸಮುದಾಯಗಳ ಕುಟುಂಬಕ್ಕೆ ಸೇರಿದ 25-50 ವಯೋಮಾನದ ಹೆಣ್ಣು ಮಕ್ಕಳು ಬದುಕು ಕಟ್ಟಿಕೊಳ್ಳುವ ಕನಸು ಹೊತ್ತು ಆಶಾ ಕಾರ್ಯಕರ್ತೆಯರಾಗಿದ್ದಾರೆ. ವಿಧವೆಯರು, ಪತಿಯ ಮರಣಾ ನಂತರ ಮಕ್ಕಳ ಜವಾಬ್ದಾರಿ ಹೊತ್ತ ತಾಯಂದಿರು, 5-6 ಜನ ಸದಸ್ಯರಿರುವ ಸಂಸಾರದ ನೊಗ ಹೊತ್ತ ಮಹಿಳೆಯರು, ಗಂಡ ತೊರೆದು ಹೋದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ವೃತ್ತಿಯಲ್ಲಿದ್ದಾರೆ. ಅನೇಕ ಒಂಟಿ ಜೀವಿಗಳೂ ಆಶಾಗಳಾಗಿ ದುಡಿಯುತ್ತಿದ್ದಾರೆ.

ಈ ಪೈಕಿ ಬಹುತೇಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದವರು. ಬದುಕು ಈಗ ಬಲು ದುಬಾರಿ. ಮಕ್ಕಳ ಶಿಕ್ಷಣ, ಸಾರಿಗೆ, ಆರೋಗ್ಯ ವೆಚ್ಚ, ಬೆಲೆ ಏರಿಕೆಯಿಂದ ಜೀವನ ಸಾಗಿಸುವುದು ಸುಲಭವಲ್ಲ. ದಿನದ ಬದುಕು ಹಸನಾಗಿಸಲು ಹಲ್ಲುಮುಡಿ ಕಚ್ಚಿ ಹೆಣಗುತ್ತಿದ್ದಾರೆ.


ಇದನ್ನೂ ಓದಿ: ಕನಿಷ್ಠ 12,000 ವೇತನ ನೀಡಿ: ’ಆಶಾ’ ಕಾರ್ಯಕರ್ತರ ಪ್ರತಿಭಟನೆ


ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇಧಿತರನ್ನು ಆಶಾಗಳಾಗಿ ನೇಮಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲಾಗುತ್ತದೆ ಎನ್ನುವುದು ಸರ್ಕಾರದ ಘೋಷಣೆ. ಆದರೆ, ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲ ಎಂಬುದು ಮಾತ್ರ ವಾಸ್ತವ. ತಿಂಗಳಿಗೆ ರಾಜ್ಯ ಸರ್ಕಾರ ನೀಡುವ 4000 ಪ್ರೋತ್ಸಾಹ ಧನ ಹೊಟ್ಟೆ ತುಂಬಿಸೀತೇ? ಕಷ್ಟವಿದ್ದರೂ, ಸಂಸಾರಕ್ಕೆ ಆಧಾರವಾದೀತು, ಏನೋ ಒಂದು ಸರ್ಕಾರಿ ಕೆಲಸ. ಇಂದಲ್ಲ ನಾಳೆ ಹೊಟ್ಟೆ ತುಂಬುವಷ್ಟಾದರೂ ಸರ್ಕಾರ ವೇತನ ನೀಡಬಹುದು ಎಂಬ ನಿರೀಕ್ಷೆಯೊಂದಿಗೆ ದುಡಿಯುತ್ತಿದ್ದೇವೆ ಎಂಬುದು ಈ ತಾಯಂದಿರ ಅಳಲು.

ಆಶಾಗಳು ಪ್ರೋತ್ಸಾಹ ಧನ ಪಡೆಯುವುದೂ ಅಷ್ಟು ಸುಲಭವಲ್ಲ

ಆಶಾ ಕಾರ್ಯಕರ್ತೆಯರಿಗೆ ಕೇಂದ್ರದ ಪ್ರೋತ್ಸಾಹಕಧನ ವಿತರಿಸಲು ರಾಜ್ಯ ಸರ್ಕಾರ ಆಶಾ ಸಾಫ್ಟ್ ಎಂಬ ತಂತ್ರಾಂಶ ಅಳವಡಿಸಿದೆ. ನಿಗದಿತ ದಿನ ನಿಯತವಾಗಿ ಪ್ರೋತ್ಸಾಹಧನ ನೀಡುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂಬುದು ಅಧಿಕಾರಿಗಳ ಸಮರ್ಥನೆ.

ಆಶಾಗಳು ಮಾಡಿದ ಕೆಲಸದ ವಿವರಗಳನ್ನು ಈ ತಂತ್ರಾಂಶದಲ್ಲಿ ತುಂಬಬೇಕು. ಆದರೆ, ಅದನ್ನು ತುಂಬುವ ವ್ಯವಸ್ಥೆ ಅಸಮರ್ಪಕವಾಗಿದೆ. ಸಿಬ್ಬಂದಿ ಕೊರತೆ, ಅಸಹಕಾರ, ಮೂಲಸೌಕರ್ಯಗಳ ಕೊರತೆ, ಹಳ್ಳಿಗಳಲ್ಲಿ ವಿದ್ಯುತ್ ಕೊರತೆ, ತಂತ್ರಾಂಶದ ಲೋಪದೋಷಗಳು ಇವೆಲ್ಲ ತಾಪತ್ರಯಗಳು. ಇವುಗಳಿಂದ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಕ್ಕೆ ತಕ್ಕ ಪ್ರತಿಫಲ ದೊರಕದೆ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ ಆಶಾಗಳಿಗೆ ಮಾಸಿಕ ಕೇವಲ ಶೇ 40ರಿಂದ ಶೇ 70ರಷ್ಟು ಮಾತ್ರ ಪ್ರೋತ್ಸಾಹಧನ ದೊರೆಯುತ್ತಿದೆ. ಉದಾಹರಣೆಗೆ ಒಬ್ಬ ಆಶಾ ಮಾಸಿಕ 3000 ರೂನಷ್ಟು, ಮತ್ತೊಬ್ಬ ಆಶಾ 2500 ರೂ ನಷ್ಟು ಕೆಲಸ ಮಾಡಿರುವುದಕ್ಕೆ ಅಲ್ಲಿ ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ಸಹಾಯಕರು ದೃಢೀಕರಿಸಿರುತ್ತಾರೆ. ಆದರೆ ಅವರಿಗೆ 1500 ರಿಂದ 800 ರೂ ಮಾತ್ರ ಆಶಾ ಸಾಫ್ಟ್ನಲ್ಲಿ ಫೀಡ್ ಆಗುತ್ತದೆ. ಉಳಿದದ್ದನ್ನು ಫೀಡ್ ಮಾಡಿದಾಗ ಸಾಫ್ಟ್‌ವೇರ್ ನಿರಾಕರಿಸುತ್ತೆ, ಆದುದರಿಂದ ಉಳಿದ ಮಾಹಿತಿಯನ್ನು ಮುಂದಿನ ತಿಂಗಳಲ್ಲಿ ಫೀಡ್ ಮಾಡಲು ತಿಳಿಸಿರುತ್ತಾರೆ ಎಂದು ಹಲವರು ಆರೋಪಿಸುತ್ತಿದ್ದಾರೆ.

ಮುಂದಿನ ತಿಂಗಳಿನಲ್ಲಿ ಫೀಡ್ ಮಾಡಿದರೂ ಸಹಾ ಸಂಪೂರ್ಣ ಮಾಹಿತಿಯನ್ನು ಸಾಫ್ಟ್‌ವೇರ್ ಸ್ವೀಕರಿಸುವುದಿಲ್ಲ. ಬಹುತೇಕವಾಗಿ ಇದಕ್ಕೆ ಕಾರಣ ಎಂಸಿಟಿಎಸ್ ಅಪ್ಡೇಟ್ ಆಗದಿರುವುದು. ಎ.ಎನ್.ಎಮ್ ಅಥವಾ ಡೇಟಾ ಎಂಟ್ರಿ ಆಪರೇಟರ್‌ಗಳು ಎಂಸಿಟಿಎಸ್ ಅಪ್ಡೇಟ್ ಮಾಡುತ್ತಿಲ್ಲ. ಇದು ಅಪ್ಡೇಟ್? ಆಗದೆ ಆಶಾಗಳಿಗೆ ವೇತನವಿಲ್ಲ. ಇಲಾಖೆಯ ಅಧಿಕಾರಿಗಳು ಜಾರಿಗೊಳಿಸಿದ ಈ ಅವೈಜ್ಞಾನಿಕ-ಅತಾರ್ಕಿಕ ನೀತಿಯಿಂದಾಗಿ ರಾಜ್ಯದ ಸಾವಿರಾರು ಆಶಾ ಕಾರ್ಯಕರ್ತೆಯರು ಸಂಕಟ ಅನುಭವಿಸುವಂತಾಗಿದೆ. ಇದೇ ಕಾರಣಕ್ಕೆ ತಮಗೆ ಕನಿಷ್ಟ ವೇತನ ನಿಗದಿ ಮಾಡಿ ಎಂಬುದು ಅವರ ಅಳಲು. ಇದೇ ಕಾರಣಕ್ಕೆ ಸಾಕಷ್ಟು ಹೋರಾಟಗಳೂ ನಡೆದಿವೆ.

ಈ ಹಿಂದೆಯೂ ನಡೆದಿತ್ತು ಹೋರಾಟ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, (AIUTUC) ಪ್ರತಿ ಜಿಲ್ಲೆಯಲ್ಲಿ ಘಟಕ ಹೊಂದಿದೆ. ಆಶಾಗಳ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮಾವೇಶ, ಮೆರವಣಿಗೆ, ವಿಚಾರ ಸಂಕಿರಣಗಳ ಮೂಲಕ ಹೋರಾಟ, ಪ್ರತಿಭಟನೆ ಹಮ್ಮಿಕೊಳ್ಳುವ ಈ ಸಂಘಟನೆ ಈ ವರ್ಗದ ಆಶಾಕಿರಣ.

ಈ ಸಂಘಟನೆಯ ಮುಂದಾಳತ್ವದಲ್ಲಿ ಆಶಾ ಕಾರ್ಯಕರ್ತೆಯರ ಮಾಸಿಕ ವೇತನ ನಿಗದಿ ಮಾಡಬೇಕು, ಕೆಲಸವನ್ನು ಖಾಯಂಗೊಳಿಸಬೇಕು ಎಂದು 2011ರಿಂದಲೂ ದೊಡ್ದ ಪ್ರಮಾಣದ ಹೋರಾಟಗಳನ್ನು ಮಾಡುತ್ತಲೇ ಇವೆ.

2017ರಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಮಹಿಳೆಯರು ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಹೋರಾಟಕ್ಕೆ ಮುಂದಾಗಿದ್ದರು. ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ಬಂದಿದ್ದ ಮಹಿಳೆಯರು ಮೂರು ದಿನ ರಾಜಧಾನಿಯಲ್ಲೇ ಕಳೆದಿದ್ದರು. ಈ ಸಂದರ್ಭದಲ್ಲಿ ಆಶಾಗಳ ಪರವಾಗಿ ಸರ್ಕಾರ ಸ್ಪಂದಿಸದಿದ್ದರೂ ಇಲ್ಲಿನ ಸ್ಥಳೀಯ ಜನ ಮಾನವೀಯತೆಯಿಂದ ಸ್ಪಂದಿಸಿದ ರೀತಿಯನ್ನು ಭಾಗಶಃ ಯಾರೂ ಮರೆತಿರಲಿಕ್ಕಲ್ಲ.


ಇದನ್ನೂ ಓದಿ: ಬೆಂಗಳೂರು ತುಂಬಿಕೊಂಡ ಆಶಾ ಕಾರ್ಯಕರ್ತರು: ಎಲ್ಲೆಲ್ಲೂ ಗುಲಾಬಿ ಬಣ್ಣ.. ಸರ್ಕಾರಕ್ಕೆ ದಿಟ್ಟ ಮಹಿಳೆಯರ ಖಡಕ್‌ ಎಚ್ಚರಿಕೆ


ಇನ್ನೂ ಇದೇ ವರ್ಷ ಫೆಬ್ರವರಿಯಲ್ಲೂ ಆಶಾಗಳು ಹೋರಾಟಕ್ಕೆ ಮುಂದಾಗಿದ್ದರು. ಆದರೆ, ಸಿಎಎ ವಿರೋಧಿ ಹೋರಾಟ ಮತ್ತು ನಂತರ ಬಂದೆರಗಿದ ಕೊರೊನಾ ಕಂಟಕದಿಂದಾಗಿ ಅವರ ಹೋರಾಟಕ್ಕೆ ಸರ್ಕಾರ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ಮೊದಲ ಬಾರಿಗೆ ಆಶಾಗಳು ತಮ್ಮ ಕೆಲಸವನ್ನೇ ಸ್ಥಗಿತಗೊಳಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ಇಷ್ಟಕ್ಕೂ ಅವರ ಬೇಡಿಕೆಯಾದರೂ ಏನು ಗೊತ್ತಾ?

‘ಆಶಾ’ಗಳ ಬೇಡಿಕೆ ಏನು?

ಆಶಾ ಕಾರ್ಯಕರ್ತೆಯರನ್ನು ಖಾಯಂ ಸರ್ಕಾರಿ ಉದ್ಯೋಗಿಗಳೆಂದು ಪರಿಗಣಿಸಿಲ್ಲ ಮತ್ತು ಇವರಿಗೆ ನಿಗದಿತ ವೇತನ ಇಲ್ಲ. ಹೀಗಾಗಿ ತಮ್ಮನ್ನು ಸರ್ಕಾರಿ ಉದ್ಯೋಗಿಗಳು ಎಂದು ಖಾಯಂಗೊಳಿಸಬೇಕು, ಮಾಸಿಕ ಕನಿಷ್ಟ 12,000 ವೇತನ ನಿಗದಿ ಮಾಡಬೇಕು, ಇಎಸ್‌ಐ ಸೌಲಭ್ಯ ನೀಡಬೇಕು ಮತ್ತು ಕೊರೊನಾ ಕಾಲದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಆಶಾಗಳಿಗೆ ಕನಿಷ್ಟ ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಸೇರಿದಂತೆ ಅಗತ್ಯ ಪರಿಕರಗಳನ್ನು ನೀಡಿ ಎಂಬುದಷ್ಟೆ ಅವರ ಬೇಡಿಕೆ.

ಕೊರೊನಾ ಕಾಲದಲ್ಲೂ ಧೈರ್ಯವಾಗಿ ಕೆಲಸ ನಿರ್ವಹಿಸುತ್ತಿರುವ ಆಶಾಗಳು ಕನಿಷ್ಟ ಸೌಲಭ್ಯಗಳನ್ನು ಕೇಳುವುದರಲ್ಲಿ ತಪ್ಪೇನಿದೆ? ಅವರಿಗೆ ಸಿಗುವ ಅಲ್ಪ ಪ್ರೋತ್ಸಾಹ ಧನದಲ್ಲಿ ಮಾಸ್ಕ್, ಸ್ಯಾನಿಟೈಜರ್‌ಗಳಿಗೆ ಅವರೇ ಸ್ವಂತ ಹಣ ಖರ್ಚು ಮಾಡಬೇಕೆ? ಎಂದು ಹಲವಾರು ಕಾರ್ಮಿಕ ಸಂಘಟನೆಗಳು ಸರ್ಕಾರದ ವಿರುದ್ಧ ಕಿಡಿಕಾರುತ್ತಿವೆ. ಆದರೆ, ಆಳುವ ವರ್ಗ ಮಾತ್ರ ಆಶಾ ಕಾರ್ಯಕರ್ತೆಯರ ಎಲ್ಲಾ ಬೇಡಿಕೆಗಳ ವಿರುದ್ಧವೂ ಎಂದಿನಂತೆ ಜಾಣ ಮೌನ ವಹಿಸಿದೆ.

ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿ ಇಂದಿಗೆ ಒಂದು ವರ್ಷ ಕಳೆದಿದೆ. ಸಂಭ್ರಮದ ಆಚರಣೆಗಳ ಸಮಯದಲ್ಲಿ ನಾಗರಿಕರಿಗೆ ಏನಾದರೂ ಕೊಡುಗೆ ಕೊಡುವುದು ರೂಢಿ. ಈ ಹಿನ್ನೆಲೆಯಲ್ಲಾದರೂ ಆಶಾಗಳ ದಶಕಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಬಾರದೇಕೆ? ಆಶಾ ತಾಯಂದಿರ ಅಳಲನ್ನು ಆಲಿಸುತ್ತಾ ಅವರಿಗೆ ಸೂಕ್ತ, ಸಮಾಧಾನಕರ ಪರಿಹಾರ ದೊರಕಿಸಿಕೊಡಲಿ – ಆ ನಿಟ್ಟಿನಲ್ಲಾದರೂ ಪ್ರಸಕ್ತ ರಾಜ್ಯ ಸರ್ಕಾರ ಅವರ ಎಲ್ಲ ಬೇಡಿಕೆಗಳನ್ನು ಪೂರೈಸಿ ಅದನ್ನು ಸಾಧನೆಯಾಗಿ ತೋರಿಸಿಕೊಳ್ಳಲಿ.

ಬಿ ಎ ತೇಜಸ್ವಿ, ಯುವ ಪತ್ರಕರ್ತರು.


ಇದನ್ನೂ ಓದಿ: ಕೊಟ್ಟ ಮಾತಿಗೆ ತಪ್ಪಿದ ಜಗನ್ ಸರ್ಕಾರ: ಎಚ್ಚರಿಸಲೆಂದು ಆಶಾ ಕಾರ್ಯಕರ್ತೆಯರಿಂದ ‘ಚಲೋ ವಿಜಯವಾಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್‌…‌ಆಶಾ ಕಾರ್ಯಕರ್ತೆಯರ ಸಂಘವು ಸಿ.ಐ.ಟಿ
    ಯು. ನೇತೃತ್ವದಲ್ಲಿ ‌ಇಲ್ಲ. ಪತ್ರಿಕೆಯಲ್ಲಿ ಎ.ಐ.ಯು.ಟಿ.ಯು.ಸಿ. ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಹೋರಾಟ ಮಾಡುತ್ತಿದೆ ಅಂತ ಓದಿರುವ ನೆನಪು.

  2. ಸರ್ ನಿಮ್ಮ ವರದಿ ಆಶಾ ಕಾರ್ಯಕರ್ತೆಯರ ಬಗ್ಗೆ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ತುಂಬಾ ಚೆನ್ನಾಗಿ ಬರೆದಿರುವಿರಿ. ನಿಮಗೆ ತುಂಬಾ ಧನ್ಯವಾದಗಳು. ಆದರೆ ಆಶಾ ಕಾರ್ಯಕರ್ತೆಯರ ಹೋರಾಟವನ್ನು ಮುನ್ನಡೆಸುತ್ತಿರುವುದು “ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ”. AIUTUC (All India united trade union Center) ನೊಂದಿಗೆ ಸಂಯೋಜಿತಗೊಂಡು ಇದರ ನೇತೃತ್ವದಲ್ಲಿ ಇಡೀ ದೇಶಾದ್ಯಂತ ಹೋರಾಟವನ್ನು ಮುನ್ನಡೆಸುತ್ತಿದೆ. ಆದರೆ ಸಂಘಟನೆಯ ಹೆಸರು CITU ಎಂದು ತಪ್ಪಾಗಿ ವರದಿಯಾಗಿದೆ. AIUTUC ಸಂಘಟನೆಯ ಹೆಸರು ಬರಬೇಕು..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...