Homeಮುಖಪುಟಹ್ಯಾಕರ್ಸ್‍ಗಳ ಕಾಟ : ನಟಿಯರ ಗೋಳಾಟ

ಹ್ಯಾಕರ್ಸ್‍ಗಳ ಕಾಟ : ನಟಿಯರ ಗೋಳಾಟ

- Advertisement -
- Advertisement -

ಟೆಕ್ನಾಲಜಿ ಬೆಳೆದಂತೆಲ್ಲಾ, ಅದರ ಉಪಯೋಗ ಎಷ್ಟಿದೆಯೋ ಅಷ್ಟೇ ದುರುಪಯೋಗಗಳೂ ಆಗುತ್ತಿವೆ. ಇದರಲ್ಲಿ ಹ್ಯಾಕರ್ಸ್‍ಗಳ ಹುಚ್ಚಾಟ ಹೆಚ್ಚಾಗಿದೆ. ಯಾವುದೇ ರಾಜ್ಯದಲ್ಲೋ, ದೇಶದಲ್ಲೂ ಕುಳಿತು ಗುರುತು ಪರಿಚಯವೇ ಇಲ್ಲದವರ ಮಾಹಿತಿಗಳನ್ನು ಹ್ಯಾಕ್ ಮಾಡುವುದು ಸಾಮಾನ್ಯವೆಂಬಂತೆ ದಿನಂಪ್ರತಿ ಸುದ್ದಿಯಾಗುತ್ತಲೇ ಇವೆ. ಇತ್ತೀಚೆಗೆ ಭಾರತದ ಸಂಸತ್ತಿನಲ್ಲಿರುವ ಕೊರೊನಾ ಮಾಹಿತಿಯನ್ನೇ ಹ್ಯಾಕಿಂಗ್ ಪರಿಣಿತನೊಬ್ಬ ಹ್ಯಾಕ್ ಮಾಡಿದ್ದ. ಅದರಲ್ಲೂ ಸೆಲೆಬ್ರೆಟಿಗಳ ಸಾಮಾಜಿಕ ಜಾಲತಾಣಗಳ ಅಕೌಂಟ್‍ಗಳನ್ನು ಹ್ಯಾಕ್ ಮಾಡಿ ಕಾಟ ಕೊಡುವುದು ಹ್ಯಾಕರ್ಸ್‍ಗಳಿಗೆ ತಮಾಷೆಯ ಮಜಾ ಕೊಡಲಾರಂಭಿಸಿದೆ. ಸ್ಟಾರ್ ನಟ-ನಟಿಯರ ಖಾತೆಗಳನ್ನು ಹ್ಯಾಕ್ ಮಾಡಿ ಮತ್ತೊಬ್ಬರಿಗೆ ಮೆಸೇಜ್ ಕಳಿಸುವುದು, ಯಾವಾವುದೋ ಲಿಂಕ್ ಅಪ್‍ಲೊಡ್ ಮಾಡುವುದು ಎಲ್ಲವೂ ನಡೆಯುತ್ತಲೇ ಇವೆ.

ಮೊನ್ನೆಯಷ್ಟೇ ಕನ್ನಡದ ಇಬ್ಬರು ನಟಿಯರ ಇನ್‍ಸ್ಟಾಗ್ರಾಂ ಖಾತೆಯನ್ನು ಹ್ಯಾಕರ್ಸ್‍ಗಳು ಹ್ಯಾಕ್ ಮಾಡಿದ್ದಾರೆ. ಟಗರು ಪುಟ್ಟಿ ಎಂಥಲೇ ಕರೆಸಿಕೊಳ್ಳುವ ಮನ್ವಿತಾ ಅವರ ಇನ್‍ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿದ್ದ ಹ್ಯಾಕಿಂಗ್ ಸರದಾರರು ಅವರ ಖಾತೆಯಿಂದ ಬೇರೆ ಸ್ಟಾರ್ ಕಲಾವಿದರಿಗೆ ಮೆಸೇಜ್ ಕಳಿಸಿದ್ದಾರೆ. ಅಲ್ಲದೆ, ಅಕೌಂಟ್‍ನಲ್ಲಿ ಅವರ ಹೆಸರನ್ನೇ ಬೇರೆಂದು ಭಾಷೆಗೆ ಬದಲಿಸಿದ್ದಾರೆ. ಇದರಿಂದಾಗಿ ಈ ಖಾತೆ ನನ್ನದೇನಾ ಎಂದು ಗಾಭರಿಯಾಗಿದ್ದ ಮನ್ವಿತಾ ಅಂತೂ ಕಷ್ಟಪಟ್ಟು ತಮ್ಮ ಖಾತೆಯನ್ನು ಸರಿಪಡಿಸಿಕೊಂಡಿದ್ದಾರೆ. ಯಾವಾವುದೋ ಲಿಂಕ್‍ಗಳನ್ನೆಲ್ಲಾ ಅಪ್ ಲೋಡ್ ಮಾಡಲಾಗಿದ್ದು, ಯಾರೂ ನನ್ನ ಅಕೌಂಟ್‍ನಿಂದ ಬಂದಿರುವ ಲಿಂಕ್‍ಗಳನ್ನು ಓಪನ್ ಮಾಡಬೇಡಿ ಎಂದೂ ಹೇಳಿದ್ದಾರೆ.

ಇನ್ನು ಆಶಿಕಾ ರಂಗನಾಥ್ ಅವರದ್ದು ಇಂಥದ್ದೇ ಕತೆ, ಅನಗತ್ಯ ಲಿಂಕ್‍ಗಳು, ಚಾಟ್‍ಗಳು ಎಲ್ಲವನ್ನೂ ಅವರ ಖಾತೆಯಲ್ಲಿ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‍ಪರ್ಟ್ ಆಗಿರುವವರನ್ನು ಹುಡುಕಿ ತಮ್ಮ ಖಾತೆಯನ್ನು ಸರಿಪಡಿಸಿಕೊಂಡಿದ್ದಾರೆ. ಅಲ್ಲದೆ, ತಮ್ಮ ಖಾತೆಯಲ್ಲಿ ಕಾಪಿ ರೈಟ್ ಉಲ್ಲಂಘನೆಯಾಗಿದೆ ಎಂದೂ ಹೇಳಿದ್ದಾರೆ.


ಇದನ್ನು ಓದಿ: ಮೋಸದ ಪ್ರೇಮಕ್ಕೆ ಬಲಿಯಾದ ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್‍ವುಡ್ ನಟಿ ಚಂದನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...