Homeಚಳವಳಿಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ, ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ನನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧಿಸಿದ್ದು, ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಉನ್ನತ ಮೂಲಗಳು ಹೇಳಿವೆ.

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಅವರನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದು, “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಆಶೀಶ್‌ ಮಿಶ್ರಾ ಹೆಸರು ದಾಖಲಾದ ಐದು ದಿನಗಳ ಬಳಿಕ ಆತನನ್ನು ಬಂಧಿಸಲಾಗಿದೆ. ಕೊಲೆ ಆರೋಪಿಗಳನ್ನು ಸಾಮಾನ್ಯವಾಗಿ ತಕ್ಷಣ ಬಂಧಿಸಲಾಗುತ್ತದೆ. ಆದರೆ ಆಶೀಶ್‌ನ ತಂದೆ ಸಚಿವನಾದ ಕಾರಣಕ್ಕೆ ಇಷ್ಟು ದಿನವಾದರೂ ಬಂಧನವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಸುಪ್ರೀಂ ಕೋರ್ಟ್‌ ‘ಏಕೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲ’ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

ಆಶೀಶ್‌ ಮಿಶ್ರಾ

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಉತ್ನತ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಪ್ರಕರಣದಲ್ಲಿ ಸಾವನ್ನಪ್ಪಿದ್ದಾರೆ. “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿತ್ತು. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದರು.

“ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದರು.

ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಲವ್‌ಖುಷ್‌ ಹಾಗೂ ಆಶೀಶ್‌ ಪಾಂಡೆ ಎಂಬ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು. ಇದರ ನಡುವೆ ಪ್ರಕರಣದ ವಿಳಂಬದಿಂದಾಗಿ ಉತ್ತರ ಪ್ರದೇಶ ಸರ್ಕಾರ ತೀವ್ರ ಟೀಕೆಗೆ ಒಳಗಾಗಿತ್ತು. “ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಯಾವುದೇ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಾಕ್ಷಿ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದರು.

“ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡುವಾಗ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅವರು ಯಾರೇ ಆಗಿರಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿರಿ: ಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...