Homeಚಳವಳಿಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ, ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ನನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧಿಸಿದ್ದು, ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಉನ್ನತ ಮೂಲಗಳು ಹೇಳಿವೆ.

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಅವರನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದು, “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಆಶೀಶ್‌ ಮಿಶ್ರಾ ಹೆಸರು ದಾಖಲಾದ ಐದು ದಿನಗಳ ಬಳಿಕ ಆತನನ್ನು ಬಂಧಿಸಲಾಗಿದೆ. ಕೊಲೆ ಆರೋಪಿಗಳನ್ನು ಸಾಮಾನ್ಯವಾಗಿ ತಕ್ಷಣ ಬಂಧಿಸಲಾಗುತ್ತದೆ. ಆದರೆ ಆಶೀಶ್‌ನ ತಂದೆ ಸಚಿವನಾದ ಕಾರಣಕ್ಕೆ ಇಷ್ಟು ದಿನವಾದರೂ ಬಂಧನವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಸುಪ್ರೀಂ ಕೋರ್ಟ್‌ ‘ಏಕೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲ’ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

ಆಶೀಶ್‌ ಮಿಶ್ರಾ

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಉತ್ನತ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಪ್ರಕರಣದಲ್ಲಿ ಸಾವನ್ನಪ್ಪಿದ್ದಾರೆ. “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿತ್ತು. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದರು.

“ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದರು.

ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಲವ್‌ಖುಷ್‌ ಹಾಗೂ ಆಶೀಶ್‌ ಪಾಂಡೆ ಎಂಬ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು. ಇದರ ನಡುವೆ ಪ್ರಕರಣದ ವಿಳಂಬದಿಂದಾಗಿ ಉತ್ತರ ಪ್ರದೇಶ ಸರ್ಕಾರ ತೀವ್ರ ಟೀಕೆಗೆ ಒಳಗಾಗಿತ್ತು. “ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಯಾವುದೇ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಾಕ್ಷಿ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದರು.

“ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡುವಾಗ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅವರು ಯಾರೇ ಆಗಿರಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿರಿ: ಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...