Homeಚಳವಳಿಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ, ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ನನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧಿಸಿದ್ದು, ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಉನ್ನತ ಮೂಲಗಳು ಹೇಳಿವೆ.

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಅವರನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದು, “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಆಶೀಶ್‌ ಮಿಶ್ರಾ ಹೆಸರು ದಾಖಲಾದ ಐದು ದಿನಗಳ ಬಳಿಕ ಆತನನ್ನು ಬಂಧಿಸಲಾಗಿದೆ. ಕೊಲೆ ಆರೋಪಿಗಳನ್ನು ಸಾಮಾನ್ಯವಾಗಿ ತಕ್ಷಣ ಬಂಧಿಸಲಾಗುತ್ತದೆ. ಆದರೆ ಆಶೀಶ್‌ನ ತಂದೆ ಸಚಿವನಾದ ಕಾರಣಕ್ಕೆ ಇಷ್ಟು ದಿನವಾದರೂ ಬಂಧನವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಸುಪ್ರೀಂ ಕೋರ್ಟ್‌ ‘ಏಕೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲ’ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

ಆಶೀಶ್‌ ಮಿಶ್ರಾ

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಉತ್ನತ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಪ್ರಕರಣದಲ್ಲಿ ಸಾವನ್ನಪ್ಪಿದ್ದಾರೆ. “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿತ್ತು. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದರು.

“ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದರು.

ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಲವ್‌ಖುಷ್‌ ಹಾಗೂ ಆಶೀಶ್‌ ಪಾಂಡೆ ಎಂಬ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು. ಇದರ ನಡುವೆ ಪ್ರಕರಣದ ವಿಳಂಬದಿಂದಾಗಿ ಉತ್ತರ ಪ್ರದೇಶ ಸರ್ಕಾರ ತೀವ್ರ ಟೀಕೆಗೆ ಒಳಗಾಗಿತ್ತು. “ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಯಾವುದೇ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಾಕ್ಷಿ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದರು.

“ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡುವಾಗ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅವರು ಯಾರೇ ಆಗಿರಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿರಿ: ಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...