Homeಚಳವಳಿಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ, ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ನನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧಿಸಿದ್ದು, ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಉನ್ನತ ಮೂಲಗಳು ಹೇಳಿವೆ.

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಅವರನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದು, “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಆಶೀಶ್‌ ಮಿಶ್ರಾ ಹೆಸರು ದಾಖಲಾದ ಐದು ದಿನಗಳ ಬಳಿಕ ಆತನನ್ನು ಬಂಧಿಸಲಾಗಿದೆ. ಕೊಲೆ ಆರೋಪಿಗಳನ್ನು ಸಾಮಾನ್ಯವಾಗಿ ತಕ್ಷಣ ಬಂಧಿಸಲಾಗುತ್ತದೆ. ಆದರೆ ಆಶೀಶ್‌ನ ತಂದೆ ಸಚಿವನಾದ ಕಾರಣಕ್ಕೆ ಇಷ್ಟು ದಿನವಾದರೂ ಬಂಧನವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಸುಪ್ರೀಂ ಕೋರ್ಟ್‌ ‘ಏಕೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲ’ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

ಆಶೀಶ್‌ ಮಿಶ್ರಾ

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಉತ್ನತ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಪ್ರಕರಣದಲ್ಲಿ ಸಾವನ್ನಪ್ಪಿದ್ದಾರೆ. “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿತ್ತು. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದರು.

“ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದರು.

ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಲವ್‌ಖುಷ್‌ ಹಾಗೂ ಆಶೀಶ್‌ ಪಾಂಡೆ ಎಂಬ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು. ಇದರ ನಡುವೆ ಪ್ರಕರಣದ ವಿಳಂಬದಿಂದಾಗಿ ಉತ್ತರ ಪ್ರದೇಶ ಸರ್ಕಾರ ತೀವ್ರ ಟೀಕೆಗೆ ಒಳಗಾಗಿತ್ತು. “ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಯಾವುದೇ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಾಕ್ಷಿ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದರು.

“ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡುವಾಗ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅವರು ಯಾರೇ ಆಗಿರಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿರಿ: ಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...