Homeಚಳವಳಿಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ, ರೈತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ನನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧಿಸಿದ್ದು, ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಉನ್ನತ ಮೂಲಗಳು ಹೇಳಿವೆ.

- Advertisement -
- Advertisement -

ಉತ್ತರಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾ (ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ) ಅವರನ್ನು ಶನಿವಾರ 12 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದು, “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಆಶೀಶ್‌ ಮಿಶ್ರಾ ಹೆಸರು ದಾಖಲಾದ ಐದು ದಿನಗಳ ಬಳಿಕ ಆತನನ್ನು ಬಂಧಿಸಲಾಗಿದೆ. ಕೊಲೆ ಆರೋಪಿಗಳನ್ನು ಸಾಮಾನ್ಯವಾಗಿ ತಕ್ಷಣ ಬಂಧಿಸಲಾಗುತ್ತದೆ. ಆದರೆ ಆಶೀಶ್‌ನ ತಂದೆ ಸಚಿವನಾದ ಕಾರಣಕ್ಕೆ ಇಷ್ಟು ದಿನವಾದರೂ ಬಂಧನವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಸುಪ್ರೀಂ ಕೋರ್ಟ್‌ ‘ಏಕೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲ’ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

ಆಶೀಶ್‌ ಮಿಶ್ರಾ

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಉತ್ನತ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಪ್ರಕರಣದಲ್ಲಿ ಸಾವನ್ನಪ್ಪಿದ್ದಾರೆ. “ಉತ್ತರ ಪ್ರದೇಶ ಸರ್ಕಾರ ಸಾಕಷ್ಟು ಕೆಲಸ ಮಾಡಿಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿತ್ತು. “ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ನಾವು ತೃಪ್ತರಾಗಿಲ್ಲ. ಜವಾಬ್ದಾರಿಯುತ ಸರ್ಕಾರ ಹಾಗೂ ಪೊಲೀಸ್‌ ವ್ಯವಸ್ಥೆಯನ್ನು ನಾವು ನಿರೀಕ್ಷಿಸುತ್ತೇವೆ. ಬಂದೂಕನ್ನು ಬಳಸಿ ಕೊಲ್ಲಲಾಗಿದೆ ಎಂಬುದನ್ನು ಒಳಗೊಂಡಂತೆ ಈಗ ಕೇಳಿ ಬಂದಿರುವ ಆರೋಪಗಳು ತೀವ್ರ ಗಂಭೀರವಾಗಿವೆ” ಎಂದು ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಆತಂಕ ವ್ಯಕ್ತಪಡಿಸಿದ್ದರು.

“ಯಾವ ಸಂದೇಶವನ್ನು ನೀವು ಕಳುಹಿಸುತ್ತಿದ್ದೀರಿ? ಸಾಮಾನ್ಯ ಸಂದರ್ಭಗಳಲ್ಲಿ ಕೂಡ ಪೊಲೀಸರು ತಕ್ಷಣ ಹೋಗಿ ಆರೋಪಿಗಳನ್ನು ಬಂಧಿಸುವುದಿಲ್ಲ. ಇರಬೇಕಾದ ರೀತಿಯಲ್ಲಿ ಕೆಲಸಗಳು ಆಗುತ್ತಿಲ್ಲ. ಇದು ಕೇವಲ ಮಾತಿಗೆ ಸೀಮಿತವಾಗಿದೆ ಹೊರತು ಕ್ರಿಯೆಗಳಲ್ಲಿ ಕಂಡು ಬರುತ್ತಿಲ್ಲ” ಎಂದು ಸಿಜೆಐ ತೀಕ್ಷ್ಣವಾಗಿ ಖಂಡಿಸಿದ್ದರು.

ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೇಲೆ ಲವ್‌ಖುಷ್‌ ಹಾಗೂ ಆಶೀಶ್‌ ಪಾಂಡೆ ಎಂಬ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು. ಇದರ ನಡುವೆ ಪ್ರಕರಣದ ವಿಳಂಬದಿಂದಾಗಿ ಉತ್ತರ ಪ್ರದೇಶ ಸರ್ಕಾರ ತೀವ್ರ ಟೀಕೆಗೆ ಒಳಗಾಗಿತ್ತು. “ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಯಾವುದೇ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಾಕ್ಷಿ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದರು.

“ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡುವ ಭರವಸೆ ನೀಡುವಾಗ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅವರು ಯಾರೇ ಆಗಿರಲಿ ಕಾನೂನು ಕೈಗೆ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿರಿ: ಲಖಿಂಪುರ್‌‌ ಪ್ರಕರಣ ವಿಳಂಬಕ್ಕೆ ವಿರೋಧ ಪಕ್ಷಗಳನ್ನು ದೂರಿದ ಯುಪಿ ಎಡಿಜಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...