Homeಮುಖಪುಟಶ್ವೇತಪತ್ರದಲ್ಲಿ ಆದರ್ಶ್ ಹಗರಣ ಉಲ್ಲೇಖಿಸಿದ್ದಕ್ಕೆ ಹೆದರಿ ಕಾಂಗ್ರೆಸ್ ತೊರೆದ ಚವಾಣ್: ಶರದ್ ಪವಾರ್

ಶ್ವೇತಪತ್ರದಲ್ಲಿ ಆದರ್ಶ್ ಹಗರಣ ಉಲ್ಲೇಖಿಸಿದ್ದಕ್ಕೆ ಹೆದರಿ ಕಾಂಗ್ರೆಸ್ ತೊರೆದ ಚವಾಣ್: ಶರದ್ ಪವಾರ್

- Advertisement -
- Advertisement -

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಶ್ವೇತಪತ್ರದಲ್ಲಿ ಆದರ್ಶ್ ಹೌಸಿಂಗ್ ಸೊಸೈಟಿ ಹಗರಣವನ್ನು ಪ್ರಸ್ತಾಪಿಸಿದ್ದಕ್ಕೆ ಹೆದರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ ಎಂದು ಎನ್‌ಸಿಪಿ-ಶರದ್ಚಂದ್ರ ಪವಾರ್ ಮುಖ್ಯಸ್ಥ ಶರದ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

ಕಳೆದ ವಾರವಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಅಶೋಕ್ ಚವಾಣ್ ಈ ಆರೋಪವನ್ನು ಅಲ್ಲಗಳೆದಿದ್ದಾರೆ.

ಅಶೋಕ್ ಚವಾಣ್ ಆದರ್ಶ್ ಹೌಸಿಂಗ್ ಸೊಸೈಟಿ ಹಗರಣ ಪ್ರಕರಣದ ಆರೋಪಿಯಾಗಿದ್ದಾರೆ. ದಕ್ಷಿಣ ಮುಂಬೈನಲ್ಲಿದ್ದ ರಕ್ಷಣಾ ಸಚಿವಾಲಯದ ಒಡೆತನದ ಭೂಮಿಯಲ್ಲಿ ಯಾವುದೇ ಅನುಮತಿ ಪಡೆಯದೆ
31 ಅಂತಸ್ತಿನ ಐಷಾರಾಮಿ ಕಟ್ಟಡ ನಿರ್ಮಿಸಿದ ಆರೋಪ ಅವರ ಮೇಲಿದೆ. ಈ ಹಗರಣವು 2010ರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಚವಾಣ್ ರಾಜೀನಾಮೆ ನೀಡಲು ಕಾರಣವಾಗಿತ್ತು.

ಕೊಲ್ಲಾಪುರದಲ್ಲಿ, ಕಾಂಗ್ರೆಸ್‌ನಿಂದ ಚವಾಣ್ ನಿರ್ಗಮನದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪವಾರ್, ಈ ಬೆಳವಣಿಗೆ ಎಲ್ಲರಿಗೂ ಆಶ್ಚರ್ಯವಾಗಿದ್ದರೂ, ವೈಯಕ್ತಿಕವಾಗಿ ನನಗೆ ಆಶ್ಚರ್ಯವಾಗಿಲ್ಲ ಎಂದಿದ್ದಾರೆ.

“ಕೇಂದ್ರದ ಬಿಜೆಪಿ ಸರ್ಕಾರ ಕಳೆದ 10 ವರ್ಷಗಳ ತನ್ನ ಸಾಧನೆ ಮತ್ತು ವಿರೋಧ ಪಕ್ಷದ ಬಗ್ಗೆ ಅವರ ಅಭಿಪ್ರಾಯಗಳ ಕುರಿತು ಶ್ವೇತಪತ್ರ ಮಂಡಿಸಿತ್ತು. ಆ ಶ್ವೇತಪತ್ರದಲ್ಲಿ ಆದರ್ಶ್ ಹೌಸಿಂಗ್ ಸೊಸೈಟಿ ಮತ್ತು ಅಶೋಕ್ ಚವಾಣ್ ಅವರ ಉಲ್ಲೇಖವಿತ್ತು. ಇದು ಒಂದು ರೀತಿಯ ಬೆದರಿಕೆಯಾಗಿರಬಹುದು ಎಂದು ನಾವು ಊಹಿಸಿದ್ದೆವು. ಚವಾಣ್ ಅವರು ಕಾಂಗ್ರೆಸ್ ತೊರೆದಿರುವುದು ಆ ಬೆದರಿಕೆಯ ಪರಿಣಾಮವಾಗಿದೆ” ಎಂದು ಶರದ್ ಪವಾರ್ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಎನ್‌ಸಿಪಿ ವಿಲೀನವಿಲ್ಲ

ಕಾಂಗ್ರೆಸ್‌ನೊಂದಿಗೆ ಎನ್‌ಸಿಪಿ ವಿಲೀನದ ವರದಿಗಳನ್ನು ತಳ್ಳಿ ಹಾಕಿದ ಪವಾರ್, “ನಾವಿಬ್ಬರೂ (ಕಾಂಗ್ರೆಸ್ ಮತ್ತು ಎನ್‌ಸಿಪಿ) ಒಟ್ಟಿಗೆ ಕೆಲಸ ಮಾಡುತ್ತೇವೆ. ನಾವು, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಕಾಂಗ್ರೆಸ್ ಈಗ ಪ್ರತ್ಯೇಕವಾಗಿಲ್ಲ. ಹೆಚ್ಚಿನ ಸಮಯ ನಾವು ಒಟ್ಟಿಗೆ ಕುಳಿತು ಚರ್ಚಿಸುತ್ತೇವೆ. ಅದರ ಅರ್ಥ ವಿಲೀನ ಎಂದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಬ್ಯಾಂಕ್ ಖಾತೆಗಳಿಂದ ₹65 ಕೋಟಿ ಕಡಿತಗೊಳಿಸಲು ಐಟಿ ಇಲಾಖೆ ಸೂಚನೆ: ಅಜಯ್ ಮಾಕನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...