Homeಮುಖಪುಟನ್ಯಾಯಾಂಗದಲ್ಲಿ ಅತಿರೇಕದ ಭ್ರಷ್ಟಾಚಾರವಿದೆ: ಅಶೋಕ್ ಗೆಹ್ಲೋಟ್

ನ್ಯಾಯಾಂಗದಲ್ಲಿ ಅತಿರೇಕದ ಭ್ರಷ್ಟಾಚಾರವಿದೆ: ಅಶೋಕ್ ಗೆಹ್ಲೋಟ್

- Advertisement -
- Advertisement -

ನ್ಯಾಯಾಂಗದಲ್ಲಿ ಅತಿರೇಕದ ಭ್ರಷ್ಟಾಚಾರವಿದೆ ಎಂಬ ಹೇಳಿಕೆ ನನ್ನ ವೈಯಕ್ತಿಕ ಅಭಿಪ್ರಾಯವಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಗುರುವಾರ ಹೇಳಿದ್ದಾರೆ.

”ಕೆಲವು ವಕೀಲರು ತೀರ್ಪುಗಳನ್ನು ಬರೆಯುತ್ತಾರೆ ಎಂದು ಕೇಳಿದ್ದೇನೆ. ಅದಾದನಂತರ ಆ ತೀರ್ಪನ್ನು ನ್ಯಾಯಾಲಯಗಳು ಉಚ್ಚರಿಸುತ್ತವೆ ಎಂದು ಬುಧವಾರ ಗೆಹ್ಲೋಟ್ ಹೇಳಿದ್ದರು.

”ನ್ಯಾಯಾಂಗದಲ್ಲಿ ಏನಾಗುತ್ತಿದೆ? ನ್ಯಾಯಾಲಯಗಳ ಪರಿಸ್ಥಿತಿ ತುಂಬಾ ಗಂಭೀರವಾಗಿದೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಈ ಹೇಳಿಕೆ ರಾಜ್ಯದ ವಕೀಲರ ಸಂಘಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಜಸ್ಥಾನ ಹೈಕೋರ್ಟ್ ವಕೀಲರ ಸಂಘವು ಶುಕ್ರವಾರ ರಾಜ್ಯದ ಎಲ್ಲಾ ನ್ಯಾಯಾಲಯಗಳಾದ್ಯಂತ ಒಂದು ದಿನದ ಮುಷ್ಕರವನ್ನು ಘೋಷಿಸಿತ್ತು. ”ಗೆಹ್ಲೋಟ್ ಅವರು ‘ಸಾರ್ವಜನಿಕರನ್ನು ದಾರಿತಪ್ಪಿಸಲು’ ಹೇಳಿಕೆ ನೀಡಿದ್ದಾರೆ” ಎಂದು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ವಕೀಲರ ಅಸೋಸಿಯೇಷನ್ ಪತ್ರ ಬರೆದಿದೆ.

ಈ ಬಗ್ಗೆ ರಾಜಸ್ಥಾನ ಹೈಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಮಹೇಂದ್ರ ಶಾಂಡಿಲ್ಯ ಅವರು ಮಾಧ್ಯಮದವರ ಜೊತೆ ಮಾತನಾಡಿದ್ದು, ”ಗೆಹ್ಲೋಟ್ ಅವರ ಈ ಹೇಳಿಕೆ ದುರದೃಷ್ಟಕರ ಮತ್ತು ಮುಖ್ಯಮಂತ್ರಿ ಅವರ ಬಳಿ ಯಾವುದಾದರೂ ಸಾಕ್ಷ್ಯವಿದ್ದರೆ ಅದನ್ನು ಪ್ರಸ್ತುತಪಡಿಸಬೇಕು” ಎಂದು ಹೇಳಿದ್ದಾರೆ.

ಶಿವಚರಣ್ ಗುಪ್ತಾ ಎಂಬ ವಕೀಲರು ರಾಜಸ್ಥಾನ ಹೈಕೋರ್ಟ್‌ನ ಜೈಪುರ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದ್ದು, ಗೆಹ್ಲೋಟ್ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದಾರೆ.

”ಹಲವಾರು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಈ ಹಿಂದೆ ನ್ಯಾಯಾಂಗದಲ್ಲಿನ “ಭ್ರಷ್ಟಾಚಾರ” ಕುರಿತು ಮಾತನಾಡಿದ್ದಾರೆ ಮತ್ತು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಶುಕ್ರವಾರ, ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಯಾವಾಗ ಎಂಬುದನ್ನು ಹೇಳಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...