Homeಮುಖಪುಟಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಗೆಹ್ಲೋಟ್‌‌ ಕಾಂಗ್ರೆಸ್‌‌ನ ಮುಂದಿನ ಅಧ್ಯಕ್ಷರಾಗಲು ಸ್ಪರ್ಧಿಸುತ್ತಿರುವುದರಿಂದ, ಅದಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ಸುಳಿವು ನೀಡಿದ್ದರು

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌‌ನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಿದ್ದವಾಗುತ್ತಿರುವ ಅಶೋಕ್ ಗೆಹ್ಲೋಟ್ ಅವರು ತಮ್ಮ ಮುಖ್ಯಮಂತ್ರಿ  ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂದು ಪಕ್ಷದ ಕೆಲವು ಶಾಸಕರು ಹೇಳಿದ್ದಾರೆ. ಹೀಗಾಗಿ ಸಂಜೆ 7 ಗಂಟೆಗೆ ಆರಂಭವಾಗಬೇಕಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಭಾನುವಾರ ತಡವಾಗಿ ಪ್ರಾರಂಭವಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರು ಕಾಂಗ್ರೆಸ್‌‌ನ ಮುಂದಿನ ಅಧ್ಯಕ್ಷರಾಗಲು ಸ್ಪರ್ಧಿಸುತ್ತಿರುವುದರಿಂದ, ಅದಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸುಳಿವು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸಲು ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಇದಾಗಿ ಎರಡು ದಿನಗಳ ನಂತರ ಫಲಿತಾಂಶ ಪ್ರಕಟವಾಗಲಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಹ್ಲೋಟ್ ಮಾತ್ರವಲ್ಲದೆ, ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೂಡಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಅಕ್ಟೋಬರ್ 8 ರ ಸಂಜೆ 5 ಗಂಟೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

ಈ ನಡುವೆ ಪಕ್ಷವು ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನಿಯಮವನ್ನು ಅನುಸರಿಸುತ್ತದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು. ಹೀಗಾಗಿ ಅಶೋಕ್‌‌ ಗೆಹ್ಲೋಟ್ ಅವರು ತಮ್ಮ ಸ್ಥಾನವನ್ನು ತ್ಯಜಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು.

ತಾನು 40 ವರ್ಷಗಳಿಂದ ವಿಭಿನ್ನ ಸಾಂವಿಧಾನಿಕ ಹುದ್ದೆಗಳನ್ನು ಹೊಂದಿದ್ದು, ಈಗ ಹೊಸ ಪೀಳಿಗೆಗೆ ಅವಕಾಶ ಸಿಗಬೇಕು ಎಂದು ಗೆಹ್ಲೋಟ್‌ ಅವರು ಭಾನುವಾರ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಒಬ್ಬ ವ್ಯಕ್ತಿ ಇನ್ನೇನು ಹೆಚ್ಚು ಪಡೆಯಬೇಕು?. ಹೊಸ ಪೀಳಿಗೆಗೆ ಅವಕಾಶ ಸಿಗಬೇಕು ಎಂಬುದು ನನ್ನ ಮನಸ್ಸಿನಲ್ಲಿದೆ. ದೇಶಕ್ಕೆ ನಾಯಕತ್ವ ನೀಡಲು ಎಲ್ಲರೂ ಒಗ್ಗೂಡಬೇಕು” ಎಂದು ಗೆಹ್ಲೋಟ್ ಜೈಸಲ್ಮೇರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾನುವಾರದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅವಕಾಶ ನೀಡುವ ಒಂದು ಸಾಲಿನ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ

ಈ ನಡುವೆ ಭಾನುವಾರ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಗೋವಿಂದ್ ರಾಮ್ ಮೇಘವಾಲ್,“ಮುಖ್ಯಮಂತ್ರಿಯಾಗಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಗೆಹ್ಲೋಟ್ ಎರಡೂ ಪಾತ್ರಗಳನ್ನು ನಿರ್ವಹಿಸಬಹುದು. ಸಚಿನ್ ಪೈಲಟ್ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಸಹ ‘ಸೂಕ್ಷ್ಮ ವಿಷಯ’ವಾಗಿದೆ” ಎಂದು ಹೇಳಿದ್ದಾರೆ.

ಶಾಸಕರ ನಡುವೆ ಅಸಮಾಧಾನವಿದೆ ಎಂದು ಅವರು ಹೇಳಿದ್ದಾರೆ. “2020ರ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನಮಗೆ ಸಹಾಯ ಮಾಡಿದವರಲ್ಲಿ ಪಕ್ಷೇತರರು ಇದ್ದರು. ಆದ್ದರಿಂದ ನಾವೆಲ್ಲರೂ ಕುಳಿತು ಚರ್ಚಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

2020ರ ಆಗಸ್ಟ್‌ನಲ್ಲಿ, ಸಚಿನ್‌ ಪೈಲಟ್ ಕಾಂಗ್ರೆಸ್ ವಿರುದ್ಧ ದಂಗೆ ಎದ್ದು ರಾಜಸ್ಥಾನ ಸರ್ಕಾರವನ್ನು ರಾಜಕೀಯ ಬಿಕ್ಕಟ್ಟಿಗೆ ತಳ್ಳಿದ್ದರು. ಆದರೆ ಸಚಿನ್‌ ಪೈಲಟ್‌ನ ಕಳವಳಗಳನ್ನು ಪರಿಹರಿಸಲು ಪಕ್ಷವು ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಮತ್ತು ಅಹ್ಮದ್ ಪಟೇಲ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಇದರ ನಂತರ ಗೊಂದಲವನ್ನು ಪರಿಹರಿಸಲಾಗಿತ್ತು.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕಿಯರು ಬಡಿಸಿದ್ದಕ್ಕೆ ಬಿಸಿಯೂಟ ಎಸೆದ ಸವರ್ಣೀಯ ಅಡುಗೆಯವನ ಬಂಧನ

ಈ ಮಧ್ಯೆ, ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು, ಗೆಹ್ಲೋಟ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಮಾತುಕತೆ ನಡೆಯಲಿದೆ. 102 ಶಾಸಕರಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಇದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್‌ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...