Homeಮುಖಪುಟಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಗೆಹ್ಲೋಟ್‌‌ ಕಾಂಗ್ರೆಸ್‌‌ನ ಮುಂದಿನ ಅಧ್ಯಕ್ಷರಾಗಲು ಸ್ಪರ್ಧಿಸುತ್ತಿರುವುದರಿಂದ, ಅದಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ಸುಳಿವು ನೀಡಿದ್ದರು

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌‌ನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಿದ್ದವಾಗುತ್ತಿರುವ ಅಶೋಕ್ ಗೆಹ್ಲೋಟ್ ಅವರು ತಮ್ಮ ಮುಖ್ಯಮಂತ್ರಿ  ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂದು ಪಕ್ಷದ ಕೆಲವು ಶಾಸಕರು ಹೇಳಿದ್ದಾರೆ. ಹೀಗಾಗಿ ಸಂಜೆ 7 ಗಂಟೆಗೆ ಆರಂಭವಾಗಬೇಕಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಭಾನುವಾರ ತಡವಾಗಿ ಪ್ರಾರಂಭವಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರು ಕಾಂಗ್ರೆಸ್‌‌ನ ಮುಂದಿನ ಅಧ್ಯಕ್ಷರಾಗಲು ಸ್ಪರ್ಧಿಸುತ್ತಿರುವುದರಿಂದ, ಅದಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸುಳಿವು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿಯನ್ನು ನಿರ್ಧರಿಸಲು ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಇದಾಗಿ ಎರಡು ದಿನಗಳ ನಂತರ ಫಲಿತಾಂಶ ಪ್ರಕಟವಾಗಲಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಹ್ಲೋಟ್ ಮಾತ್ರವಲ್ಲದೆ, ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೂಡಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಅಕ್ಟೋಬರ್ 8 ರ ಸಂಜೆ 5 ಗಂಟೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

ಈ ನಡುವೆ ಪಕ್ಷವು ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನಿಯಮವನ್ನು ಅನುಸರಿಸುತ್ತದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದರು. ಹೀಗಾಗಿ ಅಶೋಕ್‌‌ ಗೆಹ್ಲೋಟ್ ಅವರು ತಮ್ಮ ಸ್ಥಾನವನ್ನು ತ್ಯಜಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು.

ತಾನು 40 ವರ್ಷಗಳಿಂದ ವಿಭಿನ್ನ ಸಾಂವಿಧಾನಿಕ ಹುದ್ದೆಗಳನ್ನು ಹೊಂದಿದ್ದು, ಈಗ ಹೊಸ ಪೀಳಿಗೆಗೆ ಅವಕಾಶ ಸಿಗಬೇಕು ಎಂದು ಗೆಹ್ಲೋಟ್‌ ಅವರು ಭಾನುವಾರ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಒಬ್ಬ ವ್ಯಕ್ತಿ ಇನ್ನೇನು ಹೆಚ್ಚು ಪಡೆಯಬೇಕು?. ಹೊಸ ಪೀಳಿಗೆಗೆ ಅವಕಾಶ ಸಿಗಬೇಕು ಎಂಬುದು ನನ್ನ ಮನಸ್ಸಿನಲ್ಲಿದೆ. ದೇಶಕ್ಕೆ ನಾಯಕತ್ವ ನೀಡಲು ಎಲ್ಲರೂ ಒಗ್ಗೂಡಬೇಕು” ಎಂದು ಗೆಹ್ಲೋಟ್ ಜೈಸಲ್ಮೇರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭಾನುವಾರದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಅವಕಾಶ ನೀಡುವ ಒಂದು ಸಾಲಿನ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ

ಈ ನಡುವೆ ಭಾನುವಾರ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಗೋವಿಂದ್ ರಾಮ್ ಮೇಘವಾಲ್,“ಮುಖ್ಯಮಂತ್ರಿಯಾಗಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಗೆಹ್ಲೋಟ್ ಎರಡೂ ಪಾತ್ರಗಳನ್ನು ನಿರ್ವಹಿಸಬಹುದು. ಸಚಿನ್ ಪೈಲಟ್ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಸಹ ‘ಸೂಕ್ಷ್ಮ ವಿಷಯ’ವಾಗಿದೆ” ಎಂದು ಹೇಳಿದ್ದಾರೆ.

ಶಾಸಕರ ನಡುವೆ ಅಸಮಾಧಾನವಿದೆ ಎಂದು ಅವರು ಹೇಳಿದ್ದಾರೆ. “2020ರ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನಮಗೆ ಸಹಾಯ ಮಾಡಿದವರಲ್ಲಿ ಪಕ್ಷೇತರರು ಇದ್ದರು. ಆದ್ದರಿಂದ ನಾವೆಲ್ಲರೂ ಕುಳಿತು ಚರ್ಚಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

2020ರ ಆಗಸ್ಟ್‌ನಲ್ಲಿ, ಸಚಿನ್‌ ಪೈಲಟ್ ಕಾಂಗ್ರೆಸ್ ವಿರುದ್ಧ ದಂಗೆ ಎದ್ದು ರಾಜಸ್ಥಾನ ಸರ್ಕಾರವನ್ನು ರಾಜಕೀಯ ಬಿಕ್ಕಟ್ಟಿಗೆ ತಳ್ಳಿದ್ದರು. ಆದರೆ ಸಚಿನ್‌ ಪೈಲಟ್‌ನ ಕಳವಳಗಳನ್ನು ಪರಿಹರಿಸಲು ಪಕ್ಷವು ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಮತ್ತು ಅಹ್ಮದ್ ಪಟೇಲ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಇದರ ನಂತರ ಗೊಂದಲವನ್ನು ಪರಿಹರಿಸಲಾಗಿತ್ತು.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕಿಯರು ಬಡಿಸಿದ್ದಕ್ಕೆ ಬಿಸಿಯೂಟ ಎಸೆದ ಸವರ್ಣೀಯ ಅಡುಗೆಯವನ ಬಂಧನ

ಈ ಮಧ್ಯೆ, ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು, ಗೆಹ್ಲೋಟ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಮಾತುಕತೆ ನಡೆಯಲಿದೆ. 102 ಶಾಸಕರಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಇದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್‌ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...