HomeUncategorizedಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

ಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

- Advertisement -
- Advertisement -

ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು 2009 ರಿಂದ 2013 ರವರೆಗೆ ಚುನಾವಣಾ ಆಯೋಗದ ವಿಶೇಷ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಅಶೋಕ್ ಅವರ ಕೆಲಸದ ಅವಧಿಯಲ್ಲಿ ಇತರರ ಮೇಲೆ ಪ್ರಭಾವ ಬೀರಿದ್ದರಾ..?, ತಮ್ಮ ಹುದ್ದೆಯನ್ನು ಬಳಸಿಕೊಂಡು ಬೇರೆ ಲಾಭ ಪಡೆಯಲು ಯತ್ನಿಸಿದ್ದರಾ..? ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಭಾರತ ಸರ್ಕಾರ, 11 ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಪತ್ರ ಬರೆದಿದೆ.

ಪ್ರಕರಣ ಹೊರಬರುತ್ತಿದ್ದಂತೆಯೇ ಅಶೋಕ್‌ ಲಾವಾಸರವರು ಕಳೆದ ಚುನಾವಣೆಯಲ್ಲಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತಾಡಿದ್ದಕ್ಕೆ ಈಗ ಶಿಕ್ಷೆ ಅನುಭವಿಸಬೇಕಾಗಿದೆ. ಮೋದಿ ಮತ್ತು ಶಾರನ್ನು ಎದುರಾಕಿಕೊಂಡ ಎಲ್ಲರಿಗೂ ಇದೇ ಗತಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಐಎಎಸ್ ಅಧಿಕಾರಿಯಾಗಿದ್ದ ಅಶೋಕ್ ಲಾವಾಸಾ, ಸೆಪ್ಟೆಂಬರ್ 2009 ರಿಂದ ಡಿಸೆಂಬರ್ 2013 ರವರೆಗೆ ಜೆಎಸ್ ಹೆಚ್ಚುವರಿ ಕಾರ್ಯದರ್ಶಿ / ವಿಶೇಷ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಕೆಲ ಕಂಪನಿಗಳು ಮತ್ತು ಸಹಾಯಕ ಕಂಪನಿಗಳಿಗೆ ಲಾಭವಾಗುವಂತೆ ಅನಗತ್ಯ ಪ್ರಭಾವ ಬೀರಲು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಅಶೋಕ್ ಲಾವಾಸಾ ಬಗ್ಗೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುವಂತೆ ಪಿ.ಎಸ್.ಯು ಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ತಿಳಿಸಿದೆ.

ಪಿ.ಎಸ್.ಯುನಲ್ಲಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಎನ್‌ಎಚ್‌ಪಿಸಿ ಲಿಮಿಟೆಡ್ ಅಥವಾ ಹಿಂದಿನ ರಾಷ್ಟ್ರೀಯ ಜಲವಿದ್ಯುತ್ ನಿಗಮ, ಆರ್‌ಇಸಿ ಲಿಮಿಟೆಡ್, ಗ್ರಾಮೀಣ ವಿದ್ಯುದ್ದೀಕರಣ ನಿಗಮ ಮತ್ತು ವಿದ್ಯುತ್ ಫೈನಾನ್ಸ್ ಕಾರ್ಪೊರೇಷನ್ ವಿಭಾಗಗಳು ಸೇರಿವೆ.

ಮುಖ್ಯವಾಗಿ ಮೋದಿ ಮತ್ತು ಅಮಿತ್‌ ಶಾರವರು ಲೋಕಸಭಾ ಚುನಾವಣೆಗೂ ಮೊದಲು ನಡೆದ ರ್‍ಯಾಲಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ದೂರುಗಳ ವಿಚಾರಣೆ ಸಂದರ್ಭದಲ್ಲಿ ಅಶೋಕ್‌ ಲಾವಾಸರವರು 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಅಪರಾಧಿಗಳು ಎಂದು ಅಭಿಪ್ರಾಯಪಟ್ಟರೆ ಉಳಿದ ಇಬ್ಬರು ಚುನಾವಣಾಧಿಕಾರಿಗಳು ಮೋದಿ ಮತ್ತು ಅಮಿತ್‌ ಶಾ ಪರವಾಗಿ ವಾದಿಸಿ ಅವರಿಗೆ ಕ್ಲಿನ್‌ಚಿಟ್‌ ನೀಡಿದ್ದರು. ಇದರಿಂದ ಕುಪಿತಗೊಂಡ ಅಶೋಕ್‌ ಲಾವಾಸ ತೀರ್ಪಿನಲ್ಲಿ ನನ್ನ ಅಲ್ಪಸಂಖ್ಯಾತ ಅಭಿಪ್ರಾಯವನ್ನು ದಾಖಲಿಸಬೇಕೆಂದು ಒತ್ತಾಯಿಸಿ ಸಭೆಗಳಿಂದ ದೂರವುಳಿದಿದ್ದರು. ಇದು ಮೋದಿ ಮತ್ತು ಅಮಿತ್‌ ಶಾ ರವರಿಗೆ ಸಾಕಷ್ಟು ಮುಜುಗರ ತಂದಿತ್ತು.

ಆ ಸೇಡನ್ನು ತೀರಿಸಿಕೊಳ್ಳಲು ಈಗ ಹಳೆಯ ಕೇಸುಗಳಲ್ಲಿ ಅಶೋಕ್‌ ಲಾವಾಸ ರವರ ಮೇಲೆ ಮೋದಿ ಮತ್ತು ಅಮಿತ್‌ ಶಾ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲದೇ.

ಅಲ್ಲದೇ ಲಾವಾಸರವರ ಪತ್ನಿ ನಾವೆಲ್‌ ಸಿಂಗ್ಹಾಲ್‌ ಲಾವಾಸರವರು ವಿರುದ್ಧ ಐಟಿ ಇಲಾಖೆಯು ನೋಟಿಸ್ ಜಾರಿ ಮಾಡಿದೆ. ಆಕೆಯು ಹಲವಾರು ಕಂಪನಿಗಳ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಮರ್ಪಕವಾಗಿ ಐಟಿ ರಿರ್ಟನ್ಸ್‌ ಸಲ್ಲಿಸಿಲ್ಲ ಎಂದು ಆರೋಪಿಸಿದೆ.

ಜೊತೆಗೆ ಲಾವಾಸರವರ ಸಹೋದರಿ ಶಕುಂತಲಾ ಲಾವಾಸರವರ ಮೇಲೆಯೂ ಐಟಿ ನೋಟಿಸ್‌ ನೀಡಿದೆ. ಲಾವಾಸರವರ ಪುತ್ರ ಅಬಿರ್‌ ಲಾವಾಸರವರು ತೊಡಗಿಸಿಕೊಂಡಿರುವ ಬುಕ್ಸ್ ಕಂಪನಿಗಳ ಮೇಲೆಯೂ ಐಟಿ ಇಲಾಖೆಯ ಕೆಂಗಣ್ಣು ಬಿದ್ದಿದೆ. 2009-10 ಸಾಲಿನ ಹಳೆಯ ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಿರುಕುಳ ಕೊಡಲು ಮುಂದಾಗಿದೆ. ಆದರೆ ನಾವು ಹೆದರುವುದಿಲ್ಲ ಏಕೆಂದರೆ ಎಲ್ಲಾ ವ್ಯವಹಾರಗಳನ್ನು ಕಾನೂನಾತ್ಮಕವಾಗಿಯೇ ಮಾಡಿದ್ದೇವೆ ಎಂದು ಲಾವಾಸ ಕುಟುಂಬ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾನೂನಾತ್ಮಕವಾಗಿ ಅಥವಾ ನ್ಯಾಯಯುತವಾಗಿ ಕೆಲಸ ಕಾರ್ಯ ನಿರ್ವಹಿಸುವ ಯಾವುದೇ ಅಧಿಕಾರಿಗಳಿಗೂ ಎಲ್ಲಾ ಸಕಾ೯ರಗಳೂ ಕೂಡ ಯಾವುದೇ ರೀತಿಯಲ್ಲಿ ಶಿಕ್ಷಿಸಲು ಹೊಂಚು ಹಾಕುತ್ತವೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...