HomeUncategorizedಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

ಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

- Advertisement -
- Advertisement -

ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು 2009 ರಿಂದ 2013 ರವರೆಗೆ ಚುನಾವಣಾ ಆಯೋಗದ ವಿಶೇಷ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಅಶೋಕ್ ಅವರ ಕೆಲಸದ ಅವಧಿಯಲ್ಲಿ ಇತರರ ಮೇಲೆ ಪ್ರಭಾವ ಬೀರಿದ್ದರಾ..?, ತಮ್ಮ ಹುದ್ದೆಯನ್ನು ಬಳಸಿಕೊಂಡು ಬೇರೆ ಲಾಭ ಪಡೆಯಲು ಯತ್ನಿಸಿದ್ದರಾ..? ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಭಾರತ ಸರ್ಕಾರ, 11 ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಪತ್ರ ಬರೆದಿದೆ.

ಪ್ರಕರಣ ಹೊರಬರುತ್ತಿದ್ದಂತೆಯೇ ಅಶೋಕ್‌ ಲಾವಾಸರವರು ಕಳೆದ ಚುನಾವಣೆಯಲ್ಲಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತಾಡಿದ್ದಕ್ಕೆ ಈಗ ಶಿಕ್ಷೆ ಅನುಭವಿಸಬೇಕಾಗಿದೆ. ಮೋದಿ ಮತ್ತು ಶಾರನ್ನು ಎದುರಾಕಿಕೊಂಡ ಎಲ್ಲರಿಗೂ ಇದೇ ಗತಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಐಎಎಸ್ ಅಧಿಕಾರಿಯಾಗಿದ್ದ ಅಶೋಕ್ ಲಾವಾಸಾ, ಸೆಪ್ಟೆಂಬರ್ 2009 ರಿಂದ ಡಿಸೆಂಬರ್ 2013 ರವರೆಗೆ ಜೆಎಸ್ ಹೆಚ್ಚುವರಿ ಕಾರ್ಯದರ್ಶಿ / ವಿಶೇಷ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಕೆಲ ಕಂಪನಿಗಳು ಮತ್ತು ಸಹಾಯಕ ಕಂಪನಿಗಳಿಗೆ ಲಾಭವಾಗುವಂತೆ ಅನಗತ್ಯ ಪ್ರಭಾವ ಬೀರಲು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಅಶೋಕ್ ಲಾವಾಸಾ ಬಗ್ಗೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುವಂತೆ ಪಿ.ಎಸ್.ಯು ಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ತಿಳಿಸಿದೆ.

ಪಿ.ಎಸ್.ಯುನಲ್ಲಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಎನ್‌ಎಚ್‌ಪಿಸಿ ಲಿಮಿಟೆಡ್ ಅಥವಾ ಹಿಂದಿನ ರಾಷ್ಟ್ರೀಯ ಜಲವಿದ್ಯುತ್ ನಿಗಮ, ಆರ್‌ಇಸಿ ಲಿಮಿಟೆಡ್, ಗ್ರಾಮೀಣ ವಿದ್ಯುದ್ದೀಕರಣ ನಿಗಮ ಮತ್ತು ವಿದ್ಯುತ್ ಫೈನಾನ್ಸ್ ಕಾರ್ಪೊರೇಷನ್ ವಿಭಾಗಗಳು ಸೇರಿವೆ.

ಮುಖ್ಯವಾಗಿ ಮೋದಿ ಮತ್ತು ಅಮಿತ್‌ ಶಾರವರು ಲೋಕಸಭಾ ಚುನಾವಣೆಗೂ ಮೊದಲು ನಡೆದ ರ್‍ಯಾಲಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ದೂರುಗಳ ವಿಚಾರಣೆ ಸಂದರ್ಭದಲ್ಲಿ ಅಶೋಕ್‌ ಲಾವಾಸರವರು 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಅಪರಾಧಿಗಳು ಎಂದು ಅಭಿಪ್ರಾಯಪಟ್ಟರೆ ಉಳಿದ ಇಬ್ಬರು ಚುನಾವಣಾಧಿಕಾರಿಗಳು ಮೋದಿ ಮತ್ತು ಅಮಿತ್‌ ಶಾ ಪರವಾಗಿ ವಾದಿಸಿ ಅವರಿಗೆ ಕ್ಲಿನ್‌ಚಿಟ್‌ ನೀಡಿದ್ದರು. ಇದರಿಂದ ಕುಪಿತಗೊಂಡ ಅಶೋಕ್‌ ಲಾವಾಸ ತೀರ್ಪಿನಲ್ಲಿ ನನ್ನ ಅಲ್ಪಸಂಖ್ಯಾತ ಅಭಿಪ್ರಾಯವನ್ನು ದಾಖಲಿಸಬೇಕೆಂದು ಒತ್ತಾಯಿಸಿ ಸಭೆಗಳಿಂದ ದೂರವುಳಿದಿದ್ದರು. ಇದು ಮೋದಿ ಮತ್ತು ಅಮಿತ್‌ ಶಾ ರವರಿಗೆ ಸಾಕಷ್ಟು ಮುಜುಗರ ತಂದಿತ್ತು.

ಆ ಸೇಡನ್ನು ತೀರಿಸಿಕೊಳ್ಳಲು ಈಗ ಹಳೆಯ ಕೇಸುಗಳಲ್ಲಿ ಅಶೋಕ್‌ ಲಾವಾಸ ರವರ ಮೇಲೆ ಮೋದಿ ಮತ್ತು ಅಮಿತ್‌ ಶಾ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲದೇ.

ಅಲ್ಲದೇ ಲಾವಾಸರವರ ಪತ್ನಿ ನಾವೆಲ್‌ ಸಿಂಗ್ಹಾಲ್‌ ಲಾವಾಸರವರು ವಿರುದ್ಧ ಐಟಿ ಇಲಾಖೆಯು ನೋಟಿಸ್ ಜಾರಿ ಮಾಡಿದೆ. ಆಕೆಯು ಹಲವಾರು ಕಂಪನಿಗಳ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಮರ್ಪಕವಾಗಿ ಐಟಿ ರಿರ್ಟನ್ಸ್‌ ಸಲ್ಲಿಸಿಲ್ಲ ಎಂದು ಆರೋಪಿಸಿದೆ.

ಜೊತೆಗೆ ಲಾವಾಸರವರ ಸಹೋದರಿ ಶಕುಂತಲಾ ಲಾವಾಸರವರ ಮೇಲೆಯೂ ಐಟಿ ನೋಟಿಸ್‌ ನೀಡಿದೆ. ಲಾವಾಸರವರ ಪುತ್ರ ಅಬಿರ್‌ ಲಾವಾಸರವರು ತೊಡಗಿಸಿಕೊಂಡಿರುವ ಬುಕ್ಸ್ ಕಂಪನಿಗಳ ಮೇಲೆಯೂ ಐಟಿ ಇಲಾಖೆಯ ಕೆಂಗಣ್ಣು ಬಿದ್ದಿದೆ. 2009-10 ಸಾಲಿನ ಹಳೆಯ ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಿರುಕುಳ ಕೊಡಲು ಮುಂದಾಗಿದೆ. ಆದರೆ ನಾವು ಹೆದರುವುದಿಲ್ಲ ಏಕೆಂದರೆ ಎಲ್ಲಾ ವ್ಯವಹಾರಗಳನ್ನು ಕಾನೂನಾತ್ಮಕವಾಗಿಯೇ ಮಾಡಿದ್ದೇವೆ ಎಂದು ಲಾವಾಸ ಕುಟುಂಬ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾನೂನಾತ್ಮಕವಾಗಿ ಅಥವಾ ನ್ಯಾಯಯುತವಾಗಿ ಕೆಲಸ ಕಾರ್ಯ ನಿರ್ವಹಿಸುವ ಯಾವುದೇ ಅಧಿಕಾರಿಗಳಿಗೂ ಎಲ್ಲಾ ಸಕಾ೯ರಗಳೂ ಕೂಡ ಯಾವುದೇ ರೀತಿಯಲ್ಲಿ ಶಿಕ್ಷಿಸಲು ಹೊಂಚು ಹಾಕುತ್ತವೆ.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...