HomeUncategorizedಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

ಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

- Advertisement -
- Advertisement -

ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು 2009 ರಿಂದ 2013 ರವರೆಗೆ ಚುನಾವಣಾ ಆಯೋಗದ ವಿಶೇಷ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಅಶೋಕ್ ಅವರ ಕೆಲಸದ ಅವಧಿಯಲ್ಲಿ ಇತರರ ಮೇಲೆ ಪ್ರಭಾವ ಬೀರಿದ್ದರಾ..?, ತಮ್ಮ ಹುದ್ದೆಯನ್ನು ಬಳಸಿಕೊಂಡು ಬೇರೆ ಲಾಭ ಪಡೆಯಲು ಯತ್ನಿಸಿದ್ದರಾ..? ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಭಾರತ ಸರ್ಕಾರ, 11 ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಪತ್ರ ಬರೆದಿದೆ.

ಪ್ರಕರಣ ಹೊರಬರುತ್ತಿದ್ದಂತೆಯೇ ಅಶೋಕ್‌ ಲಾವಾಸರವರು ಕಳೆದ ಚುನಾವಣೆಯಲ್ಲಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತಾಡಿದ್ದಕ್ಕೆ ಈಗ ಶಿಕ್ಷೆ ಅನುಭವಿಸಬೇಕಾಗಿದೆ. ಮೋದಿ ಮತ್ತು ಶಾರನ್ನು ಎದುರಾಕಿಕೊಂಡ ಎಲ್ಲರಿಗೂ ಇದೇ ಗತಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಐಎಎಸ್ ಅಧಿಕಾರಿಯಾಗಿದ್ದ ಅಶೋಕ್ ಲಾವಾಸಾ, ಸೆಪ್ಟೆಂಬರ್ 2009 ರಿಂದ ಡಿಸೆಂಬರ್ 2013 ರವರೆಗೆ ಜೆಎಸ್ ಹೆಚ್ಚುವರಿ ಕಾರ್ಯದರ್ಶಿ / ವಿಶೇಷ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಕೆಲ ಕಂಪನಿಗಳು ಮತ್ತು ಸಹಾಯಕ ಕಂಪನಿಗಳಿಗೆ ಲಾಭವಾಗುವಂತೆ ಅನಗತ್ಯ ಪ್ರಭಾವ ಬೀರಲು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಅಶೋಕ್ ಲಾವಾಸಾ ಬಗ್ಗೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುವಂತೆ ಪಿ.ಎಸ್.ಯು ಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ತಿಳಿಸಿದೆ.

ಪಿ.ಎಸ್.ಯುನಲ್ಲಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಎನ್‌ಎಚ್‌ಪಿಸಿ ಲಿಮಿಟೆಡ್ ಅಥವಾ ಹಿಂದಿನ ರಾಷ್ಟ್ರೀಯ ಜಲವಿದ್ಯುತ್ ನಿಗಮ, ಆರ್‌ಇಸಿ ಲಿಮಿಟೆಡ್, ಗ್ರಾಮೀಣ ವಿದ್ಯುದ್ದೀಕರಣ ನಿಗಮ ಮತ್ತು ವಿದ್ಯುತ್ ಫೈನಾನ್ಸ್ ಕಾರ್ಪೊರೇಷನ್ ವಿಭಾಗಗಳು ಸೇರಿವೆ.

ಮುಖ್ಯವಾಗಿ ಮೋದಿ ಮತ್ತು ಅಮಿತ್‌ ಶಾರವರು ಲೋಕಸಭಾ ಚುನಾವಣೆಗೂ ಮೊದಲು ನಡೆದ ರ್‍ಯಾಲಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ದೂರುಗಳ ವಿಚಾರಣೆ ಸಂದರ್ಭದಲ್ಲಿ ಅಶೋಕ್‌ ಲಾವಾಸರವರು 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಅಪರಾಧಿಗಳು ಎಂದು ಅಭಿಪ್ರಾಯಪಟ್ಟರೆ ಉಳಿದ ಇಬ್ಬರು ಚುನಾವಣಾಧಿಕಾರಿಗಳು ಮೋದಿ ಮತ್ತು ಅಮಿತ್‌ ಶಾ ಪರವಾಗಿ ವಾದಿಸಿ ಅವರಿಗೆ ಕ್ಲಿನ್‌ಚಿಟ್‌ ನೀಡಿದ್ದರು. ಇದರಿಂದ ಕುಪಿತಗೊಂಡ ಅಶೋಕ್‌ ಲಾವಾಸ ತೀರ್ಪಿನಲ್ಲಿ ನನ್ನ ಅಲ್ಪಸಂಖ್ಯಾತ ಅಭಿಪ್ರಾಯವನ್ನು ದಾಖಲಿಸಬೇಕೆಂದು ಒತ್ತಾಯಿಸಿ ಸಭೆಗಳಿಂದ ದೂರವುಳಿದಿದ್ದರು. ಇದು ಮೋದಿ ಮತ್ತು ಅಮಿತ್‌ ಶಾ ರವರಿಗೆ ಸಾಕಷ್ಟು ಮುಜುಗರ ತಂದಿತ್ತು.

ಆ ಸೇಡನ್ನು ತೀರಿಸಿಕೊಳ್ಳಲು ಈಗ ಹಳೆಯ ಕೇಸುಗಳಲ್ಲಿ ಅಶೋಕ್‌ ಲಾವಾಸ ರವರ ಮೇಲೆ ಮೋದಿ ಮತ್ತು ಅಮಿತ್‌ ಶಾ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲದೇ.

ಅಲ್ಲದೇ ಲಾವಾಸರವರ ಪತ್ನಿ ನಾವೆಲ್‌ ಸಿಂಗ್ಹಾಲ್‌ ಲಾವಾಸರವರು ವಿರುದ್ಧ ಐಟಿ ಇಲಾಖೆಯು ನೋಟಿಸ್ ಜಾರಿ ಮಾಡಿದೆ. ಆಕೆಯು ಹಲವಾರು ಕಂಪನಿಗಳ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಮರ್ಪಕವಾಗಿ ಐಟಿ ರಿರ್ಟನ್ಸ್‌ ಸಲ್ಲಿಸಿಲ್ಲ ಎಂದು ಆರೋಪಿಸಿದೆ.

ಜೊತೆಗೆ ಲಾವಾಸರವರ ಸಹೋದರಿ ಶಕುಂತಲಾ ಲಾವಾಸರವರ ಮೇಲೆಯೂ ಐಟಿ ನೋಟಿಸ್‌ ನೀಡಿದೆ. ಲಾವಾಸರವರ ಪುತ್ರ ಅಬಿರ್‌ ಲಾವಾಸರವರು ತೊಡಗಿಸಿಕೊಂಡಿರುವ ಬುಕ್ಸ್ ಕಂಪನಿಗಳ ಮೇಲೆಯೂ ಐಟಿ ಇಲಾಖೆಯ ಕೆಂಗಣ್ಣು ಬಿದ್ದಿದೆ. 2009-10 ಸಾಲಿನ ಹಳೆಯ ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಿರುಕುಳ ಕೊಡಲು ಮುಂದಾಗಿದೆ. ಆದರೆ ನಾವು ಹೆದರುವುದಿಲ್ಲ ಏಕೆಂದರೆ ಎಲ್ಲಾ ವ್ಯವಹಾರಗಳನ್ನು ಕಾನೂನಾತ್ಮಕವಾಗಿಯೇ ಮಾಡಿದ್ದೇವೆ ಎಂದು ಲಾವಾಸ ಕುಟುಂಬ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾನೂನಾತ್ಮಕವಾಗಿ ಅಥವಾ ನ್ಯಾಯಯುತವಾಗಿ ಕೆಲಸ ಕಾರ್ಯ ನಿರ್ವಹಿಸುವ ಯಾವುದೇ ಅಧಿಕಾರಿಗಳಿಗೂ ಎಲ್ಲಾ ಸಕಾ೯ರಗಳೂ ಕೂಡ ಯಾವುದೇ ರೀತಿಯಲ್ಲಿ ಶಿಕ್ಷಿಸಲು ಹೊಂಚು ಹಾಕುತ್ತವೆ.

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...